ಚಿಣ್ಣರಿಗಾಗಿ ಬಾಲಭವನದಲ್ಲಿ ಬೇಸಿಗೆ ಶಿಬಿರ
ಬೆಂಗಳೂರು ಏಪ್ರಿಲ್ 12: ಹಿಂದೆಲ್ಲಾ ಬೇಸಿಗೆ ರಜೆ ಅಂದ್ರೆ ಮಕ್ಕಳು ಅಜ್ಜಿ-ಅಜ್ಜನ ಮನೆ ಕಡೆ ಮುಖ ಮಾಡ್ತಿದ್ರು.. ಆದರೆ, ಬದಲಾದ ಕಾಲದಲ್ಲಿ ಮಕ್ಕಳಿಗಾಗಿ ಬೇಸಿಗೆ ಶಿಬಿರಗಳನ್ನು ಆಯೋಜಿಸಲಾಗುತ್ತದೆ. ಹಾಗೆ ಇಲ್ಲೊಂದು ಶಿಬಿರದಲ್ಲಿ ವಿದ್ಯಾರ್ಥಿಗಳು ಕಲಿಕೆಯ ಜೊತೆ ವಿವಿಧ ರೀತಿಯ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದಾರೆ.
ಅಲ್ಲದೆ ಸ್ನೇಹಿತರೊಂದಿಗೆ ಮಸ್ತ್ ಎಂಜಾಯ್ ಮಾಡುತ್ತಾರೆ.ಶಾಲಾ ಕಲಿಕೆಯಲ್ಲಿ ಹೈರಾಣಾಗಿದ್ದ ಮಕ್ಕಳು, ಈಗ ಬೇಸಿಗೆಯಲ್ಲಿ ಕಲಿಕೆಯೊಂದಿಗೆ ಬೇಸಿಗೆಯ ಮಜಾ ಅನುಭವಿಸ್ತಿದ್ದಾರೆ. ಸಂಗೀತ, ಯೋಗ, ಕರಾಟೆ, ಕರಕುಶಲಕಲೆ, ಜೇಡಿಮಣ್ಣಿನ ಕಲೆ, ತಬಲ, ಗಿಟಾರ್, ನೃತ್ಯ, ರಂಗತರಬೇತಿ ಒಳಗೊಂಡಂತೆ 8 ರಿಂದ 25 ಚಟುವಟಿಕೆಗಳಲ್ಲಿ ಮಕ್ಕಳು ಭಾಗವಹಿಸುವ ಅವಕಾಶವನ್ನ ಕಬ್ಬನ್ ಪಾರ್ಕ್ನಲ್ಲಿರೋ ಬಾಲಭವನದಲ್ಲಿ ಕಲ್ಪಿಸಲಾಗಿದೆ. ಏಪ್ರಿಲ್ 16 ರಿಂದ ಆರಂಭಗೊಂಡಿರುವ ಶಿಬಿರ ಮೇ 13 ರವರೆಗೆ ನಡೆಯಲಿದೆ.
ಈ ವಿಶೇಷ ಮಾದರಿಯ ಬೇಸಿಗೆ ಶಿಬಿರ ಬಾಲಭವನದ ಸ್ವಚ್ಚಂದ ಹಾಗೂ ಮಕ್ಕಳ ಸ್ನೇಹೀ ವಾತಾವರಣದಲ್ಲಿ ಆಯೋಜಿಸಲಾಗಿದ್ದು 5 ರಿಂದ 16 ವರ್ಷದ ಮಕ್ಕಳು ಇದರಲ್ಲಿ ಭಾಗವಹಿಸಬಹುದಾಗಿದೆ.

ಈ ಬೇಸಿಗೆ ಶಿಬಿರದಲ್ಲಿ ಕರಾಟೆ, ಯೋಗ, ಚಿತ್ರಕಲೆ, ಕರಕುಶ ಕಲೆ, ಜೇಡಿ ಮಣ್ಣಿನ ಕಲೆ, ಗಿಟಾರ್ ,ತಬಲ, ಕೀಬೋರ್ಡ್, ಸಮೂಹ ನೃತ್ಯ, ಸಮೂಹ ಗೀತೆ, ಜ್ಯೂವೆಲರಿ ಮೇಕಿಂಗ್, ಆರ್ಟ್ ವರ್ಕ್ ವಿತ್ ಮೆಹಂದಿ, ಕಸದಿಂದ ರಸ, ಯಕ್ಷಗಾನ, ಫರ್ ಡಾಲ್, ರೋಬೋಟಿಕ್ಸ್, ಎಂಬ್ರಾಯಿಡರಿ, ರಂಗ ತರಬೇತಿ, ಅಲ್ಯೂಮಿನಿಯಂ ಫಾಯಿಲ್ ವರ್ಕ್, ಮೆಟಲ್ ಎಂಬೋಸಿಂಗ್, ಬಾಟಿಕ್ - ಟೈ ಅಂಡ್ ಡೈ ಮತ್ತು ವಿಜ್ಞಾನ ಚಟುವಟಿಕೆಗಳು ಸೇರಿದಂತೆ ಹತ್ತು ಹಲವು ವಿಶೇಷ ಆಕರ್ಷಕ ಚಟುವಟಿಕೆಗಳನ್ನು ಈ ಬೇಸಿಗೇ ಶಿಬಿರದಲ್ಲಿ ಅಳವಡಿಸಿಕೊಂಡಿದ್ದೇವೆ ಎಂದು ಬಾಲ ಭವನದ ಕಾರ್ಯದರ್ಶಿ ಶ್ರೀಮತಿ ದಿವ್ಯಾ ನಾರಾಯಣಪ್ಪ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ 080-22864189 ಸಂಪರ್ಕಿಸಬಹುದು.
-
Bengaluru : ಬಾಲ ಭವನ ಬೇಸಿಗೆ ಶಿಬಿರ 2026 ; ಕೇವಲ 1000 ರೂ.ಗೆ 10 ಬಗೆಯ ಕೌಶಲ್ಯ ತರಬೇತಿ, ಇಂದೇ ಅರ್ಜಿ ಸಲ್ಲಿಸಿ -
Karnataka Weather: ಕಲಬುರಗಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ 39 ಡಿಗ್ರಿ ದಾಟಿದ ತಾಪಮಾನ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ












Click it and Unblock the Notifications