ರಮೇಶ್ ಜಾರಕಿಹೊಳಿ ಸೆಕ್ಸ್ ಸಿಡಿ ಪ್ರಕರಣ: ಸಹೋದರ ಬಾಲಚಂದ್ರ ಹೇಳಿದ್ದೇನು?
ಬೆಂಗಳೂರು, ಮಾರ್ಚ್ 3: ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರು ಯುವತಿ ಜೊತೆ ಇರುವ ಸೆಕ್ಸ್ ಸಿಡಿ ಬಿಡುಗಡೆಯಾಗಿದ್ದು, ಇದು ರಾಜ್ಯ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಯಾಗಿದೆ.
ವಿಪಕ್ಷ ಹಾಗೂ ಸಾರ್ವಜನಿಕ ವಿರೋಧ ಎದುರಿಸುವ ಮೊದಲೇ ಜಾರಕಿಹೊಳಿ ಅವರ ರಾಜೀನಾಮೆ ಪಡೆಯಬೇಕೆಂದು ಸಿಎಂ ಯಡಿಯೂರಪ್ಪ ಅವರಿಗೆ ಬಿಜೆಪಿಯಲ್ಲೇ ಒತ್ತಡ ಶುರುವಾಗಿದೆ.
ಈ ಕುರಿತು ರಮೇಶ್ ಜಾರಕಿಹೊಳಿ ಕಾಮಕೇಳಿ ಪುರಾಣದ ಬಗ್ಗೆ ಅವರ ಸಹೋದರ ಬಾಲಚಂದ್ರ ಜಾರಕಿಹೊಳಿ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ್ದು, "ಈ ಸಿಡಿ ಕುರಿತು ಸಿಐಡಿ ಅಥವಾ ಸಿಬಿಐ ತನಿಖೆಯಾಗಬೇಕು'' ಎಂದು ಒತ್ತಾಯಿಸಿದ್ದಾರೆ.

"ಅಲ್ಲದೇ ಇದರಲ್ಲಿ ರಾಜಕೀಯ ಷಡ್ಯಂತ್ರ ಅಡಗಿದೆ, ಇದು ಫೇಕ್ ವಿಡಿಯೋ ಅಥವಾ ನೈಜ ವಿಡಿಯೋನಾ ಅನ್ನುವುದು ಸೂಕ್ತ ತನಿಖೆ ಮಾಡಿದರೆ ಗೊತ್ತಾಗಲಿದೆ'' ಎಂದಿದ್ದಾರೆ.
"ಸಿಡಿ ಬಿಡುಗಡೆ ಮಾಡಿದವರ ವಿರುದ್ಧ 100 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹಾಕಲು ಚಿಂತನೆ ಮಾಡಿದ್ದೇವೆ. ವಕೀಲರೊಂದಿಗೆ ಮಾತುಕತೆ ನಡೆಸುತ್ತಿದ್ದೇವೆ'' ಎಂದು ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.

"ಈ ವಿಡಿಯೋ ರಷ್ಯಾ, ಸಿಂಗಾಪುರ್ ನಲ್ಲಿ ಅಪಲೋಡ್ ಅಗಿದೆ, ಇದರ ಹಿಂದೆ ರಾಜಕೀಯ ಪ್ರಭಾವಿಗಳಿದ್ದಾರೆ. ತನಿಖೆಯಾದರೆ ಓರಿಜಿನಲ್ ಅಥವಾ ಫೇಕ್ ಅನ್ನುವುದು ಗೊತ್ತಾಗಲಿದೆ. ನನಗೆ ಇರುವ ಮಾಹಿತಿ ಪ್ರಕಾರ ಇದು ಫೇಕ್ ವಿಡಿಯೋ'' ಎಂದು ಬಾಲಚಂದ್ರ ಜಾರಕಿಹೊಳಿ ಹೇಳಿದ್ದಾರೆ.
"ಸಹೋದರನನ್ನು ರಾಜಕೀಯವಾಗಿ ಕುಗ್ಗಿಸಲು ಈ ರೀತಿಯ ಬಲೆ ಹೆಣೆಯಲಾಗಿದೆ. ಇದೊಂದು ಫೇಕ್ ವಿಡಿಯೋ ಆಗಿದ್ದು, ಒಂದು ವೇಳೆ ಸಿಡಿ ನಿಜವಾಗಿದ್ದರೆ ನಾನೇ ಖುದ್ದಾಗಿ ರಾಜೀನಾಮೆ ನೀಡಲು ಹೇಳುತ್ತೇನೆ'' ಎಂದು ಸಚಿವ ರಮೇಶ್ ರಾಸಲೀಲೆ ಸಿಡಿ ಪ್ರಕರಣದ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ.
"ಈ ಹಿಂದೆ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಎಚ್.ವೈ ಮೇಟಿ ರಾಜೀನಾಮೆ ಕೊಡುವ ವೇಳೆ ಸಂತ್ರಸ್ಥ ಮಹಿಳೆ ದೂರು ನೀಡಿದ್ದರು. ಅದಕ್ಕೆ ಅವರು ರಾಜೀನಾಮೆ ಕೊಟ್ಟಿದ್ದರು. ಈಗ ರಮೇಶ್ ಜಾರಕಿಹೊಳಿ ಜೊತೆಗಿರುವ ಮಹಿಳೆ ಯಾರು ಅಂತಾನೇ ಗೊತ್ತಿಲ್ಲ" ಎಂದು ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.
"ರಮೇಶ್ ಜಾರಕಿಹೊಳಿ ಜೊತೆಗಿನ ಮಹಿಳೆ ವಿಡಿಯೋ ಫೇಕ್ ಆಗಿದೆ. ಹೀಗಾಗಿ ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡುವ ಅಗತ್ಯತೆ ಇಲ್ಲ. ಒಂದು ವೇಳೆ ಮುಂದೆ ಸಂತ್ರಸ್ಥ ಮಹಿಳೆ ಬಂದು ದೂರು ನೀಡಿದರೆ ರಾಜೀನಾಮೆ ಬಗ್ಗೆ ನೋಡೋಣ"ವೆಂದರು.
"ಆ ಮಹಿಳೆ ದೂರು ನೀಡದೆ, ಬರೀ ಯಾರೋ ಒಬ್ಬರು ಬಂದು ದೂರು ಕೊಟ್ಟರೆ ಹೇಗೆ? ಅದನ್ನು ದೂರು ಎಂತಲೂ ಪರಿಗಣಿಸಲು ಆಗುವುದಿಲ್ಲ. ಹೀಗಾಗಿ ನಾನಂತು ರಮೇಶ್ ಅವರಿಗೆ ರಾಜೀನಾಮೆ ಕೊಡಬೇಡಿ ಎಂದು ಹೇಳಿದ್ದೇನೆ. ಬುಧವಾರ ಮಧ್ಯಾಹ್ನ ಸಿಎಂ ಯಡಿಯೂರಪ್ಪ ಅವರನ್ನು ರಮೇಶ್ ಜಾರಕಿಹೊಳಿ ಭೇಟಿ ಮಾಡುತ್ತಾರೆ" ಎಂದರು.
"ಈ ವೀಡಿಯೋ ಹಿಂದೆ ಯಾರದ್ದೋ ಒಬ್ಬರ ಪ್ರಭಾವಿ ರಾಜಕಾರಣಿಯೊಬ್ಬರ ಕೈವಾಡವಿದೆ. ಆ ರಾಜಕಾರಣಿ ಬಿಜೆಪಿಯವರಲ್ಲ. ಬೇರೆ ಪಕ್ಷದ ರಾಜಕಾರಣಿಯಾಗಿದ್ದಾರೆ ಎಂದು ಸ್ಪೋಟಕ ಮಾಹಿತಿ ಹೊರ ಹಾಕಿದರು. ಹೀಗಾಗಿ, ಈ ಬಗ್ಗೆ ಸಮಗ್ರವಾಗಿ ತನಿಖೆ ಆಗಬೇಕು, ಸಿಎಂ ಕೂಡ ಈ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳುವುದಾಗಿ" ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications