BAMUL: ಪ್ರತಿ ಲೀಟರ್ ಹಾಲಿನ ಸಹಾಯಧನ ರೂ.1.50 ಇಳಿಸಿ ಆದೇಶ, ಕಾರಣವೇನು?
ಬೆಂಗಳೂರು,ಜೂನ್ 02: ರಾಜ್ಯದಲ್ಲಿ ಇನ್ನೇನು ಮಳೆಗಾಲ ಆರಂಭವಾಗಲಿದ್ದು, ರಾಸುಗಳುಗೆ ಸಮೃದ್ಧ ಆಹಾರ ಲಭ್ಯತೆ ಸಾಧ್ಯವಾಗಲಿದೆ. ಈ ಸಂಬಂಧ ಬೆಂಗಳೂರು ಜಿಲ್ಲಾ ಸಹಕಾರ ಹಾಲು ಒಕ್ಕೂಟ (BAMUL) ಹಾಲಿನ ಪ್ರೋತ್ಸಾಹ ಧನ ಇಳಿಕೆ ಮಾಡಿದ ಆದೇಶ ಹೊರಡಿಸಿದೆ.
ಈ ಹಿಂದೆ ಬೆಂಗಳೂರು ಜಿಲ್ಲಾ ಸಹಕಾರ ಹಾಲು ಒಕ್ಕೂಟ (BAMUL)ವು ಹಾಲಿನ ಪ್ರೋತ್ಸಾಹ ಧನ ಲೀಟರ್ಗೆ 1.50 ರೂಪಾಯಿ ದಷ್ಟು ಕಡಿತಗೊಳಿಸಿದೆ. ಈ ಹಿಂದೆ ಬಮೂಲ್ ಬೇಸಿಗೆ ಸಮಯದಲ್ಲಿ ಪ್ರತಿ ಲೀಟರ್ ಹಾಲಿಗೆ 2.85 ರೂಪಾಯಿ ವಿಶೇಷ ಪ್ರೋತ್ಸಾಹ ಧನ ಘೋಷಣೆ ಮಾಡಿತ್ತು.

ಅದಾದ ಬಳಿಕ ಏಪ್ರಿಲ್ 1ರಿಂದ ಮೇ 31 ರವರೆಗೆ ವಿಶೇಷ ಪ್ರೋತ್ಸಾಹ ಧನ ನೀಡಿದ ಆದೇಶ ಹೊರಡಿಸಿತ್ತು. ಕಾರಣ ಬೇಸಿಗೆ ಹಿನ್ನೆಲೆ ಹಸಿರು ಮೇವಿನ ಕೊರತೆ, ಹೈನು ಕಡಿಮೆಯಾಗುವ ಉದ್ದೇಶದಿಂದಗಿ ರೈತರಿಗೆ ನೆರವಾಗಿತ್ತು. ಇದೀಗ ಒಕ್ಕೂಟದ ವ್ಯಾಪ್ತಿಯ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿ ಹಸಿರು ಮೇವಿನ ಲಭ್ಯತೆ ಅಧಿಕವಾಗಿದೆ.
ಅಷ್ಟೇ ಅಲ್ಲದೇ ಎಲ್ಲೆಡೆ ಮಳೆ ಸುರಿಯುತ್ತಿರುವ ಕಾರಣ ರಾಸುಗಳಿಗೆ ಹಸಿರು ಮೇವಿನ ಸಮಸ್ಯೆ ಬಗೆಹರಿದಿದೆ. ಹಾಲಿನ ಉತ್ಪಾದನೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಈ ಪ್ರೋತ್ಸಾಹಧನವನ್ನು ಕಡಿತಗೊಳಿಸಲಾಗಿದೆ ಎಂದು ಬಮೂಲ್ ತನ್ನ ಆದೇಶದಲ್ಲಿ ತಿಳಿಸಿದೆ.
ಬೇಸಿಗೆ ಆರಂಭಿಕ ಎರಡು ತಿಂಗಳಲ್ಲಿ ಪ್ರತಿದಿನ ಬಮೂಲ್ ವ್ಯಾಪ್ತಿಯಲ್ಲಿ ಸುಮಾರು 13 ಲಕ್ಷ ಲೀಟರ್ ಹಾಲು ಉತ್ಪಾದನೆ ಆಗುತ್ತಿತ್ತು ಹಸಿರು ಮೇವಿನ ಕೊರತೆ ಉಂಟಾಗಿತ್ತು. ಬೇಸಿಗೆ ಅಂತ್ಯಕ್ಕೆ ಮಳೆ ಹೆಚ್ಚಾಗಿದೆ. ಇನ್ನೇನು ಮಳೆಗಾಲ ಆರಂಭವಾಗುತ್ತಿದೆ. ಸದ್ಯ ಹಸಿರು ಮೇವಿನ ಲಭ್ಯತೆ ಹೆಚ್ಚಾಗಿದ್ದು, ಮೇವಿನ ಸಮಸ್ಯೆ ಬಗೆಹರಿದಿದೆ.
ಈ ಮೇಲಿನ ಎಲ್ಲ ಕಾರಣಗಳಿಂದ ಇದೀಗ ಹಾಲು ಉತ್ಪಾದನೆ 16 ಲಕ್ಷ ಲೀಟರ್ಗೆ ತಲುಪಿದೆ. ಈ ಮೂಲಕ ದಿನದಲ್ಲಿ ಸುಮಾರು 2.50 ಲಕ್ಷ ಲೀಟರ್ ಹಾಲು ಉತ್ಪಾದನೆ ಏರಿಕೆ ಅಗಿದೆ. ಹೀಗಾಗಿ ಜಿಲ್ಲಾ ಹಾಲು ಒಕ್ಕೂಟ ಲೀಟರ್ಗೆ 1.50 ರೂ. ಪ್ರೋತ್ಸಾಹ ಧನವನ್ನು ಕಡಿತಗೊಳಿಸಿ ಆದೇಶಿಸಿದೆ.
-
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಉನ್ನತ ಶಿಕ್ಷಣಕ್ಕೆ ಭಾರತದ ಯಾವ ನಗರ ಬೆಸ್ಟ್? QS ರ್ಯಾಂಕಿಂಗ್ ಪಟ್ಟಿಯಲ್ಲಿದೆ ಬೆಂಗಳೂರು ಸೇರಿದಂತೆ 4 ನಗರಗಳ ಹೆಸರು -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಯುದ್ಧದ ಬಿಸಿ: ಬೆಂಗಳೂರಿಗೆ ಅರಬ್ ರಾಷ್ಟ್ರಗಳ ವಿಮಾನ ಸಂಚಾರ ಕಡಿತ; ರಾಜ್ಯ ಟ್ರಾವೆಲ್ಸ್ ಮಾಲೀಕರಲ್ಲಿ ಆತಂಕ -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ












Click it and Unblock the Notifications