ಈದ್ ಮಿಲಾದ್ ಪ್ರಯುಕ್ತ ಮದ್ಯ ಮಾರಾಟ ನಿಷೇಧ
ಮುಸ್ಲಿಂ ಬಾಂಧವರ ಪವಿತ್ರ ಹಬ್ಬ ಈದ್ ಮಿಲಾದ್ ಪ್ರಯುಕ್ತ ಮಂಗಳವಾರ (ಡಿಸೆಂಬರ್ 13) ದಂದು ಬೆಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧ ಹೇರಲಾಗಿದೆ
ಬೆಂಗಳೂರು, ಡಿಸೆಂಬರ್ 13: ಮುಸ್ಲಿಂ ಬಾಂಧವರ ಪವಿತ್ರ ಹಬ್ಬ ಈದ್ ಮಿಲಾದ್ ಪ್ರಯುಕ್ತ ಮಂಗಳವಾರ (ಡಿಸೆಂಬರ್ 13) ದಂದು ಬೆಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧ ಹೇರಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಎನ್ ಎಸ್ ಮೇಘರಿಕ್ ಅವರು ಸೋಮವಾರ ಸಂಜೆ ತಿಳಿಸಿದ್ದಾರೆ.
ಡಿಸೆಂಬರ್ 13ರಂದು ಬೆಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯ, ಪೂರ್ವ ವಿಭಾಗದ ಕೆ.ಜಿ.ಹಳ್ಳಿ, ಹೆಣ್ಣೂರು, ಡಿ.ಜೆ.ಹಳ್ಳಿ, ಪುಲಿಕೇಶಿನಗರ, ಶಿವಾಜಿನಗರ, ಕಮರ್ಷಿಯಲ್ಸ್ಟ್ರೀಟ್ ಮತ್ತು ಭಾರತೀನಗರ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಈದ್ ಮಿಲಾದ್ ಹಬ್ಬದ ಪ್ರಯುಕ್ತ ಮಧ್ಯಾಹ್ನ 1-00 ಗಂಟೆಗೆ ಟ್ಯಾನರಿ ರಸ್ತೆಯಲ್ಲಿ ಮೆರವಣಿಗೆಯು ಪ್ರಾರಂಭವಾಗಿ ಸಂಜೆ ಸುಮಾರು 4-00 ಗಂಟೆಗೆ ಬಂಬೂಬಜಾರ್ ಬಳಿ ಇರುವ ಸುಲ್ತಾನ್ ಗುಂಟಾ ಮೈದಾನದಲ್ಲಿ ಬಂದು ಸೇರಲಿದೆ. [ಈದ್ ಮಿಲಾದ್ : ಡಿಸೆಂಬರ್ 13ರಂದು ಸರಕಾರಿ ರಜಾ]

ಈ ಕಾರ್ಯಕ್ರಮಕ್ಕೆ ನಗರದ ನಾನಾ ಕಡೆಗಳಿಂದ ಮುಸ್ಲಿಂ ಬಾಂಧವರು ಬಂದು ಸೇರಿ ಈದ್ ಮಿಲಾದ್ ಹಬ್ಬದ ಪ್ರಾರ್ಥನೆ ನಡೆಸುವರು. ಈ ಸಂದರ್ಭದಲ್ಲಿ ಹಬ್ಬದ ಆಚರಣೆ ಹಾಗೂ ಮೆರವಣಿಗೆ ಸಮಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಮುನ್ನೆಚ್ಚರಿಕಾ ಕ್ರಮವಾಗಿ ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ.
ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಭಾರತೀಯ ದಂಡ ಪ್ರಕ್ರಿಯ ಸಂಹಿತೆಯ ಕಲಂ. 144 ರ ಉಪ ಕಲಂ (1) ಮತ್ತು (3)ರ ಅನ್ವಯ ದಿನಾಂಕ: 13-12-2016 ರಂದು ಬೆಳಿಗ್ಗೆ 6-00 ಗಂಟೆಯಿಂದ ರಾತ್ರಿ 11-00 ಗಂಟೆಯವರೆಗೆ ಮೇಲ್ಕಂಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಎಲ್ಲಾ ರೀತಿಯ ಬಾರ್, ವೈನ್ ಶಾಪ್, ಪಬ್ ಹಾಗೂ ಎಲ್ಲಾ ರೀತಿಯ ಮದ್ಯ ಮಾರಾಟ ಮಾಡುವ ಅಂಗಡಿಗಳನ್ನು ಮುಚ್ಚಲು ಹಾಗೂ ಮದ್ಯ ಮಾರಾಟವನ್ನು ಮಾಡದಿರಲು ನಿಷೇದಾಜ್ಞೆ ಹೊರಡಿಸಲಾಗಿದೆ. ಮಿಲಿಟರಿ ಕ್ಯಾಂಟೀನ್, ಕ್ಲಬ್ ಹಾಗೂ ಸ್ಟಾರ್ ಹೋಟೆಲ್ ಗಳಿಗೆ ವಿನಾಯಿತಿ ನೀಡಲಾಗಿದೆ. (ಒನ್ಇಂಡಿಯಾ ಸುದ್ದಿ)
-
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications