ಕನ್ನಡ ಮಾಧ್ಯಮ ಶಾಲೆ ವಿದ್ಯಾರ್ಥಿ, ಪೋಷಕರ ಗಮನಕ್ಕೆ
ಬೆಂಗಳೂರು, ಏಪ್ರಿಲ್ 27: ಕರ್ನಾಟಕದಲ್ಲಿ ಹೆಚ್ಚಿನ ಮಕ್ಕಳು ಕನ್ನಡ ಮಾಧ್ಯಮದಲ್ಲೇ ಓದುತ್ತಿದ್ದಾರೆ. ಅದರಲ್ಲೂ ಹೆಚ್ಚಿನವರು ಸರಕಾರೀ ಕನ್ನಡ ಮಾಧ್ಯಮ ಶಾಲೆಗಳಲ್ಲೇ ಓದುತ್ತಿದ್ದಾರೆ. ಗುಣಮಟ್ಟದ ಕಲಿಕೆ ಸಾಧ್ಯವಾಗಿಸಲು ಏನು ಮಾಡಬೇಕು? ಎಂದು ಪ್ರಶ್ನಿಸುವ ಪೋಷಕರು ಹಾಗೂ ಕನ್ನಡ ಮಾಧ್ಯಮ ಖಾಸಗಿ ಶಾಲೆಗಳ ಆಡಳಿತ ಮಂಡಳಿ ನಡುವೆ ಸಂವಾದ ಕಾರ್ಯಕ್ರಮ ಏರ್ಪಡಿಸಲಾಗಿದೆ.
ಎಲ್ಲಾ ಸರಕಾರೀ ಶಾಲೆಗಳಲ್ಲಿ ಗುಣಮಟ್ಟದ ಕಲಿಕೆ ನೀಡಲಾಗುತ್ತಿಲ್ಲ ಎಂಬ ಮಾತು ಇದ್ದರೂ, ಇದೊಂದು ಬಗೆಹರಿಸಲಾಗದ ಸಮಸ್ಯೆಯೇನಲ್ಲ. ಆದರೆ, ಈ ಸಮಸ್ಯೆಯು ಕನ್ನಡ ಮಾಧ್ಯಮದಲ್ಲಿ ತಮ್ಮ ಮಕ್ಕಳನ್ನು ಓದಿಸುತ್ತಿರುವ, ಓದಿಸಬೇಕೆಂದಿರುವ ಕೆಲವೇ ಕೆಲವು ಸಾಮಾನ್ಯ ಪೋಷಕರಿಂದ ಸರಿಪಡಿಸಲಾಗುವಂತದ್ದಲ್ಲ.

ತಾಯ್ನುಡಿಯಲ್ಲಿ ಕಲಿಕೆಯು ಮಹತ್ವದ್ದು ಎಂಬುದನ್ನರಿತು, ತಮ್ಮ ಮಗುವನ್ನು ಖಾಸಗಿ ಕನ್ನಡ ಮಾಧ್ಯಮ ಶಾಲೆಯಲ್ಲಿ ಓದಿಸುತ್ತಿರುವ ಸಾಮಾನ್ಯ ಪೋಷಕರು ಹಲವರಿದ್ದಾರೆ. ಅಂತಹ ಪೋಷಕರು "ತನ್ನ ಮಗುವಿನ ಶಾಲೆಯಲ್ಲಿ ಗುಣಮಟ್ಟದ ಕಲಿಕೆ ಸಾಧ್ಯವಾಗುವಂತೆ ಏನು ಮಾಡಬಹುದು?" ಅನ್ನುವ ಪ್ರಶ್ನೆ ಎತ್ತಿಕೊಂಡರೆ, ಪೋಷಕರು ಮತ್ತು ಶಾಲಾ ಆಡಳಿತ ಮಂಡಳಿಯ ನಡುವೆ ಸಂವಾದ, ಚರ್ಚೆ ಮತ್ತು ಕೂಡಿ ಕೆಲಸ ಮಾಡುವ ಹೊಸತೊಂದು ಮಾದರಿ ನಮ್ಮ ಮುಂದೆ ಕಾಣುತ್ತದೆ.
ಈ ಮಾದರಿಯ ಮೊದಲನೇ ಹೆಜ್ಜೆಯೇ ಮೇ ಒಂದರಂದು ಬಿ.ಎಂ.ಶ್ರೀ ಪ್ರತಿಷ್ಠಾನದಲ್ಲಿ ಹಮ್ಮಿಕೊಳ್ಳಲಾಗಿರುವ "ಪೋಷಕರು ಮತ್ತು ಖಾಸಗಿ ಕನ್ನಡ ಮಾಧ್ಯಮ ಶಾಲೆಗಳ ಆಡಳಿತ ವರ್ಗದ ನಡುವೆ ಸಂವಾದ" ಕಾರ್ಯಕ್ರಮ.
ನೀವೂ ನಿಮ್ಮ ಮಕ್ಕಳನ್ನು ಕನ್ನಡ ಮಾಧ್ಯಮ ಶಾಲೆಗಳಲ್ಲಿ ಓದಿಸುತ್ತಿದ್ದಲ್ಲಿ, ಅಥವಾ ಓದಿಸಬೇಕು ಅಂತಿದ್ದಲ್ಲಿ ಖಂಡಿತ ಈ ಕಾರ್ಯಕ್ರಮಕ್ಕೆ ಬಂದು ಪಾಲ್ಗೊಳ್ಳಿ. ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಸಕ್ತಿ ಇರುವವರು, [email protected]ಗೆ ನಿಮ್ಮ ಹೆಸರು ಮತ್ತು ಸಂಪರ್ಕ ಮಾಹಿತಿಯನ್ನು ಕಳುಹಿಸಿಕೊಡಿ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
CBSE ಶಾಲೆಗಳಲ್ಲಿ ಋತುಚಕ್ರ ನೈರ್ಮಲ್ಯ ಕಡ್ಡಾಯ: ಸುಪ್ರೀಂ ಕೋರ್ಟ್ ಆದೇಶದ ಬೆನ್ನಲ್ಲೇ ಹೊಸ ನಿಯಮ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್












Click it and Unblock the Notifications