ಬನವಾಸಿ ಬಳಗದಿಂದ ಹಿಂದಿ ಹೇರಿಕೆ ಹೋರಾಟದ ನೆನಪು
ಬೆಂಗಳೂರು, ಜ. 25: ಹಿಂದಿ ಹೇರಿಕೆ ಹೋರಾಟಕ್ಕೆ 50 ವರ್ಷ ತುಂಬಿದ ಹಿನ್ನೆಲೆಯಲ್ಲಿ ಬನವಾಸಿ ಬಳಗ ಪ್ರಕಾಶನವು ನಗರದ ಬಸವನಗುಡಿ ಬಿ.ಪಿ.ವಾಡಿಯಾ ರಸ್ತೆಯ ಮನೋರಮಾ ಹಾಲ್ ನಲ್ಲಿ ಜನವರಿ 25 ರಂದು ಸಂಜೆ 5 ರಿಂದ "ಸಮಾನ ಭಾಷಾನೀತಿಯ ಅವಶ್ಯಕತೆ ಬಗ್ಗೆ ಒಂದು ಚರ್ಚೆ" ಎಂಬ ಕಾರ್ಯಕ್ರಮ ಹಮ್ಮಿಕೊಂಡಿದೆ.

1965ರಿಂದ ಹಿಂದಿಯನ್ನು ಮಾತ್ರ ಅಧಿಕೃತ ಭಾಷೆಯಾಗಿಸುವ ನಿರ್ಧಾರವನ್ನು ಕೈಗೊಳ್ಳಲಾಗಿತ್ತು. ಹಿಂದಿಯೇತರ ನುಡಿಸಮುದಾಯಗಳ ವಿರೋಧದ ನಡುವೆಯೂ ಕೇಂದ್ರ ಸರ್ಕಾರ ಯೋಜನೆ ಜಾರಿಗೆ ಮುಂದಾದಾಗ, 1965ರಲ್ಲಿ ದೊಡ್ಡಮಟ್ಟದ ಹೋರಾಟ ನಡೆಯಿತು. ನಂತರ ಹಿಂದಿ ಮತ್ತು ಇಂಗ್ಲಿಷ್ ಎರಡನ್ನೂ ಕೇಂದ್ರ ಸರ್ಕಾರದ ಅಧಿಕೃತ ಭಾಷೆಗಳಾಗಿ ಮುಂದುವರೆಸಲು ತೀರ್ಮಾನಿಸಲಾಯಿತು.[ಶ್ರವಣಬೆಳಗೊಳ ಸಾಹಿತ್ಯ ಸಮ್ಮೇಳನದಲ್ಲಿ ಒಂದೇ ನಿರ್ಣಯ!]
ಜನವರಿ 25ರಂದು ಈ ಹೋರಾಟಕ್ಕೆ 50 ವರ್ಷ ತುಂಬುತ್ತಿದ್ದು, ಈ ಹೊತ್ತಿನಲ್ಲಿ ಹೋರಾಟದ ನೆನಪುಗಳನ್ನು ಮೆಲುಕು ಹಾಕುತ್ತಾ, ಎಲ್ಲಾ ಭಾಷೆಗಳನ್ನೂ ಸಮಾನವೆಂದು ನೋಡುವ ಭಾಷಾನೀತಿಯ ಅವಶ್ಯಕತೆಯ ಬಗ್ಗೆ ಒಂದು ಚರ್ಚೆ ಹಮ್ಮಿಕೊಳ್ಳಲಾಗಿದೆ. ಹೆಸರಾಂತ ಸಾಹಿತಿ ಮತ್ತು ಹಿಂದಿ ಹೇರಿಕೆ ವಿರುದ್ಧ ಗಟ್ಟಿ ಧ್ವನಿ ಎತ್ತಿರುವ ಪಿ.ವಿ. ನಾರಾಯಣ ಮಾತನಾಡಲಿದ್ದಾರೆ. 'ಹಿಂದಿ ಹೇರಿಕೆ - ಮೂರು ಮಂತ್ರ ನೂರು ತಂತ್ರ' ಪಸ್ತಕ ಬರೆದಿರುವ ಆನಂದ್ ಪಾಲ್ಗೊಳ್ಳಲಿದ್ದಾರೆ.[ವಿಶ್ವಕಪ್ ಕ್ರಿಕೆಟ್ ವೀಕ್ಷಕ ವಿವರಣೆ ಕಸ್ತೂರಿ ಕನ್ನಡದಲ್ಲಿ!]
1965ರಿಂದ ತಮಿಳುನಾಡಿನಲ್ಲಿ ನಡೆದ ಹಿಂದಿ ಹೇರಿಕೆ ವಿರೋಧಿ ಹೋರಾಟದಲ್ಲಿ ತಮ್ಮನ್ನು ತೊಡಗಿರುವ ತಮಿಳುನಾಡಿನ ಹಿರಿಯ ಸಾಹಿತಿ ಜಯಪ್ರಕಾಶಮ್ ತಮ್ಮ ಅನುಭವ ಹಂಚಿಕೊಳ್ಳಲಿದ್ದಾರೆ. ಭಾಷಾನೀತಿ ಹೋರಾಟಗಾರ ಮಣಿ ಮಣಿವಣ್ಣನ್ ಅವರೂ ಕಾರ್ಯಕ್ರಮದಲ್ಲಿ ಮಾತನಾಡಲಿದ್ದಾರೆ ಎಂದು ಬನವಾಸಿ ಬಳಗ ತಿಳಿಸಿದೆ.
-
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
Property Mutation: ಆಸ್ತಿ ನೋಂದಣಿ ನಂತರ ಶೇ.98ರಷ್ಟು ಖಾತೆಗಳು ಸ್ವಯಂ ಚಾಲಿತವಾಗಿ ಬದಲಾವಣೆ: ಸಚಿವ ಕೃಷ್ಣ ಬೈರೇಗೌಡ -
Gold Price Today: ಯುಗಾದಿಗೂ ಮೊದಲೇ ಚಿನ್ನದ ದರದಲ್ಲಿ ಭಾರೀ ಇಳಿಕೆ; ಆಭರಣ ಪ್ರಿಯರಿಗೆ ಇಂದೇ ಹಬ್ಬ -
Karnataka: ಧಾರ್ಮಿಕ ಮೆರವಣಿಗೆ, ಜಯಂತಿಗಳಲ್ಲಿ DJ ಸದ್ದಿಗೆ ಬ್ರೇಕ್? 'ಐಟಂ ಸಾಂಗ್' ಬ್ಯಾನ್ ಮಾಡಲು ರಾಜ್ಯ ಸರ್ಕಾರ ಒಲವು -
ಉನ್ನತ ಶಿಕ್ಷಣಕ್ಕೆ ಭಾರತದ ಯಾವ ನಗರ ಬೆಸ್ಟ್? QS ರ್ಯಾಂಕಿಂಗ್ ಪಟ್ಟಿಯಲ್ಲಿದೆ ಬೆಂಗಳೂರು ಸೇರಿದಂತೆ 4 ನಗರಗಳ ಹೆಸರು -
ಯುದ್ಧದ ಬಿಸಿ: ಬೆಂಗಳೂರಿಗೆ ಅರಬ್ ರಾಷ್ಟ್ರಗಳ ವಿಮಾನ ಸಂಚಾರ ಕಡಿತ; ರಾಜ್ಯ ಟ್ರಾವೆಲ್ಸ್ ಮಾಲೀಕರಲ್ಲಿ ಆತಂಕ -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
SSLC ಪರೀಕ್ಷೆ-1 ಆರಂಭ: ಮಲ್ಲೇಶ್ವರಂನ ಕೆಪಿಎಸ್ ಶಾಲೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ವಿದ್ಯಾರ್ಥಿಗಳಿಗೆ ಶುಭಹಾರೈಕೆ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್












Click it and Unblock the Notifications