#ಕರ್ನಾಟಕವೊಂದೇ ಬನವಾಸಿ ಬಳಗದಿಂದ ಟ್ವಿಟ್ಟರ್ ಅಭಿಯಾನ!
ಬೆಂಗಳೂರು, ಜುಲೈ 31: ರಾಜಕೀಯ ಸ್ವಾರ್ಥಕ್ಕೆ ಕರ್ನಾಟಕವನ್ನು ಒಡೆಯುವ ಕೆಲಸಕ್ಕೆ ಕೈ ಹಾಕಲಾಗಿದೆ. ಈ ಹೊತ್ತಿನಲ್ಲಿ ಕರ್ನಾಟಕವು ಒಂದಾಗಿಯೇ ಕನ್ನಡಿಗರೆಲ್ಲರ ಏಳಿಗೆ ಬಯಸುವ ಎಲ್ಲರೂ ತಮ್ಮ ಬೆಂಬಲವನ್ನು ಸೂಚಿಸಲು ಮತ್ತು ರಾಜ್ಯವನ್ನು ಒಡೆಯುವ ಹುನ್ನಾರ ನಡೆಸುತ್ತಿರುವವರ ನಾಡ ದ್ರೋಹವನ್ನು ವಿರೋಧಿಸಲು ಟ್ವಿಟ್ಟರ್ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ.
ಕರ್ನಾಟಕದ ಯಾವುದೇ ಭಾಗದಲ್ಲಿ ಪ್ರಗತಿಯ ಕೊರತೆ ಇದೆಯೆಂದರೂ ಅದನ್ನು ಒಪ್ಪಿಕೊಳ್ಳೊಣ. ಪ್ರಗತಿಯ ಕೊರತೆಯೇ ಆಗಿಲ್ಲ ಅನ್ನುವ ಆತ್ಮವಂಚನೆಯ ವಾದ ಬೇಡ. ಆದರೆ ಈ ಕೊರತೆಗಳನ್ನು ತುಂಬಿಕೊಳ್ಳುವಲ್ಲಿ ಪ್ರತ್ಯೇಕತೆ ಹೇಗೆ ಪರಿಹಾರ ಅನ್ನುವ ಪ್ರಶ್ನೆಯನ್ನು ಒಂದಲ್ಲ ಹತ್ತು ಬಾರಿ ಎಲ್ಲ ಕನ್ನಡಿಗರು ಯೋಚಿಸಬೇಕಿದೆ.

'ಕುಂಬಾರನಿಗೆ ವರುಶ, ದೊಣ್ಣೆಗೆ ನಿಮಿಷ ಎಂಬಂತೆ' ಕಟ್ಟುವುದು ಕಷ್ಟದ ಕೆಲಸ, ಆದರೆ ಒಡೆಯುವುದು ನಿಮಿಷದ ಕೆಲಸ. ಹೊಯ್ಸಳರು ಮತ್ತು ಸೇವುಣರ ನಡುವಿನ ಯುದ್ಧದಲ್ಲಿ ಒಡೆದು ಹಂಚಿ ಹೋಗಿದ್ದ ಕನ್ನಡಿಗರು ಮತ್ತೆ ಒಂದಾಗಲು 750 ವರ್ಷಗಳ ಕಾಲ ಕಾಯಬೇಕಾಯಿತು. ಈ ಒಗ್ಗಟ್ಟನ್ನು ಸಾಧಿಸಲು ನೂರಾರು ಕನ್ನಡಿಗರು ತಮ್ಮ ಜೀವವನ್ನೇ ತೇಯ್ದಿದ್ದಾರೆ. ಹೀಗಾಗಿ ಕರ್ನಾಟಕವನ್ನು ಒಂದಾಗಿರಿಸಿಕೊಂಡೇ ನಮ್ಮ ನಡುವಿನ ವ್ಯತ್ಯಾಸಗಳನ್ನು ನಾವೇ ಬಗೆಹರಿಸಿಕೊಳ್ಳುವ ಜಾಣ್ಮೆ ಕನ್ನಡಿಗರು ಒಂದು ನುಡಿ ಸಮುದಾಯವಾಗಿ ತೋರಬೇಕಿದೆ.
ಜಾಗತೀಕರಣದ ಈ ದಿನದಲ್ಲಿ ಜ್ಞಾನಾಧಾರಿತ ಈ ಪ್ರಪಂಚದಲ್ಲಿ ಮುಂದುವರೆದ ನಾಡುಗಳೆಲ್ಲ ತಮ್ಮ ತಮ್ಮ ನುಡಿಯಲ್ಲೇ ತಮ್ಮೆಲ್ಲ ಕಲಿಕೆ, ದುಡಿಮೆ ಮತ್ತು ರಾಜಕೀಯದ ವ್ಯವಸ್ಥೆಗಳನ್ನು ಕಟ್ಟಿಕೊಂಡು ಮುನ್ನಡೆಯುತ್ತಿವೆ. ಕನ್ನಡ ನಾಡು ಇಂದಲ್ಲ ಇನ್ನೊಂದು ಇಪ್ಪತ್ತೈದು ವರ್ಷಕ್ಕಾದರೂ ಅಂತಹದೊಂದು ಹಂತ ತಲುಪಬೇಕೆಂದರೆ ಕನ್ನಡಿಗರ ನಡುವೆ ಒಗ್ಗಟ್ಟು ಇರುವುದು ಅತೀ ಮುಖ್ಯ. ಪ್ರತ್ಯೇಕತಾವಾದಿಗಳು ಇದನ್ನೆಲ್ಲ ಅರಿಯಲಿ.
ರಾಜಕೀಯ ಸ್ವಾರ್ಥಕ್ಕೆ ಕರ್ನಾಟಕವನ್ನು ಒಡೆಯುವ ಕೆಲಸಕ್ಕೆ ಕೈಹಾಕಲಾಗುತ್ತಿದೆ. ಈ ಹೊತ್ತಿನಲ್ಲಿ ಕರ್ನಾಟಕವು ಒಂದಾಗಿಯೇ ಕನ್ನಡಿಗರೆಲ್ಲರ ಏಳಿಗೆ ಬಯಸುವ ಎಲ್ಲರೂ ತಮ್ಮ ಬೆಂಬಲವನ್ನು ಸೂಚಿಸಲು ಮತ್ತು ರಾಜ್ಯವನ್ನು ಒಡೆಯುವ ಹುನ್ನಾರ ನಡೆಸುತ್ತಿರುವವರ ನಾಡ ದ್ರೋಹವನ್ನು ವಿರೋಧಿಸಲು ಈ ಟ್ವಿಟ್ಟರ್ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ಆಗಸ್ಟ್ 01 ರಂದು ಮಧ್ಯಾಹ್ನ 2 ಗಂಟೆ ನಂತರ ಟ್ವಿಟ್ಟರ್ ನಲ್ಲಿ #Kanatakavonde ಎಂಬ ಹ್ಯಾಶ್ ಟ್ಯಾಗ್ ಬಳಸಿ, ನಿಮ್ಮ ಬೆಂಬಲ ಸೂಚಿಸಿ.
-
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ












Click it and Unblock the Notifications