ಬೆಂಗಳೂರು ಕೃಷಿ ವಿಶ್ವವಿದ್ಯಾಲಯ ದೇಶದಲ್ಲೇ ಪ್ರತಿಷ್ಠಿತ ವಿ.ವಿ: ದೇಶದಲ್ಲೇ 11ನೇ ಸ್ಥಾನ!
ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದಲ್ಲಿ ವಿದ್ಯಾಭ್ಯಾಸ ಮಾಡಿ, ವಿಶ್ವವಿದ್ಯಾನಿಲಯದಿಂದ ಹೊರಬರುವ ಪದವಿದರ ಯುವಕರು ಬೆಂಗಳೂರು ಕೃಷಿ ವಿವಿಯ ರಾಯಭಾರಿಗಳು ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದ್ದಾರೆ. ಹೆಬ್ಬಾಳದ ಜಿಕೆವಿಕೆ ಆವರಣದ ಡಾ. ಬಾಬು ರಾಜೇಂದ್ರ ಪ್ರಸಾದ್ ಅಂತಾರಾಷ್ಟ್ರೀಯ ಸಮಾವೇಶ ಭವನದಲ್ಲಿ ಗುರುವಾರ ನಡೆದ 'ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯ 60ನೇ ಸಂಸ್ಥಾಪನಾ ದಿನಾಚರಣೆ' ಹಾಗೂ ಜಲಾನಯನ ನಿರ್ವಹಣೆಯ ಉತ್ಕೃಷ್ಠ ಕೇಂದ್ರದ ನವೀಕರಿಸಿದ ಕಟ್ಟಡ' ಮತ್ತು 'ಸೂಕ್ಷ್ಮ ನೀರಾವರಿ ಪರಿಕರಗಳ ಗುಣಮಟ್ಟ ಪರೀಕ್ಷಣ ಪ್ರಯೋಗಾಲಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಿ ಮಾತನಾಡಿದ್ದಾರೆ.
ದೇಶದ 75 ಕೃಷಿ ವಿಶ್ವವಿದ್ಯಾನಿಲಯಗಳಲ್ಲಿ ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯ 11ನೇ ಸ್ಥಾನದಲ್ಲಿದೆ. ನ್ಯಾಕ್ ಸಂಸ್ಥೆಯಿಂದ ಎ ಪ್ಲಸ್ ಶ್ರೇಣಿ ಪಡೆದುಕೊಂಡಿದೆ. ಎನ್ಐಆರ್ಎಫ್ (NIRF) ರ್ಯಾಂಕಿಂಗ್ನಲ್ಲಿ 11ನೇ ಸ್ಥಾನ ದೊರಕಿದೆ. ಈ ಎಲ್ಲ ಸಾಧನೆಗಳು ವಿಶ್ವವಿದ್ಯಾನಿಲಯವು 60 ವರ್ಷಗಳಲ್ಲಿ ಯಾವ ರೀತಿ ನಡೆದು ಬಂದಿದೆ ಎಂಬುದಕ್ಕೆ ಸಾಕ್ಷಿ. ವಿಶ್ವವಿದ್ಯಾನಿಲಯದ ಬೆಳವಣಿಗೆಗೆ ಅನೇಕ ಕುಲಪತಿಗಳು, ಪ್ರಾಧ್ಯಾಪಕರುಗಳು ಹಾಗೂ ಎಲ್ಲ ವಿದ್ಯಾರ್ಥಿಗಳು ದುಡಿದಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

1899ರಲ್ಲಿ ಮೈಸೂರಿನ ಮಹಾರಾಣಿ ಕೆಂಪ ನಂಜಮ್ಮ ಅವರು ಕೃಷಿ ಸಂಸ್ಥೆ ಸ್ಥಾಪನೆಗೆ ಹೆಬ್ಬಾಳದಲ್ಲಿ 30 ಎಕರೆ ಭೂಮಿ ನೀಡಿದರು. ಲೆಸ್ಲಿ ಕೋರ್ಲ್ಡ್ವನ್ ಎಂಬ ಬ್ರಿಟಿಷ್ ಅಧಿಕಾರಿ 25 ವರ್ಷ ಕೆಲಸ ಮಾಡಿ, ಕೃಷಿ ಸಂಸ್ಥೆಯನ್ನು, ಕೃಷಿ ಸಂಶೋಧನಾ ಸಂಸ್ಥೆಯನ್ನಾಗಿ ಪರಿವರ್ತಿಸಿದ. ಮೈಸೂರಿನ ದಿವಾನರಾಗಿದ್ದ ಸರ್ ಎಂ.ವಿಶ್ವೇಶ್ವರಯ್ಯ ನವರು ತದನಂತರ 1913ರಲ್ಲಿ ಕೃಷಿ ಕಾಲೇಜು ಆಗಿ ಮಾಡಿದರು. ಕೃಷಿ ವಿಷಯದಲ್ಲಿ ಡಿಪ್ಲೋಮಾ ಕೋರ್ಸ್ಗಳನ್ನು ಆರಂಭಿಸಿದರು. ಹಾಗಾಗಿ ಬೆಂಗಳೂರು ಕೃಷಿ ವಿವಿಯ ಅಡಿಪಾಯ ಬಹಳ ಗಟ್ಟಿಯಾಗಿ ಹಾಕಿದ ಕಾರಣಕ್ಕಾಗಿ, ಇಡೀ ದೇಶದಲ್ಲಿ ಪ್ರತಿಷ್ಠಿತ ವಿಶ್ವವಿದ್ಯಾನಿಲಯವಾಗಿ ಬೆಳೆದು ನಿಂತಿದೆ ಎಂದು ಅಭಿಪ್ರಾಯಪಟ್ಟರು.
ಬೆಂಗಳೂರು ಕೃಷಿ ವಿವಿಯು ಕೃಷಿಯಲ್ಲಿ ಅನೇಕ ಸಂಶೋಧನೆಗಳನ್ನು ಕೈಗೊಂಡು, ಅದರ ಪ್ರಯೋಜನವನ್ನು ರೈತರಿಗೆ ಕೊಡುಗೆಯಾಗಿ ಕೊಟ್ಟಿದೆ. ಕೃಷಿ ವಿವಿ 60 ವರ್ಷ ನಡೆದು ಬಂದ ದಾರಿ ಸುಗಮವಾಗಿರಲಿಲ್ಲ. ಕೃಷಿ ವಿಶ್ವವಿದ್ಯಾನಿಲಯದಿಂದ ಹೊರಬರುವ ಪದವಿದರರೇ ವಿಶ್ವವಿದ್ಯಾನಿಲಯದ ರಾಯಭಾರಿಗಳು. ಇಲ್ಲಿ ಕಲಿತ ಅನೇಕರು ದೇಶದ ಬೇರೆಬೇರೆ ಕೃಷಿ ವಿಶ್ವವಿದ್ಯಾನಿಲಯಗಳಲ್ಲಿ ಪ್ರಾಧ್ಯಾಪಕರಾಗಿದ್ದಾರೆ. ಸರ್ಕಾರಿ ನೌಕರಿ ಹಾಗೂ ಖಾಸಗಿ ಸಂಸ್ಥೆಗಳಲ್ಲಿ ಉನ್ನತ ಸ್ಥಾನದಲ್ಲಿರುವುದು ಕರ್ನಾಟಕಕ್ಕೆ ಕೀರ್ತಿ ತಂದಿದೆ ಎಂದಿದ್ದಾರೆ.
1980ರಲ್ಲಿ ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ಇಂಟರ್ನ್ಯಾಷನಲ್ ಬಟನಿಕಲ್ ಕಾಂಗ್ರೆಸ್ ಸಮಾವೇಶ ನಡೆಯಿತು. ನಾನು ಆಗ ವಿದ್ಯಾರ್ಥಿ. ಸುಮಾರು 4500 ಕೃಷಿ ವಿಜ್ಞಾನಿಗಳು ಭಾಗವಹಿಸಿದ್ದರು. ಈ ವೇಳೆ ಭಾರತ, ಆಹಾರ ಧಾನ್ಯದಲ್ಲಿ ಸ್ವಾವಲಂಬನೆಯ ದೇಶ ಎಂದು ಘೋಷಣೆಯಾಯಿತು. 60ರ ದಶಕದಲ್ಲಿ ದೇಶದ ಜನಸಂಖ್ಯೆಗೆ ಎರಡು ಹೊತ್ತು ನೀಡಲು ಆಗುತ್ತಿರಲಿಲ್ಲ. ಆ ದೇಶ 20 ವರ್ಷಗಳಲ್ಲಿ ಆಹಾರ ಧಾನ್ಯದಲ್ಲಿ ಸ್ವಾವಲಂಬನೆ ದೇಶ ಎಂದು ಅಂತಾರಾಷ್ಟ್ರೀಯ ಮಟ್ಟದ ವೇದಿಕೆಯಲ್ಲಿ ಹೇಳುತ್ತಾರೆ. ಇದಕ್ಕೆ ನಮ್ಮ ರೈತರು, ವಿಜ್ಞಾನಿಗಳ ಪ್ರಯತ್ನ ದೊಡ್ಡದಿದೆ. ಹಸಿರು ಕ್ರಾಂತಿ ಸುಮ್ಮನೆ ಆಗಿಲ್ಲ. ದೇಶದ ಕೃಷಿ ವಿಜ್ಞಾನಿಗಳು ಮಾಡಿದ ಸಾಧನೆಯಿಂದಾಗಿ ಆಹಾರ ಧಾನ್ಯದಲ್ಲಿ ಸ್ವಾವಲಂಬನೆ ಪಡೆದುಕೊಂಡಿದ್ದೇವೆ ಎಂದೂ ಅವರು ಹೇಳಿದ್ದಾರೆ.
ಕೃಷಿ ಸಚಿವ ಎನ್.ಚಲುವರಾಯಸ್ವಾಮಿ, ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದ ಕುಲಪತಿ ಡಾ. ಎಸ್.ವಿ.ಸುರೇಶ, ಜಲಾನಯನ ಅಭಿವೃದ್ಧಿ ಇಲಾಖೆಯ ಆಯುಕ್ತ ಉಪೇಂದ್ರ ಪ್ರತಾಪ್ ಸಿಂಗ್, ವಿಶ್ವವಿದ್ಯಾನಿಲಯದ ರಿಜಿಸ್ಟ್ರಾರ್ ಮತ್ತು ಆಡಳಿತ ಮಂಡಳಿಯ ಸದಸ್ಯ ಕಾರ್ಯದರ್ಶಿಗಳಾದ ಡಾ. ಕೆ.ಸಿ.ನಾರಾಯಣಸ್ವಾಮಿ ಈ ಸಂದರ್ಭದಲ್ಲಿ ಇದ್ದರು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ











Click it and Unblock the Notifications