ಕೆಂಪೇಗೌಡ ಬಡಾವಣೆಯಲ್ಲಿ ಬಿಡಿಎಯಿಂದ ನಿವೇಶನ ಹಂಚಿಕೆ
ಬೆಂಗಳೂರು, ಡಿಸೆಂಬರ್ 11: ಸಾಕಷ್ಟು ವರ್ಷಗಳಿಂದ ನೆನಗುದಿಗೆ ಬಿದ್ದಿದ್ದ ಕೆಂಪೇಗೌಡ ಬಡಾವಣೆಯ ನಿವೇಶನ ಹಂಚಿಕೆಗೆ ಜೀವ ಬಂದಿದೆ.
ಮುಂದಿನ ವಿಧಾನಸಭೆ ಚುನಾವಣೆಗೆ ಕೇವಲ ಆರು ತಿಂಗಳು ಬಾಕಿ ಇರುವಾಗಲೇ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ ಹೊಸ ವರ್ಷ ಅಂಗವಾಗಿ 8 ಸಾವಿರ ನಿವೇಶನ ಹಂಚಿಕೆಗೆ ಮುಂದಾಗಿದೆ.
ಈಗಾಗಲೇ ಬಿಡಿಎ ಮೊದಲ ಹಂತದಲ್ಲಿ ೫ ಸಾವಿರ ನಿವೇಶನವನ್ನು ಕೆಂಪೇಗೌಡ ಬಡಾವಣೆಯಲ್ಲಿ ಹಂಚಿಕೆ ಮಾಡಿದ್ದು ೨೨೦೦ ನಿವೇಶನಗಳನ್ನು ಯೋಜನೆಗಾಗಿ ಮುಂಬರುವ ಜನವರಿಯಲ್ಲಿ ಮತ್ತೊಮ್ಮೆ ಅರ್ಜಿಗಳನ್ನು ಆಹ್ವಾನಿಸಲಾಗವುದು.

ಆ ವೇಳೆ 5 ಸಾವಿರ ನಿವೇಶನಗಳನ್ನು ಆಸಕ್ತರಿಗೆ ನೀಡಲು ಆಲೋಚಿಸಲಾಗಿತ್ತು ಈ ಪೈಕಿ 3 ಸಾವಿರ ನಿವೇಶನಗಳನ್ನು ಭೂಮಿ ಕಳೆದುಕೊಂಡವರಿಗೆ ನೀಡಲಾಗುವುದು ಎಂದು ಬಿಡಿಎ ಆಯುಕ್ತ ರಾಕೇಶ್ ಸಿಂಗ್ ತಿಳಿಸಿದರು.
ಅರ್ಕಾವತಿ ಬಡಾವಣೆ ಯೋಜನೆಯ ಡಿನೋಟಿಫಿಕೇಷನ್ ವೇಳೆ ಭೂಮಿ ಕಳೆದುಕೊಂಡವರಿಗೂ ಕೂಡ ಕೆಂಪೇಗೌಡ ಬಡಾವಣೆಗೆ ಅರ್ಜಿ ಸಲ್ಲಿಸಬಹುದು. ಅವರ ಅರ್ಜಿಗಳನ್ನೂ ಕೂಡ ಪರಿಗಣಿಸಲಾಗುತ್ತದೆ. 5 ಸಾವಿರ ಬಿಡಿಎ ನಿವೇಶನಗಳ ಪೈಕಿ ಅರ್ಧದಷ್ಟು ಜೆನರಲ್ ಕೆಟಗರಿಯಲ್ಲಿ ನೀಡಲಾಗುವುದು ಎಂದು ಹೇಳಿದರು.
ಅರ್ಕಾವತಿ ಬಡಾವಣೆಗಾಗಿ ಭೂಮಿ ಕಳೆದುಕೊಂಡ ಅನೇಕರು ಕೆಂಪೇಗೌಡ ಬಡಾವಣೆ ನಿವೇಶನ ಹಂಚಿಕೆ ವೇಳೆ ಅರ್ಜಿ ಸಲ್ಲಿಸಿದ್ದರು. ಕೆಲವರಿಗೆ ಮಾತ್ರ ನಿವೇಶನಗಳು ಸಿಕ್ಕಿತ್ತು. ಈ ಬಾರಿ ಅರ್ಜಿ ಸಲ್ಲಿಸುವರ ಸಂಖ್ಯೆ ಹೆಚ್ಚಾಗಲಿದೆ ಎಂದು ಅರ್ಕಾವತಿಗಾಗಿ ಭೂಮಿ ಕಳೆದುಕೊಂಡವರ ವೇದಿಕೆ ಅಭಿಪ್ರಾಯ ಪಟ್ಟಿದೆ.
-
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
ಐಪಿಎಲ್ 2026 ಅಂಕಪಟ್ಟಿ: ರಾಜಸ್ಥಾನ್ ರಾಯಲ್ಸ್ ನಂಬರ್ 1, ಎರಡನೇ ಸ್ಥಾನದಲ್ಲಿ ಅಬ್ಬರಿಸುತ್ತಿರುವ ಆರ್ಸಿಬಿ! -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ












Click it and Unblock the Notifications