ನೀವು ಓಡಾಡುವ ಬೆಂಗಳೂರಿನ ರಸ್ತೆಗಳು ಸರಿಯಿಲ್ಲವೇ? ಈ ಆ್ಯಪ್ನಲ್ಲಿ ದೂರು ನೀಡಿ, ಪರಿಹಾರ ಪಡೆಯಿರಿ
ಬೆಂಗಳೂರು, ಜನವರಿ 19: ನೀವು ಓಡಾಡುವ ರಸ್ತೆಗಳು ಸರಿ ಇಲ್ಲವೇ? ಹಾಗಾದರೆ, ಬಿಬಿಎಂಪಿ ನಿಮಗೊಂದು ಆ್ಯಪ್ ಸಿದ್ದಪಡಿಸಿದೆ. ಈ ಆ್ಯಪ್ನ ಹೆಸರು 'Fix My Street'. ಇದು ಗೂಗಲ್ ಪ್ಲೆಸ್ಟೋರ್ನಲ್ಲಿ ಲಭ್ಯವಿದೆ. ಈ ಆ್ಯಪ್ ಶುರುವಾಗಿ ಈಗ 15 ದಿನಗಳಾಯಿತು.
'ಫಿಕ್ಸ್ ಮೈ ಸ್ಟ್ರೀಟ್' ಅಪ್ಲಿಕೇಶನ್ 15 ದಿನಗಳಲ್ಲಿ ಸುಮಾರು 2.5 ಸಾವಿರ ದೂರುಗಳನ್ನು ಪಡೆದಿದೆ ಎಂದು ಬಿಬಿಎಂಪಿ ಅಧಿಕಾರಿಗಳು 'ಡೆಕ್ಕನ್ ಹೆರಾಲ್ಡ್'ಗೆ ಮಾಹಿತಿ ನೀಡಿದ್ದಾರೆ.
ನಗರದಾದ್ಯಂತ ರಸ್ತೆ ಗುಂಡಿಗಳ ಕುರಿತು ವರದಿ ಮಾಡಲು ಸಾರ್ವಜನಿಕರಿಗೆ ಬಿಡುಗಡೆ ಮಾಡಲಾದ 'ಫಿಕ್ಸ್ ಮೈ ಸ್ಟ್ರೀಟ್' ಅಪ್ಲಿಕೇಶನ್ ಕೇವಲ 15 ದಿನಗಳಲ್ಲಿ 2,500 ದೂರುಗಳನ್ನು ಸ್ವೀಕರಿಸಿದೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಅಧಿಕಾರಿಗಳ ಪ್ರಕಾರ, ಸಾರ್ವಜನಿಕರಿಂದ ಬಂದ 2,500 ದೂರುಗಳಲ್ಲಿ 1,500 ಪರಿಹರಿಸಲಾಗಿದೆ. 'ಕೆಲವು ಪುನರಾವರ್ತಿತ ದೂರುಗಳಿವೆ. ನಾವು ಅವುಗಳನ್ನು ಫಿಲ್ಟರ್ ಮಾಡಬೇಕಿದೆ. ಸದ್ಯಕ್ಕೆ 815 ದೂರುಗಳನ್ನು ಮಾತ್ರ ಸರಿಪಡಿಸಬೇಕಿದೆ' ಎಂದು ಬಿಬಿಎಂಪಿ ಮುಖ್ಯ ಎಂಜಿನಿಯರ್ ಬಿ ಎಸ್ ಪ್ರಹ್ಲಾದ್ ತಿಳಿಸಿದ್ದಾರೆ.
ಒಟ್ಟಾರೆಯಾಗಿ, ಮೇ 2022 ರಿಂದ, ಈ ಅಪ್ಲಿಕೇಶನ್ನಲ್ಲಿ ಒಟ್ಟು 40,000 ರಸ್ತೆ ಗುಂಡಿಗಳ ಬಗ್ಗೆ ವರದಿಯಾಗಿವೆ.

ಆ್ಯಪ್ಗೆ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದು ಬಿಬಿಎಂಪಿ ಅಧಿಕಾರಿಗಳು ಹೇಳಿದ್ದಾರೆ. ದೂರುಗಳನ್ನು ನೀಡುತ್ತಿರುವ ನಾಗರಿಕರು ಆ್ಯಪ್ನಲ್ಲಿ ಕೆಲವು ತಾಂತ್ರಿಕ ದೋಷಗಳಿವೆ ಎಂದು ತಿಳಿಸಿದ್ದಾರೆ.
'ನಾನು ಅಪ್ಲಿಕೇಶನ್ನಲ್ಲಿ ಕೆಲವು ಗುಂಡಿಗಳ ಬಗ್ಗೆ ದೂರು ನೀಡಿದ್ದೇನೆ. ಆದರೆ, ಬಿಬಿಎಂಪಿ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ ಮತ್ತು ಸಮಸ್ಯೆ ಬಗೆಹರಿದಿದೆಯೇ ಎಂದು ನಂತರ ಪರಿಶೀಲಿಸಲು ನನಗೆ ಸಾಧ್ಯವಾಗಲಿಲ್ಲ. ಅಪ್ಲಿಕೇಶನ್ ಅನ್ನು ಸುಧಾರಿಸಬೇಕಾಗಿದೆ. ಬಳಕೆದಾರರು ತಮ್ಮ ದೂರಿನ ಸ್ಥಿತಿಯ ಬಗ್ಗೆ ಅಪ್ಡೇಟ್ ಮಾಡಬೇಕಾಗಿದೆ' ಎಂದು ಆಶಿಶ್ ಕೆ ತಿಳಿಸಿದ್ದಾರೆ. ಇದು ಪ್ರಾರಂಭವಾದ ನಂತರ ಅಪ್ಲಿಕೇಶನ್ನಲ್ಲಿ ಕನಿಷ್ಠ 10 ಪಾಟ್ಹೋಲ್ಗಳ ಬಗ್ಗೆ ದೂರು ನೀಡಿದ್ದೇನೆ ಅವರು ತಿಳಿಸಿದ್ದಾರೆ.

ಇಂತಹ ಲೋಪದೋಷಗಳನ್ನು ಪರಿಶೀಲಿಸಿ ಬಳಕೆದಾರರ ಅನುಭವವನ್ನು ಸುಧಾರಿಸುವುದಾಗಿ ಬಿಬಿಎಂಪಿ ಹಿರಿಯ ಅಧಿಕಾರಿಗಳು ಭರವಸೆ ನೀಡಿದ್ದಾರೆ.
ಬೆಂಗಳೂರಿನ ರಸ್ತೆಗಳಲ್ಲಿ ಸಾವಿರಾರು ಗುಂಡಿಗಳು ಬಿದ್ದಿರುವ ವರದಿಯಾಗಿದೆ. ಈ ಗುಂಡಿಗಳು ವಾಹನ ಸವಾರರ ಪ್ರಾಣಗಳನ್ನೂ ಬಲಿ ಪಡೆದಿವೆ. ಬೆಂಗಳೂರಿನ ರಸ್ತೆಗಳ ಬಗ್ಗೆ ವಾಹನ ಸವಾರರು ಹಲವಾರು ಬಾರಿ ದೂರು ನೀಡಿದ್ದರೂ, ಬಿಬಿಎಂಪಿ ಕ್ರಮ ಕೈಗೊಂಡಿಲ್ಲ ಎಂದು ನಾಗರಿಕರು ಆಕ್ರೋಶ ವ್ಯಕ್ತಪಡಿಸುತ್ತಲೇ ಇದ್ದಾರೆ. ಬಿಬಿಎಂಪಿ ಆದಷ್ಟೂ ಬೇಗನೇ ಇದನ್ನು ಸರಿ ಪಡಿಸಬೇಕಿದೆ.
-
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಆಗಿ ಬದಲಾದ ಪೆರಿಫೆರಲ್ ರಿಂಗ್ ರೋಡ್: 2029ರ ವೇಳೆಗೆ ನಗರದ ಟ್ರಾಫಿಕ್ಗೆ ಸಿಗಲಿದೆ ಮುಕ್ತಿ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ












Click it and Unblock the Notifications