ಒಂದೇ ವೇದಿಕೆಯಲ್ಲಿ ಬೆಂಗಳೂರು ಸೆಂಟ್ರಲ್ ಅಭ್ಯರ್ಥಿಗಳು
ಬೆಂಗಳೂರು, ಏ. 7 : ಬೆಂಗಳೂರು ರಾಜಕೀಯ ಕ್ರಿಯಾ ಸಮಿತಿ (ಬಿ.ಪ್ಯಾಕ್) ಬೆಂಗಳೂರು ಸೆಂಟ್ರಲ್ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿರುವ ಪ್ರಮುಖ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ಮತ್ತು ನಾಗರೀಕ ಸಂಘಟನೆಗಳ ನಡುವೆ ‘ಅಭ್ಯರ್ಥಿಗಳು ಮತ್ತು ನಾಗರೀಕರ ಮುಖಾಮುಖಿ' ಅಡಿಯಲ್ಲಿ ಸಮಾಲೋಚನೆಯನ್ನು ಆಯೋಜಿಸಿತ್ತು.
ಬಿ.ಪ್ಯಾಕ್ನ ಕಾರ್ಯದರ್ಶಿ ಕೆ. ಜಯರಾಜ್ ಮತ್ತು ಬಿ.ಪ್ಯಾಕ್ನ ಕೋರ್ ತಂಡದ ಸದಸ್ಯರಾದ ಹರೀಶ್ ನರಸಪ್ಪ ಅವರು ನಡೆಸಿಕೊಟ್ಟ ಕಾರ್ಯಕ್ರಮದಲ್ಲಿ ಬೆಂಗಳೂರು ಸೆಂಟ್ರಲ್ ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ನಂದಿನಿ ಆಳ್ವ, ಬಿಜೆಪಿ ಅಭ್ಯರ್ಥಿ ಪಿ.ಸಿ. ಮೋಹನ್, ಕಾಂಗ್ರೆಸ್ ಅಭ್ಯರ್ಥಿ ರಿಜ್ವಾನ್ ಅರ್ಷದ್, ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ವಿ.ಬಾಲಕೃಷ್ಣ ಪಾಲ್ಗೊಂಡಿದ್ದರು. [ಮೋದಿ ಮಾತನ್ನು ಕನ್ನಡದಲ್ಲಿ ಕೇಳಿರಿ]

ಸಮಾಲೋಚನೆಯಲ್ಲಿ ಅಭ್ಯರ್ಥಿಗಳಿಗೆ ನಾಗರೀಕ ಸಂಘಟನೆಗಳ ಸದಸ್ಯರು ಪ್ರಶ್ನೆಗಳನ್ನ ಕೇಳಿದರು. ಆನ್ಲೈನ್ ಮೂಲಕ ಬಂದಿದ್ದ ಪ್ರಶ್ನೆಗಳಿಗೂ ಅಭ್ಯರ್ಥಿಗಳು ಉತ್ತರಿಸಿದರು. ಬಿ.ಪ್ಯಾಕ್ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲೂ ಇಂತಹ ಕಾರ್ಯಕ್ರಮ ನಡೆಸಿತ್ತು. ಇದು ಸರಣಿಯ ಎರಡನೇ ಕಾರ್ಯಕ್ರಮವಾಗಿತ್ತು. [ಹೊಡೆದಾಟಗಳ ನಡುವೆ ಬಿಪ್ಯಾಕ್ ಚರ್ಚೆ ಪ್ಯಾಕಪ್]
ಪ್ರಮುಖ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ಮತ್ತು ರಾಜಕೀಯ ಸಂಘಟನೆಗಳ ಪ್ರತಿನಿಧಿಗಳನ್ನು ಒಂದೇ ವೇದಿಕೆಯಲ್ಲಿ ಸೇರಿಸಿ, ವಾಗ್ಯುದ್ದವಿಲ್ಲದ ರೀತಿಯಲ್ಲಿ ಪ್ರತಿಯೊಬ್ಬ ಅಭ್ಯರ್ಥಿಗೂ ತನ್ನ ದೃಷ್ಟಿಕೋನವನ್ನು ತಿಳಿಸುವ, ವಿನಿಮಯ ಮಾಡಿಕೊಳ್ಳುವ ಮುಕ್ತ ವಾತಾವರಣವನ್ನು ಸೃಷ್ಟಿಸುವುದು ಈ ಸಮಾಲೋಚನೆಯ ಉದ್ದೇಶವಾಗಿದೆ.
ಬಹು ಸಂಸ್ಕೃತಿಯನ್ನು ಹೊಂದಿರುವ ಬೆಂಗಳೂರಿನಂತಹ ನಗರದ ಸಮಗ್ರ ಅಭಿವೃದ್ಧಿಗಾಗಿ ಅಭ್ಯರ್ಥಿಗಳ ಯೋಜನೆಗಳೇನು?, ಆಸೆ ಆಶೋತ್ತರಗಳೇನು, ನಾಗರೀಕರಿಗೆ ಅವರು ನೀಡುವ ನಿರ್ದಿಷ್ಟ ಯೋಜನೆಗಳೇನು ಎಂದು ಅಭ್ಯರ್ಥಿಗಳು ಸಮಾಲೋಚನೆಯಲ್ಲಿ ವಿವರಣೆ ನೀಡಿದರು. [ವಿ.ಬಾಲಕೃಷ್ಣನ್ ಸಂದರ್ಶನ ಓದಿ]
ಸಮಾಲೋಚನೆಯ ಸಭೆಯಲ್ಲಿ ಮಾತನಾಡಿ ಬಿ.ಪ್ಯಾಕ್ ಉಪಾಧ್ಯಕ್ಷ ಮೋಹನದಾಸ್ ಪೈ, ಬೆಂಗಳೂರು ಸೆಂಟ್ರಲ್ ಕ್ಷೇತ್ರವನ್ನು ಪ್ರತಿನಿಧಿಸುವ ಅಭಿಲಾಷೆ ಇಟ್ಟುಕೊಂಡಿರುವ ಪ್ರತಿಯೊಬ್ಬ ಅಭ್ಯರ್ಥಿಯ ವಿಚಾರಗಳೇನು, ಅವರೇನು ಭರವಸೆಗಳನ್ನು ನೀಡುತ್ತಿದ್ದಾರೆ ಎಂದು ನಾಗರೀಕರಿಗೆ ತಿಳಿಸಲು ವೇದಿಕೆ ಒದಗಿಸಿಕೊಟ್ಟಿದ್ದೇವೆ. ಇವರಲ್ಲಿ ಯಾರನ್ನು ಆಯ್ಕೆ ಮಾಡಬೇಕು ಎಂಬುದನ್ನು ಜನರು ನಿರ್ಧರಿಸಲಿದ್ದಾರೆ ಎಂದರು.
ಈ ಸಮಾಲೋಚನೆಯಲ್ಲಿ ಬಿ.ಪ್ಯಾಕ್ನ ಅಧ್ಯಕ್ಷರಾದ ಡಾ. ಕಿರಣ್ ಮಝಂದಾರ್ ಷಾ, ಮುಖ್ಯ ಕಾರ್ಯಕ್ರಮ ನಿರ್ವಹಣಾಧಿಕಾರಿಗಳಾದ ಶ್ರೀಧರ ಪಬ್ಬಿಸೆಟ್ಟಿ ಸೇರಿದಂತೆ 300ಕ್ಕೂ ಹೆಚ್ಚಿನ ಸ್ಥಳೀಯ ನಾಗರೀಕರು ಭಾಗವಹಿಸಿದ್ದರು.
-
Abhishek Sharma: 'ಅಭಿಷೇಕ್ ಶರ್ಮಾ ಒಬ್ಬ ಬ್ಲೈಂಡ್ ಸ್ಲಾಗರ್': ರೊಚ್ಚಿಗೆದ್ದ ಅಭಿಮಾನಿಗಳು -
Jacob Bethell: ಟೀಂ ಇಂಡಿಯಾ ವಿರುದ್ಧ ಸೋತರೂ ಕನ್ನಡಿಗರ ಮನಗೆದ್ದ 22 ವರ್ಷದ ಜೇಕಬ್ ಬೆಥೆಲ್ -
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
ಕರ್ನಾಟಕ ಬಜೆಟ್ 2026: ನಮ್ಮ ಮೆಟ್ರೋ 41 ಕಿ.ಮೀ ಹೆಚ್ಚುವರಿ ಮಾರ್ಗ ಶೀಘ್ರವಾಗಿ ಪೂರ್ಣ -
Gold Rate Today: ಕರ್ನಾಟಕದ ಬೆಂಗಳೂರಿನಲ್ಲಿ ಬಂಗಾರ ದರ ಇಳಿಕೆ: ಇಲ್ಲಿದೆ ಮಾರ್ಚ್ 6ರ ದರಪಟ್ಟಿ -
Karnataka Budget 2026 PDF: ಕರ್ನಾಟಕ ಬಜೆಟ್ 2026-27 ಪಿಡಿಎಫ್ ಡಾಕ್ಯುಮೆಂಟ್ ಇಲ್ಲಿ ಡೌನ್ಲೋಡ್ ಮಾಡಿ -
ಸಂಜು ನಿಜವಾದ ಮ್ಯಾಚ್ ವಿನ್ನರ್, ವಿಶ್ವದ ನಂ.1 ಟಿ20 ಬ್ಯಾಟರ್ ಅಭಿಷೇಕ್ ಮೇಲೆ ನಂಬಿಕೆಯಿಡಿ: ರವಿಶಾಸ್ತ್ರಿ ಮಹತ್ವದ ಸಲಹೆ -
ಹೊಸ 800 ಕೆಪಿಎಸ್ ಶಾಲೆ, ಇಂಗ್ಲಿಷ್ ಭಾಷಾ ತರಬೇತಿ: ಕರ್ನಾಟಕ ಬಜೆಟ್ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಭರಪೂರ ಘೋಷಣೆ -
Karnataka Budget 2026: 100 ಹೊಸ ಸ್ಕೈವಾಕ್, ಟನಲ್ ರಸ್ತೆ ಸೇರಿ ಕರ್ನಾಟಕ ಬಜೆಟ್ನಲ್ಲಿ ಬೆಂಗಳೂರಿಗೆ ಸಿಕ್ಕಿದ್ದೇನು? -
Karnataka Property: ಇ-ಆಸ್ತಿ, ಏಕೀಕೃತ ಆಸ್ತಿ ತೆರಿಗೆ ಸಂಯೋಜನೆ: ಕರ್ನಾಟಕದಲ್ಲಿ ಆಸ್ತಿ ನಿರ್ವಹಣೆಗೆ ಹೊಸ ನಿಯಮ -
ರೈತರಿಗೆ ಮಾಲ್, ಮಂಡ್ಯ ಸಾವಯ ಕೃಷಿ: ಅಡಿಕೆ - ತೆಂಗು ಬೆಳಗಾರರಿಗೂ ಬಂಪರ್, ಮೇಕೆದಾಟು ಯೋಜನೆಗೆ ಅಸ್ತು -
Karnataka Budget 2026: ಕರ್ನಾಟಕ ಬಜೆಟ್ 2026: ಬಜೆಟ್ ಗ್ರಾತ ಕಳೆದ ಬಾರಿಗಿಂತ 40 ಸಾವಿರ ಕೋಟಿ ರೂ. ಹೆಚ್ಚಳ












Click it and Unblock the Notifications