ಚುನಾವಣೆಯಲ್ಲಿ ಬಿಜೆಪಿಗೆ ರೋಷನ್ ಬೇಗ್ ಸಹಾಯ: ರಿಜ್ವಾನ್ ಆರೋಪ
ಬೆಂಗಳೂರು, ಮೇ 22: ರೋಷನ್ ಬೇಗ್ ಅವರಿಗೆ ತಾಕತ್ತಿದ್ದರೆ ಕಾಂಗ್ರೆಸ್ ಮತ್ತು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿಯಿಂದ ಸ್ಪರ್ಧಿಸಲಿ ಎಂದು ಮಂಗಳವಾರ ಸವಾಲು ಹಾಕಿದ್ದ ಬೆಂಗಳೂರು ಕೇಂದ್ರ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಿಜ್ವಾನ್ ಅರ್ಷದ್, ರೋಷನ್ ಬೇಗ್ ವಿರುದ್ಧ ಕೆಪಿಸಿಸಿಗೆ ಪತ್ರ ಬರೆದಿದ್ದಾರೆ.
ರೋಷನ್ ಬೇಗ್ ಅವರು ಬಿಜೆಪಿ ಕಡೆಗೆ ತೋರಿಸುತ್ತಿರುವ ಒಲವು ಇತ್ತೀಚಿನದ್ದೇನಲ್ಲ. ಅವರು ಈ ಚುನಾವಣೆಯಲ್ಲಿ ಬಿಜೆಪಿ ಮತ್ತು ಆರೆಸ್ಸೆಸ್ ಜತೆಗೆ ಕೈ ಜೋಡಿಸಿ ಕಾಂಗ್ರೆಸ್ ವಿರುದ್ಧ ಕೆಲಸ ಮಾಡಿದ್ದಾರೆ ಎಂದು ಅವರು ಪತ್ರದಲ್ಲಿ ಆರೋಪಿಸಿದ್ದಾರೆ.

ಲೋಕಸಭೆ ಚುನಾವಣೆಗೆ ಮುಂಚೆಯಿಂದಲೂ ರೋಷನ್ ಬೇಗ್ ಅವರು ಬಿಜೆಪಿಯೊಂದಿಗೆ ಒಡನಾಟ ಹೊಂದಿದ್ದರು. ಅವರ ಪಕ್ಷ ವಿರೋಧಿ ಚಟುವಟಿಕೆಗಳನ್ನು ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರ ಗಮನಕ್ಕೆ ತರಲಾಗಿತ್ತು ಎಂದು ತಿಳಿಸಿದ್ದಾರೆ.
My letter to the AICC general secretary @kcvenugopalmp ji, @KPCCPresident Sri @dineshgrao on Mr. Roshan Baig’s anti party activities during the 2019 Lok Sabha elections. pic.twitter.com/ostQafNLdf
— Rizwan Arshad (@ArshadRizwan) 22 May 2019
ರೋಷನ್ ಬೇಗ್ ಅವರು ನನ್ನ ವಿರುದ್ಧ ಕೆಲಸಗಳನ್ನು ಮಾಡಿದ್ದರೂ, ಪಕ್ಷದ ಕಾರ್ಯಕರ್ತರು, ಸ್ವಯಂಸೇವಕರು ಶಿವಾಜಿನಗರ ವಿಧಾನಸಭಾ ಕ್ಷೇತ್ರದಲ್ಲಿ ನನ್ನ ಗೆಲುವಿಗಾಗಿ ಪ್ರಾಮಾಣಿಕತೆಯಿಂದ ದುಡಿದಿದ್ದಾರೆ. ಅಲ್ಲಿನ ಮತದಾರರು ಕೂಡ ನನ್ನ ಪರವಾಗಿ ಹೆಚ್ಚಿನ ಮತ ಚಲಾಯಿಸಿದ್ದಾರೆ. ನಾನು ತುಂಬಾ ಧನಾತ್ಮಕ ಪ್ರಚಾರ ನಡೆಸಿದ್ದು, ಕಾಂಗ್ರೆಸ್ ಪಕ್ಷಕ್ಕೆ ಬೆಂಗಳೂರು ಸೆಂಟ್ರಲ್ ಕ್ಷೇತ್ರವನ್ನು ಗೆಲ್ಲಿಸಿಕೊಡಬೇಕೆಂಬ ಅಪೇಕ್ಷೆಯಿದೆ.
ಹೀಗಾಗಿ ರೋಷನ್ ಬೇಗ್ ಅವರ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಅವರು ಪತ್ರದಲ್ಲಿ ಮನವಿ ಮಾಡಿದ್ದಾರೆ.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video












Click it and Unblock the Notifications