ಬೆಂಗಳೂರು ಸೆಂಟ್ರಲ್ ವಿಶ್ವ ವಿದ್ಯಾಲಯ ಹೆಸರು ಬದಲಾವಣೆ
ಬೆಂಗಳೂರು, ಜೂನ್ 11: ಕರ್ನಾಟಕ ರಾಜ್ಯ ವಿಶ್ವ ವಿದ್ಯಾನಿಲಯಗಳ (ತಿದ್ದುಪಡಿ) ವಿಧೇಯಕ 2015ಕ್ಕೆ ಮತ್ತೆ ತಿದ್ದುಪಡಿಯಾಗಿದ್ದು, ಮಹತ್ವದ ಬದಲಾವಣೆಗಳನ್ನು ತರಲು ಸರ್ಕಾರ ಮುಂದಾಗಿದೆ.
Recommended Video
ಆಡಳಿತ ಹಾಗೂ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಬೆಂಗಳೂರು ವಿವಿಯನ್ನು 3 ಭಾಗಗಳಾಗಿ ವಿಭಜನೆಯಾಗಿದ್ದು ಎಲ್ಲರಿಗೂ ತಿಳಿದಿರುವ ವಿಷಯ.
ದೇಶದ ಪ್ರತಿಷ್ಠಿತ ವಿಶ್ವವಿದ್ಯಾಲಯಗಳಲ್ಲಿ ಒಂದೆನಿಸಿರುವ ಬೆಂಗಳೂರು ವಿಶ್ವವಿದ್ಯಾಲಯವನ್ನು ಒಡೆದು ಮೂರು ಭಾಗ ಮಾಡಿದ ಬಳಿಕ ಈಗ ಬೆಂಗಳೂರು ಸೆಂಟ್ರಲ್ ವಿವಿ ಹೆಸರು ಬದಲಾವಣೆ ಮಾಡಲು ಸರ್ಕಾರ ಮುಂದಾಗಿದೆ.
ಲಕ್ಷಾಂತರ ಮಂದಿ ವಿದ್ಯಾರ್ಥಿಗಳು ಪದವಿ ಪೂರ್ವ, ಪದವಿ, ಸ್ನಾತಕೋತ್ತರ ಪದವಿ ಹಾಗೂ ಸಂಶೋಧನಾ ವಿಭಾಗದಲ್ಲಿ ವ್ಯಾಸಂಗ ಮಾಡುವ ವಿಶ್ವವಿದ್ಯಾಲಯಗಳನ್ನು ವಿಭಜನೆ ಮಾಡಿದರೂ ಜ್ಞಾನಭಾರತಿ ಕ್ಯಾಂಪನಲ್ಲಿದ್ದ ಸಂಶೋಧನಾ ಕೇಂದ್ರ, ಸೆಂಟ್ರಲ್ ಕಾಲೇಜು ಹಾಗೂ ಕಾಲೇಜನ್ನು ಉಳಿಸಿಕೊಳ್ಳಲಾಗಿತ್ತು.
250 ಕಾಲೇಜುಗಳಿಗೆ ಒಂದು ವಿ.ವಿಯನ್ನು ತೆರೆಯಲು ಶಿಫಾರಸು ಮಾಡಲಾಗಿತ್ತು. ಆರ್ ವಿ ದೇಶಪಾಂಡೆ ನೇತೃತ್ವ ಉಪ ಸಮಿತಿ, ಎನ್ ರುದ್ರಯ್ಯ ಸಮಿತಿ ಹಾಗೂ ಕೆ.ಆರ್ ವೇಣುಗೋಪಾಲ್ ಸಮಿತಿ ಶಿಫಾರಸುಗಳನ್ನು ಪರಿಗಣಿಸಿ ಈ ಹಿಂದಿನ ಸಿದ್ದರಾಮಯ್ಯ ಸರ್ಕಾರ ಹಾಗೂ ಇಂದಿನ ಬಿಜೆಪಿ ಸರ್ಕಾರ ಮುಂದಿನ ಕ್ರಮ ಜರುಗಿಸುತ್ತಿವೆ.

ಬೆಂಗಳೂರು ಸೆಂಟ್ರಲ್ ವಿವಿ ಹೆಸರು
ಬೆಂಗಳೂರು ಸಿಟಿ ವಿವಿ ಎಂದು ಹೊಸ ಹೆಸರು ನೀಡಲಾಗುತ್ತಿದೆ. ಇದರ ಜೊತೆಗೆ ಸರ್ಕಾರಿ ಸೈನ್ಸ್ ಕಾಲೇಜು ಪ್ರತ್ಯೇಕಗೊಳಿಸಲು ನಿರ್ಧರಿಸಲಾಗಿದ್ದು, ಹೊಸ ವಿವಿಗೆ ನೃಪತುಂಗ ಹೆಸರಿಡಲು ಸಚಿವ ಸಂಪುಟದ ಒಪ್ಪಿಗೆ ಸಿಕ್ಕಿದೆ, ಮಹಾರಾಣಿ ಕ್ಲಸ್ಟರ್ ವಿವಿ,ಮಂಡ್ಯ ಕ್ಲಸ್ಟರ್ ವಿವಿ ಮಾಡಿದ್ದೆವು. ಈಗ ಪೂರ್ಣಪ್ರಮಾಣ ವಿವಿ ರೂಪುಗೊಳ್ಳಲಿದೆ ಎಂದು ಕಾನೂನು ಸಚಿವ ಮಾಧುಸ್ವಾಮಿ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಕೆಎಸ್ಒಯುಗೆ ಮಾತ್ರ ದೂರಶಿಕ್ಷಣ ಅವಕಾಶ
ರಾಜ್ಯ ವಿವಿ ತಿದ್ದುಪಡಿ ಕಾಯ್ದೆ ತಿದ್ದುಪಡಿಯಂತೆ ದೂರಶಿಕ್ಷಣ ಮಾನ್ಯತೆಯನ್ನು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ(ಕೆಎಸ್ಒಯು)ಕ್ಕೆ ಮಾತ್ರ ನೀಡಲು ನಿರ್ಧರಿಸಲಾಗಿದೆ. ಬೇರೆ ವಿವಿಗಳಿಗೆ ದೂರ ಶಿಕ್ಷಣ ಮಾನ್ಯತೆಯಿಲ್ಲ, ಬೇರೆ ಯಾವ ವಿವಿಗಳು ದೂರ ಶಿಕ್ಷಣ ನೀಡುವಂತಿಲ್ಲ ಎಂದು ವಿಧಾನಸೌಧದಲ್ಲಿಂದು ನಡೆದ ಸಂಪುಟ ಸಭೆಯ ಬಳಿಕ ಮಾಧುಸ್ವಾಮಿ ಹೇಳಿದರು.

ದೂರಶಿಕ್ಷಣ ಅವಕಾಶ ದಂಧೆಯಾಗಿತ್ತು
ದೂರ ಶಿಕ್ಷಣದ ಹೆಸರಿನಲ್ಲಿ ಬೇರೆ ಉದ್ಯೋಗದಲ್ಲಿ ತೊಡಗಿದ್ದು, ಕಂಡು ಬಂದಿದೆ, ಹೀಗಾಗಿ ಬೇರೆ ವಿವಿಗಳಿಗೆ ನೀಡಿದ್ದ ಮಾನ್ಯತೆಯನ್ನು ರದ್ದುಗೊಳಿಸಲಾಗಿದೆ. ಮುಂಬರುವ ಶೈಕ್ಷಣಿಕ ವರ್ಷದಿಂದ ಬೇರೆ ವಿವಿಗಳಲ್ಲಿ ದೂರಶಿಕ್ಷಣವಿಲ್ಲ, ಅದರೆ, ಈ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ತೊಂದರೆಯಿಲ್ಲ ಎಂದು ಮಾಧುಸ್ವಾಮಿ ಹೇಳಿದರು.

ಸೆಂಟ್ರಲ್ ಕಾಲೇಜ್ ವಿವಿ
ಬೆಂಗಳೂರು ಕೇಂದ್ರ ವಿವಿ: ಬೆಂಗಳೂರು ಕೇಂದ್ರಕ್ಕೆ ಸೆಂಟ್ರಲ್ ಕಾಲೇಜು ಆಡಳಿತ ಕಚೇರಿಯಾಗಲಿದೆ. ಶಾಂತಿನಗರ, ಬ್ಯಾಟರಾಯನಪುರ, ಯಲಹಂಕ, ರಾಜಾಜಿನಗರ, ಮಲ್ಲೇಶ್ವರ, ಹೆಬ್ಬಾಳ, ಶಿವಾಜಿನಗರ, ಗಾಂಧಿನಗರ, ಚಾಮರಾಜಪೇಟೆ, ಚಿಕ್ಕಪೇಟೆ,ಜಯನಗರ, ಬಸವನಗುಡಿ, ಬಿಟಿಎಂ ಲೇಔಟ್ ವಿಧಾನಸಭಾ ಕ್ಷೇತ್ರಗಳು ಇದರ ವ್ಯಾಪ್ತಿಗೆ ಸೇರಲಿವೆ.
1886ರಲ್ಲಿ ಆರಂಭವಾಗಿದ್ದ ಸೆಂಟ್ರಲ್ ಕಾಲೇಜ್ ಅನ್ನು 1964ರಲ್ಲಿ ಬೆಂಗಳೂರು ವಿವಿಯಾಗಿ ಪರಿವರ್ತಿಸಲಾಗಿತ್ತು. 1973ರಲ್ಲಿ ಜ್ಞಾನಭಾರತಿ ಆವರಣದಲ್ಲಿ ವಿವಿ ಕ್ಯಾಂಪಸ್ ಆರಂಭವಾಗಿತ್ತು.
ಬೆಂಗಳೂರು ವಿಶ್ವವಿದ್ಯಾಲಯದ ವಿಭಜಿಸುವ ಸಲುವಾಗಿ 2009ರಲ್ಲಿ ಸಮಿತಿ ರಚಿಸಲಾಗಿತ್ತು ಮತ್ತು 2015ರಲ್ಲಿ ವಿಭಜನೆಗೆ ವಿಧಾನಮಂಡಲ ಮತ್ತು ರಾಜ್ಯಪಾಲರಿಂದ ಅನುಮೋದನೆ ಸಿಕ್ಕಿತ್ತು. ಇದಾದ ಬಳಿಕ ಕಾಲಕಾಲಕ್ಕೆ ಅಗತ್ಯಕ್ಕೆ ತಕ್ಕಂತೆ ಕಾಯ್ದೆಗೆ ತಿದ್ದುಪಡಿ ಮಾಡಲಾಗಿದೆ.
-
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ 3 ಜಾಗ ನಿಗದಿ: ಡಿಸಿಎಂ ಡಿ.ಕೆ ಶಿವಕುಮಾರ್ ಅಪ್ಡೇಟ್ಸ್












Click it and Unblock the Notifications