ಬೆಂಗಳೂರಿನಿಂದ ಚಂಡೀಗಢಕ್ಕೆ ನೇರ ರೈಲು
ಬೆಂಗಳೂರು, ಜ.21: ಚಂಡೀಗಢ ನಿಜಕ್ಕೂ ಸುವ್ಯವಸ್ಥಿತ ಉಲ್ಲಾಸಿತ ನಗರ. ಅದು ಬೆಂಗಳೂರಿನಿಂದ ಬರೋಬ್ಬರಿ 2,643 ಕಿಮೀ ದೂರದಲ್ಲಿದೆ. ಅಲ್ಲಿಗೆ ತಲುಪಲು ರೈಲು ಮೂಲಕ 51 ಗಂಟೆಗಳ ಪ್ರಯಾಣವಾಗುತ್ತದೆ. ಏನೀಗ ಅಂದರೆ?
ಬೆಂಗಳೂರು ಮತ್ತು ಚಂಡೀಗಢ ಮಧ್ಯೆ ಈಗ ನೇರ ರೈಲು ಸಂಪರ್ಕ ಕಲ್ಪಿಸಲಾಗಿದೆ. ಕರ್ನಾಟಕ ಸಂಪರ್ಕ ಕ್ರಾಂತಿ ಟ್ರೈನು ವಾರಕ್ಕೆರಡು ಬಾರಿ ಯಶವಂತಪುರದಿಂದ ಚಂಡೀಗಢಕ್ಕೆ ಸಂಚರಿಸುತ್ತದೆ. ಕೇಂದ್ರ ರೈಲ್ವೆ ಸಚಿವ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ ಮೊದಲ ರೈಲಿಗೆ ಹಸಿರು ನಿಶಾನೆ ತೋರಿದರು.

ಅಲ್ಲಿಂದ ಮುಂದಕ್ಕೆ ಹರ್ಯಾಣ, ಹಿಮಾಚಲ ಪ್ರದೇಶ, ಪಂಜಾಬ್, ಜಮ್ಮು ಕಾಶ್ಮೀರಕ್ಕೆ ಪ್ರಯಾಣ ಮಾಡುವವರಿಗೆ ಇದು ನಿಜಕ್ಕೂ ತುಂಬಾ ಪ್ರಯೋಜನಕಾರಿ. ಇದುವರೆಗೂ ಈ ದಿಕ್ಕಿನಲ್ಲಿ ಪ್ರಯಾಣಿಸಬೇಕಾದವರು ದೆಹಲಿಗೆ ತೆರಳಿ ಅಲ್ಲಿಂದ ತಮ್ಮ ತಮ್ಮ ದಿಕ್ಕಿಗೆ ಪ್ರಯಾಣ ಬೆಳಸಬೇಕಿತ್ತು. ಅಂದರೆ ದಿಲ್ಲಿಯಲ್ಲಿ 12 ಗಂಟೆ ಕಾಲ ಕಾಯುವುದು ಅನಿವಾರ್ಯವಾಗಿತ್ತು. 12 ಗಂಟೆ ಅಂದರೆ ಇಡೀ ದಿನದ ಕಾರ್ಯಕ್ರಮವಾಗಿಬಿಡುತ್ತಿತ್ತು. ಆದರೆ ಮುಂದೆ ದಿಲ್ಲಿ ರೈಲ್ವೆ ನಿಲ್ದಾಣದಲ್ಲಿ ಠಿಕಾಣಿ ಹೂಡುವ ಅಗತ್ಯವಿಲ್ಲ.
ಚಂಡೀಗಢಕ್ಕೆ ನೇರವಾಗಿ ಹೋಗುವುದರಿಂದ ಇನ್ನೂ ಒಂದು ಅಡ್ವಾಂಟೇಜ್ ಇದೆ. ಏನಪ್ಪಾ ಅಂದರೆ ಶಿಮ್ಲಾ, ಕುಲು, ಮನಾಲಿ ಮತ್ತು ಲಡಾಕ್ ಗಿರಿಧಾಮಗಳಿಗೆ ರಸ್ತೆ ಮೂಲಕ ತಲುಪಲು ಸಹಾಯಕವಾಗುತ್ತದೆ. ಕೆಲವರು ಗಿರಿಧಾಮಗಳಿಗೆ ಬೈಕೇರಿ ಹೋಗುವುದನ್ನು ಇಷ್ಟಪಡುತ್ತಾರೆ. ಅಂತಹವರು ಬೈಕುಗಳನ್ನು ಇಲ್ಲಿಂದಲೇ ರೈಲಿನಲ್ಲಿ ಸಾಗಿಸಿಕೊಂಡು ಹೋಗಬಹುದು!
ಆದರೆ ಪೂನಾ ಮಾರ್ಗದಲ್ಲಿ ಸಂಚರಿಸುವ ಬದಲು ಸಿಕಂದರಾಬಾದ್ ಮೂಲಕ ಮಾರ್ಗ ನಿಗದಿಪಡಿಸಿದ್ದರೆ ಇನ್ನೂ ಹೆಚ್ಚು ಅನುಕೂಲಕರವಾಗಿರುತ್ತಿತ್ತು ಎಂಬ ಕೂಗೂ ಕೇಳಿಬಂದಿದೆ.
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications