ಬೆಂಗಳೂರಿನಿಂದ ಚೆನ್ನೈಗೆ ಪ್ರಯಾಣಿಸಿದ ಜೀವಂತ ಹೃದಯ!
ಬೆಂಗಳೂರು, ಸೆ.3 : ಬೆಂಗಳೂರಿನಿಂದ ಹೊರಟಿದ್ದ ಜೀವಂತ ಹೃದಯ ಚೆನ್ನೈನ ಪೋರ್ಟಿಸ್ ಆಸ್ಪತ್ರೆ ತಲುಪಿದೆ. ಡಾ.ಕೆ.ಆರ್.ಬಾಲಕೃಷ್ಣನ್ ನೇತೃತ್ವದಲ್ಲಿ 8 ಮಂದಿ ವೈದ್ಯರ ತಂಡ ಶಸ್ತ್ರ ಚಿಕಿತ್ಸೆ ಆರಂಭಿಸಿದೆ.
ಹಿಂದಿನ ಸುದ್ದಿ : ಬೆಂಗಳೂರಿನ ಬಿಜಿಎಸ್ ಆಸ್ಪತ್ರೆ ವೈದ್ಯರು ನೂತನ ಸಾಹಸಕ್ಕೆ ಕೈ ಹಾಕಿದ್ದಾರೆ. ಬಿಜಿಎಸ್ ಆಸ್ಪತ್ರೆಯಿಂದ ಜೀವಂತ ಹೃದಯವೊಂದನ್ನು ಚೆನ್ನೈಗೆ ತೆಗೆದುಕೊಂಡು ಹೋಗಲಾಗುತ್ತಿದೆ. ಮಧ್ಯಾಹ್ನ 3 ಗಂಟೆಗೆ ವಿಮಾನದಲ್ಲಿ ಹೃದಯ ಚೆನ್ನೈಗೆ ತೆರಳಿದೆ.
ಕೆಂಗೇರಿಯಲ್ಲಿರುವ ಬಾಲಗಂಗಾಧರ ಸ್ವಾಮಿ ಆಸ್ಪತ್ರೆಯಲ್ಲಿ ಬ್ರೈನ್ ಡೆಡ್ ಆಗಿದ್ದ ಮಹಿಳೆಯ ಹೃದಯವನ್ನು ದಾನ ಮಾಡಲಾಗಿದೆ. ಚೆನ್ನೈನ ಪೋರ್ಟಿಸ್ ಆಸ್ಪತ್ರೆಯಲ್ಲಿರುವ ರೋಗಿಯೊಬ್ಬರಿಗೆ ಈ ಹೃದಯವನ್ನು ಅಳವಡಿಸಲಾಗುತ್ತದೆ. ಶಸ್ತ್ರ ಚಿಕಿತ್ಸೆ ಮೂಲಕ ತೆಗೆದಿರುವ ಜೀವಂತ ಹೃದಯ 6 ಗಂಟೆಗಳ ಕಾಲ ಜೀವಂತವಿರುತ್ತದೆ ಎಂದು ವೈದ್ಯರು ಹೇಳಿದ್ದಾರೆ. ಅಷ್ಟರೊಳಗೆ ಹೃದಯ ಅಳವಡಿಕೆ ಶಸ್ತಚಿಕಿತ್ಸೆ ನಡೆಯಬೇಕಾಗಿದೆ.

ಕೆಂಗೇರಿಯಲ್ಲಿನ ಬಿಜಿಎಸ್ ಗ್ಲೋಬಲ್ ಆಸ್ಪತ್ರೆಯಿಂದ ವಿಶೇಷ ಆಂಬ್ಯುಲೆನ್ಸ್ ಮೂಲಕ ಹೃದಯವನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆಗೆದುಕೊಂಡು ಹೋಗಲಾಯಿತು. ಗ್ರೀನ್ ಕಾರಿಡಾರ್ ಹೆಸರಿನಲ್ಲಿ ಆಂಬ್ಯುಲೆನ್ಸ್ ಸಾಗಲು ಸಿಗ್ನಲ್ ಫ್ರೀ ವ್ಯವಸ್ಥೆ ಮಾಡಲಾಗಿದೆ. [ಬಡವರಿಗಾಗಿ ಮಿಡಿಯುತ್ತಿರುವ 'ಹೃದಯ'ವಂತೆ ರೀನಾ]
3 ಗಂಟೆಗೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದದಿಂದ ಹೊರಡಲಿರುವ ವಿಮಾನದಲ್ಲಿ ಜೀವಂತ ಹೃದಯ ಚೆನ್ನೈಗೆ ತಲುಪಲಿದೆ. ಬಿಜಿಎಸ್ ಆಸ್ಪತ್ರೆ ವೈದ್ಯರ ತಂಡ ಮತ್ತು ಪೊಲೀಸರು ಈ ಕಾರ್ಯಕ್ಕೆ ಕೈ ಜೋಡಿಸಿದ್ದಾರೆ.
ವೈದ್ಯರ ಹೇಳಿಕೆ : ಬಿಜಿಎಸ್ ಆಸ್ಪತ್ರೆ ಉಪಾಧ್ಯಕ್ಷರಾದ ವೆಂಕಟರಮಣ ಅವರು ಈ ಬಗ್ಗೆ ಮಾಹಿತಿ ನೀಡಿದ್ದು, ಚೆನ್ನೈನ ಆಸ್ಪತ್ರೆಯಿಂದ ವೈದ್ಯರ ತಂಡ ಆಗಮಿಸಿತ್ತು. ಅವರು ಶಸ್ತ್ರ ಚಿಕಿತ್ಸೆಯಲ್ಲಿ ಪಾಲ್ಗೊಂಡಿದ್ದರು. ಅವರು ಸಹ ಹೃದಯದೊಂದಿಗೆ ಚೆನ್ನೈಗೆ ತೆರಳುತ್ತಿದ್ದಾರೆ. ಒಟ್ಟು 8 ಮಂದಿ ತಜ್ಞರ ತಂಡ ಹೃದಯ ತೆಗೆದುಕೊಂಡು ಚೆನ್ನೈಗೆ ಹೊರಟಿದ್ದಾರೆ ಎಂದು ಹೇಳಿದ್ದಾರೆ.
ಆಂಬ್ಯುಲೆನ್ಸ್ ಚಾಲಕನೆ ಹೇಳಿಕೆ : ಇಂದು ಮಧ್ಯಾಹ್ನ 12 ಗಂಟೆಗೆ ಆಂಬ್ಯುಲೆನ್ಸ್ ಬೇಕು ಎಂದು ನನಗೆ ಕರೆ ಬಂತು. ಆಸ್ಪತ್ರೆಗೆ ಸಾಗಿದ ನಂತರ ಜೀವಂತ ಹೃದಯವನ್ನು ತೆಗೆದುಕೊಂಡು ಹೋಗುವ ಕಾರ್ಯವಿದೆ ಎಂದು ಹೇಳಲಾಯಿತು. ಪೊಲೀಸರು ಸಹಕಾರ ನೀಡಿದ್ದರಿಂದ ಆದಷ್ಟು ಬೇಗ ಆಸ್ಪತ್ರೆಯಿಂದ ವಿಮಾನ ನಿಲ್ದಾಣ ತಲುಪಲಾಯಿತು, ಇಂತಹ ಕೆಲಸ ಮಾಡಿರುವುದು ಸಂತಸ ತಂದಿದೆ ಎಂದು ಆಂಬ್ಯುಲೆನ್ಸ್ ಚಾಲಕ ಮಾಧ್ಯಮಗಳೊಂದಿಗೆ ಸಂಸತ ಹಂಚಿಕೊಂಡಿದ್ದಾರೆ.
ಹೃದಯ ದಾನ ಮಾಡಿದ ಮಹಿಳೆ : ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 32 ವರ್ಷದ ಮಹಿಳೆಯೊಬ್ಬರು ತಮ್ಮ ಹೃದಯವನ್ನು ದಾನ ಮಾಡಿದ್ದಾರೆ. ಮೆದುಳು ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಅವರ ಬ್ರೈನ್ ಡೆಡ್ ಆಗಿದೆ. ಬುಧವಾರ ಶಸ್ತ್ರ ಚಿಕಿತ್ಸೆ ಮೂಲಕ ಅವರ ಜೀವಂತ ಹೃದಯವನ್ನು ತೆಗೆದು, ಚೆನ್ನೈಗೆ ತೆಗೆದುಕೊಂಡು ಹೋಗಲಾಗುತ್ತಿದೆ.
ಬಿಜಿಎಸ್ ಆಸ್ಪತ್ರೆಯಿಂದ ವಿಶೇಷ ಪೆಟ್ಟಿಗೆ ಮೂಲಕ ಜೀವಂತ ಹೃದಯವನ್ನು ಆಂಬ್ಯುಲೆನ್ಸ್ ಮೂಲಕ ವಿಮಾನ ನಿಲ್ದಾಣಕ್ಕೆ ತೆಗೆದುಕೊಂಡು ಹೋಗಲಾಯಿತು. ಚೆನ್ನೈ ವಿಮಾನ ನಿಲ್ದಾಣದಿಂದ ಪೋರ್ಟಿಸ್ ಆಸ್ಪತ್ರೆ 13 ಕಿ.ಮೀ.ದೂರದಲ್ಲಿದೆ. ಅಲ್ಲಿ ಸಹ ಹೃದಯ ಜೋಡಿಸುವ ಶಸ್ತ್ರ ಚಿಕಿತ್ಸೆಗೆ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ಬೇಸಿಗೆಯ ಸುಡು ಬಿಸಿಲಿನಿಂದ ಪಾರಾಗಲು ಭೇಟಿ ನೀಡಬಹುದಾದ ಭಾರತದ 10 ಪ್ರೇಕ್ಷಣೀಯ ಸ್ಥಳಗಳು












Click it and Unblock the Notifications