ಗಣೇಶ ಉತ್ಸವ: 10ನೇ ದಿನ ಗಾಯಕ ವಿಜಯ್ ಪ್ರಕಾಶ್ ಸಂಗೀತ ಸಂಜೆ
ಬೆಂಗಳೂರು, ಆಗಸ್ಟ್ 30: ದಕ್ಷಿಣ ಭಾರತದ ಅತಿದೊಡ್ಡ ಗಣೇಶ ಉತ್ಸವ- ಬೆಂಗಳೂರು ಗಣೇಶ ಉತ್ಸವ 10ನೇ ದಿನಕ್ಕೆ ಹೆಜ್ಜೆ ಯಿಡುತ್ತಿದೆ. ಒಟ್ಟು 11 ದಿನಗಳ ಉತ್ಸವದ 58 ನೇ ಆವೃತ್ತಿಯನ್ನು ಈ ವರ್ಷ ವರ್ಚುವಲ್ ಆಗಿ ನಡೆಸಲಾಗುತ್ತಿದೆ. ಬೆಂಗಳೂರು ಗಣೇಶ ಉತ್ಸವದ ( ಬಿಜಿಯು) 10ನೇ ದಿನದಂದು ಹೆಸರಾಂತ ಹಿನ್ನಲೆ ಗಾಯಕ ವಿಜಯ್ ಪ್ರಕಾಶ್ ರವರ ಸಂಗೀತಮಯ ಸಂಜೆ ನಡೆಯಲಿದೆ. ಆಗಸ್ಟ್ 31 , 2020ರಂದು ಸಂಜೆ 6.30ರಿಂದ ವಿಜಯ್ ಪ್ರಕಾಶ್ ಅವರ ಮಧುರ ಧ್ವನಿಯಲ್ಲಿ ಹಾಡುಗಳನ್ನು ಕೇಳಿ ತಲ್ಲೀನರಾಗಬಹುದು.
Recommended Video
'ಜೈ ಹೋ' ಖ್ಯಾತಿಯ ವಿಜಯ್ ಪ್ರಕಾಶ್ ಭಾರತೀಯ ಖ್ಯಾತ ಹಿನ್ನೆಲೆ ಗಾಯಕರು. ಮೈಸೂರಿನಲ್ಲಿ ಹುಟ್ಟಿ ಬೆಳೆದರು. ತಾಯಿ ಲೋಪಾ ಮುದ್ರ, ತಂದೆ ಎಲ್. ರಾಮ ಶೇಷ. ತಂದೆ ಕೂಡ ಸಂಗೀತ ಪಂಡಿತರು. ಚಿಕ್ಕಂದಿನಿಂದಲೂ ಇವರಿಗೆ ಸಂಗೀತವೆಂದರೆ ಅಚ್ಚು-ಮೆಚ್ಚು. ತಂದೆ ಮಾರ್ಗದರ್ಶನದಲ್ಲಿ ಶಾಸ್ತ್ರೀಯ ಸಂಗೀತವನ್ನು ಮೈಗೂಡಿಸಿಕೊಂಡ ವಿಜಯಪ್ರಕಾಶ್, ಮುಂದೆ ಪಾಶ್ಯಾತ್ಯ ಸಂಗೀತವನ್ನೂ ಕಲಿತರು. ವಿದೇಶದಲ್ಲೂ ಕನ್ನಡ ಸಂಗೀತದ ಕಂಪನ್ನು ಪಸರಿಸಿದ ಹೆಮ್ಮೆ ಇವರದ್ದು.

3000 ಕ್ಕೂ ಹೆಚ್ಚು ಜಾಹೀರಾತು ಜಿಂಗಲ್ ಗಳಲ್ಲಿ ಹಾಡಿದ್ದು ಮಾತ್ರವಲ್ಲದೇ ಕನ್ನಡ, ತೆಲುಗು, ತಮಿಳು, ಹಿಂದಿ, ಮಲಯಾಳಂ ಮತ್ತು ಮರಾಠಿ ಸೇರಿದಂತೆ 1000 ಕ್ಕೂ ಹೆಚ್ಚು ಚಲನಚಿತ್ರ ಗೀತೆಗಳನ್ನು ಹಾಡಿದ್ದಾರೆ. ಆಗಸ್ಟ್ 3೦ರಂದು ನಡೆಯಲಿರುವ ವಿಜಯ ಪ್ರಕಾಶ್ ಲೈವ್ ಇನ್ ಕಾನ್ಸರ್ಟ್ ಆಕರ್ಷಕವಾಗಿ ಮೂಡಿ ಬರಲಿದ್ದು, ಅವರ ಅಭಿಮಾನಿಗಳು ಕಾರ್ಯಕ್ರಮ ವೀಕ್ಷಿಸಲು ಕಾತುರರಾಗಿದ್ದಾರೆ.

ಸೆಪ್ಟೆಂಬರ್ 1ರ ತನಕ ಜರುಗಲಿರುವ ಬೆಂಗಳೂರು ಗಣೇಶ ಉತ್ಸವದ ಸಾಂಸ್ಕೃತಿಕ ಕಾರ್ಯಕ್ರಮಗಳು ಫೇಸ್ ಬುಕ್ , ಯೂ ಟ್ಯೂಬ್ , ಟ್ವಿಟ್ಟರ್, ಇನ್ಸ್ಟಾಗ್ರಾಂನಲ್ಲಿ ಲೈವ್ ಆಗಿ ಮೂಡಿ ಬರುತ್ತಿದೆ.
-
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
ಬೆಂಗಳೂರಿನಲ್ಲಿ ನಡೆಯುವ ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕ್ ಮಾಡುವುದ್ಹೇಗೆ? ಇಲ್ಲಿದೆ ಮಾಹಿತಿ -
Summer Drinks: ಎಳನೀರು ಅಥವಾ ಕಬ್ಬಿನ ರಸ – ಬೇಸಿಗೆಯಲ್ಲಿ ಯಾವುದು ಉತ್ತಮ? -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ












Click it and Unblock the Notifications