ಗಣೇಶೋತ್ಸವ: ಸ್ಪೂರ್ತಿಮತ್ತು ರಾಹುಲ್ ಶಾಸ್ತ್ರೀಯ ಮತ್ತು ಭಕ್ತಿ ಸಂಗೀತ
ಬೆಂಗಳೂರು ,ಆಗಸ್ಟ್ 26:ಸುರಕ್ಷತೆ ಹಾಗೂ ಮುನ್ನೆಚ್ಚರಿಕೆ ದೃಷ್ಟಿಯಿಂದ ಆನ್ ಲೈನ್ ನಲ್ಲಿಯೇ ಸಾಂಸ್ಕೃತಿಕ ಕಾರ್ಯಕ್ರಮಗಳ ವೈಭವವನ್ನು ಪ್ರದರ್ಶಿಸುತ್ತಿರುವ ಬೆಂಗಳೂರು ಗಣೇಶ ಉತ್ಸವ 6ನೇ ದಿನದತ್ತ ಹೆಜ್ಜೆ ಇಡುತ್ತಿದೆ.
Recommended Video
58ನೇ ಬೆಂಗಳೂರು ಗಣೇಶೋತ್ಸವದ ಪ್ರಯುಕ್ತ 6ನೇ ದಿನದಂದು ಶಾಸ್ತ್ರೀಯ ಮತ್ತು ಭಕ್ತಿ ಸಂಗೀತ ಕಾರ್ಯಕ್ರಮ ನಡೆಯಲಿದೆ. ಆಗಸ್ಟ್ 27 2020ರಂದು ಸಂಜೆ 6.30ರಿಂದ ವರ್ಚುವಲ್ ವೇದಿಕೆಯಲ್ಲಿ ನಡೆಯಲಿದ್ದು ಸಂಗೀತಾಭಿಮಾನಿಗಳ ಮನಗೆಲ್ಲಲಿದೆ. ಸ್ಪೂರ್ತಿ ರಾವ್ ಮತ್ತು ರಾಹುಲ್ ವೆಲ್ಲಾಲ್ ಅವರ ಕಂಠ ಸಿರಿಯಲ್ಲಿ ಮೂಡಿ ಬರಲಿ ರುವ ಕಾರ್ಯಕ್ರಮ ಎಲ್ಲರ ಗಮನ ಸೆಳೆಯಲಿದೆ.
ಸ್ಪೂರ್ತಿ ರಾವ್ ಯುವ ಕರ್ನಾಟಕ ಗಾಯಕಿ ಮತ್ತು ಸಂಗೀತದ ಉತ್ಸಾಹಿ ವಿದ್ಯಾರ್ಥಿನಿ. ಸೂಪರ್ ಸಿಂಗರ್ ಜೂನಿಯರ್ 4 ಪ್ರಶಸ್ತಿ ವಿಜೇತೆ. ಹಲವಾರು ಪ್ರತಿಷ್ಟಿತ ವೇದಿಕೆಗಳಲ್ಲಿ ಸುಶ್ರಾವ್ಯದಿಂದ ಹಾಡಿ ಸಂಗೀತ ಪ್ರಿಯರ ಮನಗೆದ್ದವರು. ಚಿಕ್ಕ ವಯಸ್ಸಿನಲ್ಲಿಯೇ ಸಂಗೀತದ ಕಡೆ ಒಲವು ತೋರಿದ ಸ್ಪೂರ್ತಿಗೆ ತಾಯಿಯೇ ಮೊದಲ ಗುರು. ಲಘು ಸಂಗೀತ, ತಬಲಾ,ಕರ್ನಾಟಕ ಶಾಸ್ತ್ರೀಯ ಸಂಗೀತದಲ್ಲಿ ಅಪಾರವಾದ ಆಸಕ್ತಿ ಬೆಳೆಸಿಕೊಂಡ ಸ್ಪೂರ್ತಿ ಮಧುರ ಧ್ವನಿಯಿಂದ ಮೋಡಿ ಮಾಡಬಲ್ಲರು. ಯೂ ಟ್ಯೂಬ್ ನಲ್ಲಿಯೂ ಇವರ ಹಾಡುಗಳಿಗೆ ಲಕ್ಷಾಂತರ ವೀಕ್ಷಕರಿದ್ದಾರೆ.

ರಾಹುಲ್ ವೆಲ್ಲಾಲ್ ಅವರು ಸಣ್ಣ ವಯಸ್ಸಿನಲ್ಲಿಯೇ ಸಂಗೀತದ ಮೂಲಕ ದೇಶ-ವಿದೇಶಗಳಲ್ಲಿ ಪ್ರಸಿದ್ಧರಾದವರು. ಸಾಕಷ್ಟು ಗೌರವಗಳು ಇವರನ್ನು ಅರಸಿ ಬಂದಿವೆ. ೪ನೇ ವಯಸ್ಸಿನಲ್ಲಿಯೇ ಕರ್ನಾಟಕ ಶಾಸ್ತ್ರೀಯ ಸಂಗೀತವನ್ನು ಕಲಿಯಲು ಪ್ರಾರಂಭಿಸಿದರು.
ಮೃದಂಗ ಹವ್ಯಾಸವನ್ನು ಮೈಗೂಡಿಸಿಕೊಂಡಿದ್ದು, ಪಾಶ್ಚಾತ್ಯ ಪಿಯಾನೋ ವಾದನದಲ್ಲಿಯೂ ಆಸಕ್ತಿ ಬೆಳೆಸಿಕೊಂಡಿದ್ದಾರೆ. ಚೆನ್ನೈಯ ಮದ್ರಾಸ್ ಮ್ಯೂಸಿಕ್ ಅಕಾಡೆಮಿ, ನಾರದ ಗಾನ ಸಭಾ, ಬೆಂಗಳೂರಿನ ಶ್ರೀರಾಮ ಸೇವಾ ಮಂಡಳಿ, ಗಾಯನ ಸಮಾಜ ಸಹಿತ ದೊಡ್ಡ ದೊಡ್ಡ ಗಾನ ಸಭಾಗಳಲ್ಲಿ ಕಛೇರಿ ನಡೆಸಿದ ಹೆಮ್ಮೆ ಇವರದು. ದಿನಕ್ಕೆರಡು ಗಂಟೆ ಸಂಗೀತಾಭ್ಯಾಸವೇ ಇವರನ್ನು ಈ ಮಟ್ಟಕ್ಕೆ ತಂದು ನಿಲ್ಲಿಸಲು ಸಹಕಾರಿಯಾಗಿದೆ. ಯೂಟ್ಯೂಬ್ ನಲ್ಲಿಯೂ ಈ ಪುಟಾಣಿ ಬಾಲಕನ ಹಾಡು ಎಲ್ಲರನ್ನು ಆಕರ್ಷಿಸಿದೆ.
ಸೆಪ್ಟೆಂಬರ್ 1ರ ತನಕ ಜರುಗಲಿರುವ ಬೆಂಗಳೂರು ಗಣೇಶ ಉತ್ಸವದ ಸಾಂಸ್ಕೃತಿಕ ಕಾರ್ಯಕ್ರಮಗಳು ಫೇಸ್ ಬುಕ್ , ಯೂ ಟ್ಯೂಬ್ , ಟ್ವಿಟ್ಟರ್, ಇನ್ಸ್ಟಾಗ್ರಾಂನಲ್ಲಿ ಲೈವ್ ಆಗಿ ಮೂಡಿ ಬರುತ್ತಿದೆ.
-
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು











Click it and Unblock the Notifications