ಬೆಂಗಳೂರು ಗಣೇಶ ಉತ್ಸವ: ವಾಸುಕಿ ವೈಭವ್, ಚಿನ್ಮಯಿ ಸಂಗೀತ
ಬೆಂಗಳೂರು, ಆಗಸ್ಟ್ 29: ದಕ್ಷಿಣ ಭಾರತದ ಅತಿದೊಡ್ಡ ಗಣೇಶ ಉತ್ಸವ- ಬೆಂಗಳೂರು ಗಣೇಶ ಉತ್ಸವದ ಸಂಪ್ರದಾಯವನ್ನು ಜೀವಂತವಾಗಿಟ್ಟುಕೊಂಡು, 11 ದಿನಗಳ ಉತ್ಸವದ 58 ನೇ ಆವೃತ್ತಿಯನ್ನು ಈ ವರ್ಷ ವರ್ಚುವಲ್ ಆಗಿ ನಡೆಸಲಾಗುತ್ತಿದೆ.
Recommended Video
ಬೆಂಗಳೂರು ಗಣೇಶ ಉತ್ಸವದ ( ಬಿಜಿಯು) 8ನೇ ದಿನದಂದು ಮಂಜು ಡ್ರಮ್ಸ್ ಕಲೆಕ್ಟಿವ್ ಸಂಗೀತ ಸಂಜೆ ನಡೆಯಲಿದೆ. ಆಗಸ್ಟ್ 29, 2020ರಂದು ಸಂಜೆ 6.30ರಿಂದ ಮಂಜುನಾಥ್ , ಚಿನ್ಮಯಿ ಶ್ರೀಪಾದ, ಸುರೇಶ್ ಪೀಟರ್ಸ್ ಮತ್ತು ಖ್ಯಾತ ಗಾಯಕ ವಾಸುಕಿ ವೈಭವ್ ರವರ ಸಂಗೀತ ಸಂಜೆ ಜುಗಲ್ ಬಂಧಿ ನಡೆಯಲಿದ್ದು, ಸಂಗೀತಾಭಿಮಾನಿಗಳ ಗಮನ ಸೆಳೆಯಲಿದೆ.
ಮಂಜು ಡ್ರಮ್ಸ್ ಕಲೆಕ್ಟಿವ್ (ಎಮ್ ಡಿ ಸಿ) ಸಂಗೀತ ಮತ್ತು ನೃತ್ಯದ ಒಂದು ಮಿಶ್ರಣವಾಗಿದ್ದು ಇದು ಪ್ರೇಕ್ಷಕರಿಗೆ ಬೆರಗುಗೊಳಿಸುವ ಅನುಭವವನ್ನು ನೀಡುತ್ತದೆ.

ಬೆಂಗಳೂರಿನ ತಾಳವಾದ್ಯ ಮತ್ತು ಡ್ರಮ್ಮರ್ ಪ್ರತಿಭೆ ಮಂಜುನಾಥ್ ಎನ್ ಎಸ್ ಅವರ ಕನಸಿನ ಕೂಸು ಎಂಡಿಸಿ, ಈ ವರ್ಷ ಮತ್ತೆ ಬೆಂಗಳೂರು ಗಣೇಶ ಉತ್ಸವ (ಬಿಜಿಯು)ಗೆ ಬಂದಿದೆ. ಕಳೆದ ವರ್ಷವೂ ಬೆಂಗಳೂರು ಗಣೇಶ ಉತ್ಸವದಲ್ಲಿ ಮಂಜು ಡ್ರಮ್ಸ್ ಕಲೆಕ್ಟಿವ್ (ಎಮ್ ಡಿ ಸಿ) ಪಾಲ್ಗೊಂಡು ಅಧ್ಭುತ ಕಾರ್ಯಕ್ರಮ ನೀಡಿತ್ತು. ಮನರಂಜನಾ ಉದ್ಯಮಕ್ಕೆ ತನ್ನದೇ ಆದ ರೀತಿಯಲ್ಲಿ ಗೌರವ ಸಲ್ಲಿಸಲು 'ಮಂಜು ಡ್ರಮ್ಸ್ ಕಲೆಕ್ಟಿವ್ ರಿಲೋಡ್' ಆಗಿದೆ.

ಸೆಪ್ಟೆಂಬರ್ 1 ರ ತನಕ ಜರುಗಲಿರುವ ಬೆಂಗಳೂರು ಗಣೇಶ ಉತ್ಸವದ ಸಾಂಸ್ಕೃತಿಕ ಕಾರ್ಯಕ್ರಮಗಳು ಫೇಸ್ ಬುಕ್ , ಯೂ ಟ್ಯೂಬ್ , ಟ್ವಿಟ್ಟರ್, ಇನ್ಸ್ಟಾಗ್ರಾಂನಲ್ಲಿ ಲೈವ್ ಆಗಿ ಮೂಡಿ ಬರುತ್ತಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications