ಬೆಂಗಳೂರಿನಲ್ಲಿ ನಮ್ಮ ವೈಫೈ ಸೇವೆ ಆರಂಭ
ಬೆಂಗಳೂರು, ಜ.25: ಐಟಿ ಸಿಟಿ ಬೆಂಗಳೂರು ಮತ್ತಷ್ಟು ಹೈಟೆಕ್ ಆಗಿದೆ. ನಗರದ ಸಾರ್ವಜನಿಕ ಸ್ಥಳದಲ್ಲಿ ಉಚಿತ ವೈಫೈ ಸೇವೆ ಒದಗಿಸುವ ಯೋಜನೆಗೆ ಶುಕ್ರವಾರ ಚಾಲನೆ ನೀಡಲಾಗಿದೆ. ಸದ್ಯ ಎಂಜಿ ರಸ್ತೆ ಮತ್ತು ಬ್ರಿಗೇಡ್ ರಸ್ತೆಯಲ್ಲಿ ಉಚಿತ ವೈಫೈ ಸೇವೆ ಲಭ್ಯವಿದೆ.
ರಾಜ್ಯ ಐಟಿ-ಬಿಟಿ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಐಸಿಟಿ ಸಂಸ್ಥೆಯು ಡಿ- ವೋಸ್ ಬ್ರಾಡ್ಬ್ಯಾಂಡ್ ಸಂಸ್ಥೆ ಸಹಯೋಗದಲ್ಲಿ ಏರ್ಪಡಿಸಿದ್ದ ಸಮಾರಂಭದಲ್ಲಿ ಐಟಿ-ಬಿಟಿ ಖಾತೆ ಸಚಿವ ಎಸ್.ಆರ್.ಪಾಟೀಲ್ ನಮ್ಮ ವೈಫೈ ಎಂಬ ಉಚಿತ ವೈಫೈ ಸೇವೆಗೆ ಚಾಲನೆ ನೀಡಿದರು.

ವೈಫೈ ಸೇವೆಗೆ ಚಾಲನೆ ನೀಡಿ ಮಾತನಾಡಿದ ಸಚಿವ ಎಸ್.ಆರ್.ಪಾಟೀಲ್ ಇದು ರಾಜ್ಯದ ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಹೊಸ ಮೈಲಿಗಲ್ಲು, ಸಾರ್ವಜನಿಕರಿಗೆ ಉಚಿತವಾಗಿ ವೈ ಫೈ ಸೇವೆ ನೀಡುವುದು ಸರ್ಕಾರದ ಪ್ರಮುಖ ಕಾರ್ಯಕ್ರಮಗಳಲ್ಲಿ ಒಂದಾಗಿತ್ತು ಎಂದು ಹೇಳಿದರು. [ಎಂಜಿ, ಬ್ರಿಗೇಡ್ ರಸ್ತೆಯಲ್ಲಿ ವೈಫೈ]
ದೇಶದಲ್ಲೇ ಮೊದಲ ಬಾರಿಗೆ ಸಾರ್ವಜನಿಕ ಸ್ಥಳದಲ್ಲಿ ಉಚಿತ ಸೇವೆ ಒದಗಿಸಲಾಗಿದ್ದು, ಎಲ್ಲ ವರ್ಗದವರು ಇದನ್ನು ಬಳಸಬಹುದಾಗಿದೆ. ಮೊದಲ ಹಂತದಲ್ಲಿ ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆ, ಸಿಎಂಎಚ್ ರಸ್ತೆ, ಶಾಂತಿನಗರ ಟಿಟಿಎಂಸಿ, ಯಶವಂತಪುರ ಟಿಟಿಎಂಸಿ, ಕೋರಮಂಗಲ ಟಿಟಿಎಂಸಿಯಲ್ಲಿ ಈ ಸೇವೆ ಲಭ್ಯವಿದೆ ಎಂದು ಹೇಳಿದರು.
ಉಚಿತ ವೈಫೈ ಸೇವೆಯನ್ನು ಮುಂದಿನ ದಿನಗಳಲ್ಲಿ ಬೆಂಗಳೂರಿನ 10 ಸ್ಥಳಗಳಿಗೆ ವಿಸ್ತರಿಸಲಾಗುವುದು. ಹುಬ್ಬಳ್ಳಿ- ಧಾರವಾಡ, ಮಂಗಳೂರು, ಬೆಳಗಾವಿ, ಮಂಗಳೂರು ಮುಂತಾದ ನಗರಗಳಿಗೆ ವಿಸ್ತರಿಸುವ ಚಿಂತನೆಯೂ ಸರ್ಕಾರದ ಮುಂದಿದೆ ಎಂದು ತಿಳಿಸಿದರು.
ಬಳಕೆ ಹೇಗೆ : ಸದ್ಯ ಉಚಿತ ವೈಫೈ ಸೇವೆ ಪ್ರತಿ ಸೆಕೆಂಡ್ಗೆ 512 ಕೆಬಿ ವೇಗದಲ್ಲಿ ಕಾರ್ಯ ನಿರ್ವಹಿಸಲಿದೆ. ಮೂರು ಗಂಟೆ ನಿರಂತರವಾಗಿ ಉಪಯೋಗಿಸಬಹುದಾಗಿದ್ದು, 50 ಎಂಬಿ ಡೇಟಾ ಬಳಸಬಹುದು. ಎಂ.ಜಿ.ರಸ್ತೆ ಹಾಗೂ ಬ್ರಿಗೇಡ್ ರಸ್ತೆಯಲ್ಲಿ ಒಮ್ಮೆಗೆ 2,500 ಮಂದಿ ವೈಫೈ ಬಳಸಬಹುದಾಗಿದೆ.
ದುರ್ಬಳಕೆ ಮಾಡಿದರೆ ಪತ್ತೆ : ಐಟಿ-ಬಿಟಿ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಕಾರ್ಯದರ್ಶಿ ಶ್ರೀವತ್ಸ ಕೃಷ್ಣ, ಮಾತನಾಡಿ ಈ ಸೇವೆ ಬಳಸುವವರ ಮಾಹಿತಿ, ಯಾವ ವೆಬ್ಸೈಟ್ ವೀಕ್ಷಿಸಿದರು, ಏನು ಡೌನ್ಲೋಡ್ ಮಾಡಿದ್ದಾರೆ ಎಂಬ ವಿವರಗಳು ದಾಖಲಾಗುತ್ತದೆ. ಅಲ್ಲದೇ ದುರ್ಬಳಕೆಯಾದರೆ ಆ ಮಾಹಿತಿಯೂ ದಾಖಲಾಗುತ್ತದೆ. ಇದರಿಂದ ದುರ್ಬಳಕೆ ಮಾಡಿಕೊಂಡವರನ್ನು ಸುಲಭವಾಗಿ ಪತ್ತೆ ಹಚ್ಚಬಹುದು ಎಂದು ಹೇಳಿದರು.
ನಮ್ಮ ವೈಫೈ ಸೇವೆಯನ್ನು ಆರಂಭಿಸಿರುವ ಡಿ-ವೋಸ್ ಬ್ರಾಡ್ಬ್ಯಾಂಡ್ ಸಂಸ್ಥೆಯ ನಿರ್ದೇಶಕ ರಮೇಶ್ ಸತ್ಯ ಮಾತನಾಡಿ, ಉಚಿತ ವೈ ಫೈ ಸೇವೆಯಲ್ಲಿ ಸಕಾಲ, ಜಲಮಂಡಳಿ ಸೇರಿದಂತೆ ಸರ್ಕಾರದ ನಾನಾ ಇಲಾಖೆಗಳ ಸೇವೆಯನ್ನು ಬಳಸಬಹುದಾಗಿದೆ. ಭವಿಷ್ಯದಲ್ಲಿ ಪಾರ್ಕಿಂಗ್ ನಿರ್ವಹಣೆ ಹಾಗೂ ತ್ಯಾಜ್ಯ ವಿಲೇವಾರಿಗೂ ಈ ತಂತ್ರಜ್ಞಾನ ಬಳಸಬಹುದಾಗಿದೆ ಎಂದರು.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications