ಮುಲಾಜಿಲ್ಲದೆ ಕೆಎಸ್ಆರ್ ಟಿಸಿ ದರವೂ ಏರಿಸಿಬಿಟ್ರು
ಬೆಂಗಳೂರು, ಮೇ2: ಕಳೆದ ವಾರ ಬಿಎಂಟಿಸಿ ಪ್ರಯಾಣಿಕರಿಗೆ ಪ್ರಯಾಣ ದರ ಏರಿಕೆ ಶಾಕ್ ಟ್ರೀಟ್ ಮೆಂಟ್ ಕೊಟ್ಟಿದ್ದ ಸರಕಾರ ಈ ಬಾರಿ ಮುಲಾಜಿಲ್ಲದೆ ಕೆಎಸ್ಆರ್ ಟಿಸಿ ದರವನ್ನೂ ಏರಿಸಲು ಸಜ್ಜಾಗಿದೆ. ಸ್ವತಃ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರೇ ಈ ವಿಷಯವನ್ನು ಸ್ಪಷ್ಟಪಡಿಸಿದ್ದಾರೆ.
ನಾಳೆ ಅಥವಾ ನಾಳಿದ್ದು ಈ ನೂತನ ಬಸ್ ದರ ಜಾರಿಗೆ ಬರಲಿದೆ. ಆದರೆ ಯಾವ ಪ್ರಮಾಣದಲ್ಲಿ ಪ್ರಯಾಣ ದರ ಏರಿಕೆಯಾಗಲಿದೆ ಎಂಬುದರ ಬಗ್ಗೆ ಸಚಿವರು ಸುಳಿವು ನೀಡಲಿಲ್ಲ. ಗಮನಾರ್ಹವೆಂದರೆ ಸರಕಾರವು ಸಬ್ಸಿಡಿ ನೀಡಿದರೆ ಮಾತ್ರ ಈ ಬಸ್ ಪ್ರಯಾಣ ದರವನ್ನು ಕೊಂಚ ಮಟ್ಟಿಗೆ ಕಡಿಮೆ ಮಾಡುವುದಾಗಿ ಸಚಿವ ರೆಡ್ಡಿ ಹೇಳಿದ್ದಾರೆ.

ಬಿಎಂಟಿಸಿ ಸಂಸ್ಥೆಯ ಮೇಲೆ 600 ಕೋಟಿ ರೂ. ಸಾಲವಿದೆ. ಪ್ರತಿ ವರ್ಷ ಇದಕ್ಕಾಗಿ 60 ಕೋಟಿ ರೂ ಬಡ್ಡಿ ಕಟ್ಟಲಾಗುತ್ತಿದೆ. ಸಿಬ್ಬಂದಿ ವೆಚ್ಚ ಹೆಚ್ಚಿದ್ದು, ಡೀಸೆಲ್ ಬೆಲೆ ಏರಿಕೆಯಿಂದಲೂ ಸಂಸ್ಥೆ ಆರ್ಥಿಕ ನಷ್ಟ ಎದುರಿಸುತ್ತಿದೆ. ಹೀಗಾಗಿ ಬಿಎಂಟಿಸಿ ಮತ್ತು ಕೆಎಸ್ಆರ್ಟಿಸಿ ಪ್ರಯಾಣದರ ಏರಿಕೆ ಅನಿವಾರ್ಯವೆಂದು ರಾಮಲಿಂಗಾರೆಡ್ಡಿ ಅವರು ದರ ಏರಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. (ಮತದಾನದ ದಿನ ಸುಲಿಗೆಗಿಳಿದ ಕೆಎಸ್ಸಾರ್ಟಿಸಿ!)
ಇಲಾಖೆಯ ಮೇಲೆ ಅಧಿಕವಾಗುತ್ತಿರುವ ಆರ್ಥಿಕ ಹೊರೆಯನ್ನು ನಿಭಾಯಿಸುವ ಸಲುವಾಗಿ ಸಾರಿಗೆ ದರವನ್ನು ಏರಿಕೆ ಮಾಡದೆ ಬೇರೆ ದಾರಿ ಇಲ್ಲ. ಹೀಗಾಗಿ ಕೆಎಸ್ಆರ್ ಟಿಸಿ ಬಸ್ ಪ್ರಯಾಣ ದರವನ್ನು ಏರಿಕೆ ಮಾಡಲಾಗುತ್ತದೆ ಎಂದು ಸಚಿವ ರೆಡ್ಡಿ ಹೇಳಿದ್ದಾರೆ. (ಬಿಎಂಟಿಸಿ ಆಘಾತ: ಪ್ರಯಾಣಿಕರಿಗೆ ದರ ಏರಿಕೆ ಶಾಕ್)
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications