ನೇಣು ಬಿಗಿದ ಸ್ಥಿತಿಯಲ್ಲಿ ವೈದ್ಯೆ ಪತ್ತೆ, ಗಂಡ ನಾಪತ್ತೆ
ಬೆಂಗಳೂರು, ಅ. 10 : ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ವೈದ್ಯೆಯೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕೌಟುಂಬಿಕ ಕಲಹದಿಂದ ಬೇಸತ್ತ ವೈದ್ಯೆ ಕುಮುದಾ(32) ಗುರುವಾರ ರಾತ್ರಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ವೈದ್ಯೆಯ ಪಾಲಕರು ಕುಮುದಾ ಗಂಡ ಡಾ.ನಂದೀಶ್ ಅವರೇ ಸಾವಿಗೆ ಕಾರಣ. ನಂದೀಶ್ ಮತ್ತು ಆತನ ಕುಟುಂಬದವರು ಸೇರಿ ಕುಮುದಾ ಅವರನ್ನು ಕೊಲೆ ಮಾಡಿದ್ದಾರೆ ಎಂದು ಆರೋಪಿಸಿ ರಾಜರಾಜೇಶ್ವರಿ ನಗರ ಪೊಲೀಸರಿಗೆ ದೂರು ದಾಖಲಿಸಿದ್ದಾರೆ. ಇತ್ತ ಡಾ. ನಂದೀಶ್ ತಲೆಮರೆಸಿಕೊಂಡಿರುವುದು ಮತ್ತಷ್ಟು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ.[ಮಕ್ಕಳ ಪ್ರೇಮ ವಿವಾಹ, ಮನನೊಂದ ತಾಯಿ ಆತ್ಮಹತ್ಯೆ]

ಸಾವಿಗೆ ಕಾರಣವಾಯಿತೆ ಅಕ್ರಮ ಸಂಬಂಧ?
ನಂದೀಶ್ ಮತ್ತು ಕುಮುದಾ ದಂಪತಿಗೆ ಎರಡು ವರ್ಷದ ಇಂಪನಾ ಎಂಬ ಮಗುವಿದೆ. ಡಾ. ನಂದೀಶ್ ತಮ್ಮ ಸಹೋದ್ಯೋಗಿಯೊಬ್ಬಳ ಜತೆ ಅಕ್ರಮ ಸಂಬಂಧ ಇರಿಸಿಕೊಂಡಿದ್ದ ಎನ್ನಲಾಗಿದೆ. ಇತ್ತೀಚೆಗೆ ಗಂಡ-ಹೆಂಡತಿ ನಡುವಿನ ಸಂಬಂಧ ಹಳಸಿತ್ತು. ಈ ಬಗ್ಗೆ ಕಳೆದ 15 ದಿನಗಳ ಹಿಂದೆ ಗಂಡ ಹೆಂಡತಿ ನಡುವೆ ಜಗಳ ನಡೆದಿತ್ತು. ಮನೆಯವರ ಮಧ್ಯಸ್ಥಿಕೆ ನಂತರ ಪ್ರಕರಣ ರಾಜಿಯಾಗಿತ್ತು. [16ನೇ ಮಹಡಿಯಿಂದ ಜಿಗಿದು ಮಾಡೆಲ್ ಆತ್ಮಹತ್ಯೆ]
ಆದರೆ ನಂದೀಶ್ ಮತ್ತೆ ತನ್ನ ಹಳೆ ಚಾಳಿ ಮುಂದುವರಿಸಿದ್ದು ಕುಮಾದಾಗೆ ಗೊತ್ತಾಗಿದೆ. ಇದರಿಂದ ಮನನೊಂದ ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಮೇಲ್ನೋಟಕ್ಕೆ ಹೇಳಲಾಗಿದೆ. ಆದರೆ ಕುಮುದಾ ಪಾಲಕರು ಆಕೆಯನ್ನು ಕೊಲೆ ಮಾಡಿ ಕೋಣೆಯಲ್ಲಿ ನೇತುಹಾಕಲಾಗಿದೆ ಎಂದು ಆರೋಪಿಸಿದ್ದಾರೆ. ರಾಜರಾಜೇಶ್ವರಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ನಂದೀಶ್ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications