ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ವೇ: ಎಚ್ಡಿಡಿ ಕನಸು ಈಡೇರಿದೆ- ಬಿಜೆಪಿ ಟ್ವೀಟ್
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ವೇ ನಿರ್ಮಾಣ ವಿಚಾರವಾಗಿ ಮಾಜಿ ಪ್ರಧಾನಿಗಳಾದ ಎಚ್ ಡಿ ದೇವೇಗೌಡ ಅವರನ್ನು ಬಿಜೆಪಿ ಟೀಕಿಸಿದೆ. ಎಚ್ ಡಿ ದೇವೇಗೌಡ ಅವರು 30-35 ವರ್ಷಗಳ ಹಿಂದೆ ಕಂಡಿದ್ದ ಕನಸನ್ನು ಕೇವಲ ಐದೇ ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ನನಸಾಗಿಸಿದ್ದಾರೆ ಎಂದು ಬಿಜೆಪಿ ಸರಣಿ ಟ್ವೀಟ್ ಮಾಡಿದೆ. ಹೀಗಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದವನ್ನು ಬಿಜೆಪಿ ತಿಳಿಸಿದೆ.
ಮೂರು ದಶಕ ಹಿಂದಿನ ರಸ್ತೆ ರಿಪೇರಿ ಕಾರ್ಯವನ್ನೇ ಜನತಾದಳ ಪಕ್ಷ ಈಗ ಹೇಳಿಕೊಳ್ಳುತ್ತಿದೆ. ಮುಖ್ಯಮಂತ್ರಿಯಾಗಿದ್ದಾಗ ಹೆಚ್ಡಿ ಕುಮಾರಸ್ವಾಮಿ ರಾಜ್ಯವನ್ನು ಅಭಿವೃದ್ಧಿ ಮಾಡಲಿಲ್ಲ. 2018ರಲ್ಲಿ ಆರಂಭವಾದ ಬೆಂಗಳೂರು ಮೈಸೂರು ಹೆದ್ದಾರಿ ಕೂಡ ತಮ್ಮ ಪಕ್ಷದ್ದೇ ಸಾಧನೆ ಎನ್ನುತ್ತಿರುವುದು ಹಾಸ್ಯಾಸ್ಪದ ಎಂದು ಬಿಜೆಪಿ ವ್ಯಂಗ್ಯವಾಡಿದೆ.

ಸನ್ಮಾನ್ಯ ಎಚ್ ಡಿ ದೇವೇಗೌಡ ಅವರನ್ನೂ ಸೇರಿ ರಾಜ್ಯದಲ್ಲಿ ಇನ್ನಷ್ಟು ಅಭಿವೃದ್ಧಿ ಕಾರ್ಯಗಳ ಕನಸು ಕಂಡ ಹಲವರಿದ್ದಾರೆ. ಅವರೆಲ್ಲರ ಕನಸುಗಳನ್ನೂ ಡಬಲ್ ಎಂಜಿನ್ ಸರ್ಕಾರ ನನಸು ಮಾಡುತ್ತಿದೆ. ಹಾಗಾಗಿ ಈ ಬಾರಿ ಎಚ್ ಡಿ ಕುಮಾರಸ್ವಾಮಿ ಅವರೇ ಬಿಜೆಪಿಗೆ ಮತ ನೀಡಿದರೂ ಅದು ಅಚ್ಚರಿಯ ಸುದ್ದಿಯಲ್ಲ ಎಂದು ಬಿಜೆಪಿ ಟ್ವೀಟ್ ಮಾಡಿದೆ.
ರಾಜ್ಯದಲ್ಲಿ ಇನ್ನಷ್ಟು ಅಭಿವೃದ್ಧಿ ಕಾರ್ಯಗಳ ಕನಸು ಕಂಡ ಹಲವರಿದ್ದಾರೆ. ಅವರೆಲ್ಲರ ಕನಸುಗಳನ್ನೂ ಡಬಲ್ ಎಂಜಿನ್ ಸರ್ಕಾರ ನನಸು ಮಾಡುತ್ತಿದೆ. ಸನ್ಮಾನ್ಯ @H_D_Devegowda ಅವರದ್ದನ್ನೂ ಸೇರಿಸಿ. ಹಾಗಾಗಿ ಈ ಬಾರಿ @hd_kumaraswamy ಅವರೇ ಬಿಜೆಪಿಗೆ ಮತ ನೀಡಿದರೂ ಅದು ಅಚ್ಚರಿಯ ಸುದ್ದಿಯಲ್ಲ.#ModiHawainMandya #JDSDynasty
— BJP Karnataka (@BJP4Karnataka) March 11, 2023
3/3

ಪ್ರಧಾನಿ ನರೇಂದ್ರ ಮೋದಿ ಅವರು ಮಾ.12ರಂದು ಮೈಸೂರು- ಬೆಂಗಳೂರು ಎಕ್ಸ್ಪ್ರೆಸ್ ವೇ ಉದ್ಘಾಟಿಸಲಿದ್ದಾರೆ. ಮೈಸೂರಿನಿಂದ ಬೆಂಗಳೂರಿಗೆ ಬರೋಕೆ ಕೆಲವೊಮ್ಮೆ 3 ಗಂಟೆಗೂ ಜಾಸ್ತಿ ಟೈಂ ಬೇಕಾಗ್ತಿತ್ತು. ದಸರಾ ಸಮಯದಲ್ಲಂತೂ ಬೆಂಗಳೂರಿನಿಂದ ಮೈಸೂರಿಗೆ ಹೋಗಿ ಬರೋದು ದೊಡ್ಡ ಸವಾಲಿನ ಕೆಲಸವಾಗ್ತಿತ್ತು. ವೀಕೆಂಡ್ಗಳಲ್ಲೂ ಟ್ರಾಫಿಕ್ ಅಬ್ಬರ ಕಡಿಮೆ ಇರಲಿಲ್ಲ. ಆದ್ರೆ ಈಗ ವಿಶಾಲವಾದ 10 ಲೇನ್ ರೋಡ್ ರೆಡಿ ಆಗಿದೆ. ಒಂದೂವರೆ ಗಂಟೆಯಲ್ಲೇ ಪ್ರಯಾಣ ಮುಗಿಸಬಹುದಾಗಿದೆ.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ











Click it and Unblock the Notifications