ಬೆಂಗ್ಳೂರಲ್ಲಿ ಸಿಕ್ತು ಮಣಿಪುರ ಉಗ್ರನ 1 ಕೋಟಿ ಹಣ
ಬೆಂಗಳೂರು, ನ.5 : ಮಣಿಪುರದ ನಿಷೇಧಿತ ಉಗ್ರಗಾಮಿ ಸಂಘಟನೆಯೊಂದು ಬೆಂಗಳೂರಿನಲ್ಲಿ ಸ್ಥಳೀಯ ಉದ್ಯಮಿಯೊಬ್ಬರ ಜತೆಗೂಡಿ ಭೂ ವ್ಯವಹಾರದಲ್ಲಿ ಹಣ ಹೂಡಿಕೆ ಮಾಡಿರುವ ಸಂಗತಿ ತಡವಾಗಿ ಬೆಳಕಿಗೆ ಬಂದಿದೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ರಾಷ್ಟ್ರೀಯ ತನಿಖಾ ದಳ ಉದ್ಯಮಿಯಿಂದ 1.14 ಕೋಟಿ ರೂ. ಹಣವನ್ನು ವಶಪಡಿಸಿಕೊಂಡಿದೆ.
ಪ್ರಕರಣದ ತನಿಖೆ ನಡೆಸುತ್ತಿದ್ದ ಗುಹಹಟಿ ವಿಭಾಗದ ಎನ್ಐಎ ತಂಡ ಭಾನುವಾರ ಬೆಂಗಳೂರಿನಲ್ಲಿ, ಮಣಿಪುರದ ನಿಷೇಧಿತ ಕಾಂಗ್ಲಿಪಾಕ್ ಜನ ಕ್ರಾಂತಿ ಪಕ್ಷ (ಪ್ರಿಪಾಕ್)- ಕಾಂಗ್ಲಿಪಾಕ್ ಜನ ಸಂಯುಕ್ತ ಪಕ್ಷ (ಯುಪಿಪಿಕೆ) ಸಂಘಟನೆ ಪ್ರಧಾನ ಕಾರ್ಯದರ್ಶಿ ಎನ್.ಶಾಂತಿ ಮೀಟಿ ಎಂಬುವರಿಗೆ ಸೇರಿದ ಹಣವನ್ನು ವಶಪಡಿಸಿಕೊಂಡಿದೆ.

ಆದರೆ, ಮಣಿಪುರಿ ಉಗ್ರನ ಹಣ ಹೊಂದಿದ್ದ ಬೆಂಗಳೂರಿನ ಉದ್ಯಮಿ ಹೆಸರು ಹಾಗೂ ಆತನ ಹಿನ್ನೆಲೆ ಬಗ್ಗೆ ಮಾಹಿತಿ ಬಹಿರಂಗಪಡಿಸಲು ಎನ್ಐಎ ಅಧಿಕಾರಿಗಳು ನಿರಾಕರಿಸಿದ್ದಾರೆ. ದಾಳಿ ನಡೆಸಿದ ವೇಳೆ ಶಾಂತಿ ಮೀಟಿಯಿಂದ ಹಣ ಸ್ವೀಕರಿಸಿರುವ ಬಗ್ಗೆ ಉದ್ಯಮಿ ತಪ್ಪೊಪ್ಪಿಕೊಂಡಿದ್ದಾರೆ. ಶಾಂತಿ ಉಗ್ರಗಾಮಿ ಸಂಘಟನೆಗೆ ಸೇರಿದವರು ಎಂದು ತನಗೆ ತಿಳಿದಿರಲಿಲ್ಲ ಎಂದು ಹೇಳಿದ್ದಾರೆ.
ಅಸ್ಸಾಂ-ಮಣಿಪುರದ ಉಗ್ರಗಾಮಿ ಸಂಘಟನೆ ಪ್ರಮುಖರು, ದೇಶದ ವಿವಿಧ ರಾಜ್ಯಗಳಲ್ಲಿ ಹಣ ಹೂಡಿಕೆ ಮಾಡಿದ್ದಾರೆ ಎಂಬ ಮಾಹಿತಿ ಅನ್ವಯ ಎನ್ಐಎ ತನಿಖೆ ನಡೆಸುತ್ತಿತ್ತು. ತನಿಖೆ ವೇಳೆ ಬೆಂಗಳೂರು ರಿಯಲ್ ಎಸ್ಟೇಟ್ ವ್ಯವಹಾರದ ಕುರಿತು ಮಾಹಿತಿ ಸಂಗ್ರಹಿದಾಗ, ಶಾಂತಿ ಮೀಟಿ ಮತ್ತು ಸ್ಥಳೀಯ ಉದ್ಯಮಿ ಸಹಭಾಗಿತ್ವದ ಭೂ ವ್ಯವಹಾರ ಬೆಳಕಿಗೆ ಬಂದಿದೆ.
ಪೊಲೀಸ್ ಆಗಿದ್ದರು : ನಿಷೇಧಿತ ಉಗ್ರಗಾಮಿ ಸಂಘಟನೆಯ ಶಾಂತಿ ಮೀಟಿ ಮೊದಲು ಅಸ್ಸಾಂ ರಾಜ್ಯದ ಪೊಲೀಸ್ ಇಲಾಖೆಯ ವೈರ್ಲೆಸ್ ವಿಭಾಗದಲ್ಲಿ ನೌಕರರಾಗಿದ್ದರು. ನಂತರ ಸ್ಥಳೀಯ ಉಗ್ರಗಾಮಿ ಸಂಘಟನೆಯೊಂದಿಗೆ ಸಂಪರ್ಕ ಬೆಳೆಸಿಕೊಂಡು, ಸರ್ಕಾರಿ ಉದ್ಯೋಗ ತೊರೆದಿದ್ದರು ಎಂದು ಎನ್ಐಎ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
-
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು? -
ವೈಭವ್ ಸೂರ್ಯವಂಶಿ ಕುರಿತು ಬಿಸಿಸಿಐಗೆ ಹೋಯ್ತು ವಿಶೇಷ ಮನವಿ; ಟೀಮ್ ಇಂಡಿಯಾ ಸೇರ್ತಾರಾ ಯುವ ಪ್ರತಿಭೆ? -
ಒಂದು ಬಟನ್ ಒತ್ತಿದರೆ ಬದಲಾಗುತ್ತೆ BMW ಕಾರಿನ ನಂಬರ್ ಪ್ಲೇಟ್, ಹೈಟೆಕ್ ಕಳ್ಳಾಟದ ವಿಡಿಯೋ ಭಾರಿ ವೈರಲ್ -
Asha Bhosle: ಗಾನ ಕೋಗಿಲೆ ಆಶಾ ಭೋಸ್ಲೆ ನಿಧನ: ದೇಶವೇ ಶೋಕದಲ್ಲಿ, ಸಾಮಾಜಿಕ ಜಾಲತಾಣದಲ್ಲಿ ಫ್ಯಾನ್ಸ್ ಕಂಬನಿ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
ವಾಂಖೆಡೆಯಲ್ಲಿ ಆರ್ಸಿಬಿ-ಮುಂಬೈ ಇಂಡಿಯನ್ಸ್ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ವರದಿ ಹೀಗಿದೆ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Duet Songs: ಆಶಾ ಭೋಸ್ಲೆ-ಲತಾ ಮಂಗೇಶ್ಕರ್ ಸಹೋದರಿಯರ ಕಂಠಸಿರಿಯಲ್ಲಿ ಅರಳಿದ ಮಾಧುರ್ಯ: ಒಟ್ಟಿಗೆ ಹಾಡಿದ ಹಿಟ್ ಹಾಡುಗಳಿವು -
Karnataka Rains: ಸಮುದ್ರ ಮಲ್ಮೈ ಸುಳಿಗಾಳಿ, ಏಪ್ರಿಲ್ 14-17ರವರೆಗೆ ಬೆಂಗಳೂರು, ಇತರ ಜಿಲ್ಲೆಗಳಲ್ಲಿ ಮಳೆ -
ಎಪಿಎಂಸಿಯಲ್ಲಿ ಮೂಟೆಗಳು ಮೈಮೇಲೆ ಬಿದ್ದರೂ ಪವಾಡಸದೃಶ್ಯದಂತೆ ಬದುಕಿದ ಮಹಿಳೆ Video Viral -
BESCOM Mithra: 'ಬೆಸ್ಕಾಂ ಮಿತ್ರ' ಸೇವೆ ತಾತ್ಕಾಲಿಕ ಸ್ಥಗಿತ, ಸುಧಾರಿತ ವ್ಯವಸ್ಥೆ ಶೀಘ್ರವೇ ಲಭ್ಯ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ











Click it and Unblock the Notifications