ರೋಗಿಯ ಬುಡಕ್ಕೆ ಬಿಸಿನೀರು ಬಿಟ್ಟು ಸುಟ್ಟ ವೈದ್ಯರು
ಬೆಂಗಳೂರು, ಅ. 28: ಆಪರೇಷನ್ ಗೆ ಒಳಗಾಗಿದ್ದ ವ್ಯಕ್ತಿಗೆ ನಗರದ ಶಂಕರಪುರಂ ಆಸ್ಪತ್ರೆ ವೈದ್ಯರು ಮತ್ತು ಸಿಬ್ಬಂದಿ 'ಬೀಸಿನೀರು' ಚಿಕಿತ್ಸೆ ನೀಡಿದ್ದಾರೆ. ಶಂಕರಪುರಂನ ರಂಗದೊರೈ ಆಸ್ಪತ್ರೆಯಲ್ಲಿ ಇಂಥ ಎಡವಟ್ಟೊಂದು ನಡೆದಿದೆ.
ಗುಹ್ಯ ರೋಗ ಚಿಕಿತ್ಸೆಗೆಂದು ದಾಖಲಾಗಿದ್ದ ಶ್ರೀನಗರ ನಿವಾಸಿ ರಾಜೇಂದ್ರ ಪ್ರಸಾದ್ ಅವರನ್ನು ಕುದಿಯುವ ನೀರಲ್ಲಿ ಕುಳ್ಳಿರಿಸಲಾಗಿದೆ. ಬೆಚ್ಚಗಿನ ನೀರಲ್ಲಿ ಕುಳ್ಳಿರಸಬೇಕಾದ ಸಿಬ್ಬಂದಿ ಕುದಿಯುವ ನೀರಲ್ಲಿ ರಾಜೇಂದ್ರ ಪ್ರಸಾದ್ ಅವರನ್ನು ಕುಳ್ಳಿರಿಸಿದ್ದು ಅವರ ಬೆನ್ನು ಮತ್ತು ಸೊಂಟದ ಭಾಗ ಸಂಪೂರ್ಣವಾಗಿ ಸುಟ್ಟುಹೋಗಿದೆ.[ಸಂಜಯ ಗಾಂಧಿ ಆಸ್ಪತ್ರೆ ಎಲ್ಲ ವೈದ್ಯರು ಕೆಲಸಕ್ಕೆ ಹಾಜರ್]

ಕಳೆದ ಒಂದು ತಿಂಗಳ ಹಿಂದೆ ರಾಜೇಂದ್ರ ಪ್ರಸಾದ್ ಚಿಕಿತ್ಸೆಗೆಂದು ದಾಖಲಾಗಿದ್ದರು. ಅಂತೆಯೇ ಅವರಿಗೆ ಶಸ್ತ್ರ ಚಿಕಿತ್ಸೆ ಕೂಡಾ ಮಾಡಲಾಗಿತ್ತು. ಆದರೆ ಎಷ್ಟೇ ದಿನ ಕಳೆದರೂ ಶಸ್ತ್ರ ಚಿಕಿತ್ಸೆ ಗಾಯ ವಾಸಿಯಾಗಿರಲಿಲ್ಲ.
ಇತ್ತೀಚೆಗೆ ಆಸ್ಪತ್ರೆ ಸಿಬ್ಬಂದಿ ಮತ್ತು ವೈದ್ಯರು ತುಂಬಾ ಕೆಟ್ಟ ವರ್ತನೆ ತೋರಿಸುತ್ತಿದ್ದು ಸೋಮವಾರ ರಾತ್ರಿ ನಮ್ಮನ್ನು ಏಕಾಏಕಿ ಆಸ್ಪತ್ರೆಯಿಂದ ಹೊರ ಹಾಕಲು ಪ್ರಯತ್ನಿಸಿದ್ದಾರೆ. ನಾವು ಅದಕ್ಕೆ ವಿರೋಧ ವ್ಯಕ್ತಪಡಿಸಿದಾಗ ಈ ರೀತಿ ಮಾಡಿದ್ದಾರೆ ಎಂದು ರಾಜೇಂದ್ರ ಪ್ರಸಾದ್ ಕುಡುಂಬದವರು ಆರೋಪಿಸಿದ್ದಾರೆ.
ಅಮಾನವೀಯ ಘಟನೆಯಿಂದ ರಾಜೇಂದ್ರ ಪ್ರಸಾದ್ ಸಂಪೂರ್ಣ ಜರ್ಜರಿತರಾಗಿ ಹೋಗಿದ್ದಾರೆ. ಅವರಿಗೆ ನಿರಾತಂಕವಾಗಿ ಮಲುಗಲು ಸಾಧ್ಯವಾಗುತ್ತಿಲ್ಲ. ಸುಟ್ಟ ಗಾಯಗಳಿಂದ ಪರಿತಪಿಸುತ್ತಿದ್ದಾರೆ. [ವಿಚಾರಣಾಧೀನ ಕೈದಿ ಪರಪ್ಪನ ಅಗ್ರಹಾರದಲ್ಲಿ ಆತ್ಮಹತ್ಯೆ]
ಡಾ. ರಾಜ್ ಕುಮಾರ್ ಸ್ಪಷ್ಟನೆ
ರೋಗಿಯನ್ನು ಸರಿಯಾಗಿಯೇ ಆರೈಕೆ ಮಾಡಲಾಗಿದೆ. ಆದರೆ ಸಿಬ್ಬಂದಿ ತಪ್ಪಿನಿಂದ ಅವಘಡ ಸಂಭವಿಸಿದೆ. ಅವರಿಗೆ ಉಳಿದ ಚಿಕಿತ್ಸೆ ನೀಡುತ್ತೇವೆ ಎಂದು ಆಸ್ಪತ್ರೆಯ ವೈದ್ಯ ರಾಜ್ ಕುಮಾರ್ ಸ್ಪಷ್ಟಪಡಿಸಿದ್ದಾರೆ. ಅಲ್ಲದೇ ರೋಗಿ ಮನೆಯವರು ಇದನ್ನೇ ಇಟ್ಟುಕೊಂಡು ನಮ್ಮನ್ನು ಬ್ಲ್ಯಾಕ್ ಮೇಲ್ ಮಾಡುತ್ತಿದ್ದು, ಸೈಟ್ ಮತ್ತು 20 ಲಕ್ಷ ರೂ. ಹಣ ನೀಡುವಂತೆ ಬೇಡಿಕೆ ಇಟ್ಟಿದ್ದಾರೆ ಎಂದು ಆರೋಪಿಸಿದ್ದಾರೆ.
-
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Anushka Shetty Marriage: ಬೆಂಗಳೂರಿನ ಖ್ಯಾತ ಉದ್ಯಮಿ ಜೊತೆ ನಟಿ ಅನುಷ್ಕಾ ಶೆಟ್ಟಿ ಮದುವೆ, ಈ ವರ್ಷದಲ್ಲೇ ಮುಹೂರ್ತ: ವರದಿ -
1 ರೂಪಾಯಿಗೆ 1 ಲೀಟರ್ ಹಾಲು: ಫ್ಲಿಪ್ಕಾರ್ಟ್ ವಿರುದ್ಧ ಸಿಡಿದೆದ್ದ ಡಿ.ಕೆ. ಸುರೇಶ್; ಪ್ರಧಾನಿ ಮೋದಿಗೆ ದೂರು -
ಬಿಜೆಪಿಯಿಂದ ನಟ ವಿಜಯ್ಗೆ ಡಿಸಿಎಂ ಹುದ್ದೆ, 80 ಸೀಟುಗಳ ಆಫರ್; ತಮಿಳುನಾಡು ಚುನಾವಣೆಗೆ ಹೊಸ ಮೈತ್ರಿ ಲೆಕ್ಕಾಚಾರ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
LPG New Rule: ಎಲ್ಪಿಜಿ ಹೊಸ ನಿಯಮ: ಪಿಎನ್ಜಿ ಸಂಪರ್ಕ ಇದ್ದರೆ ಇನ್ನು ಮುಂದೆ ಸಿಲಿಂಡರ್ ಸಿಗಲ್ಲ -
Government Employees: ಪಶ್ಚಿಮ ಬಂಗಾಳ ಸರ್ಕಾರಿ ನೌಕರರಿಗೆ ಸಿಎಂ ಮಮತಾ ಬ್ಯಾನರ್ಜಿ ಬಂಪರ್ ಕೊಡುಗೆ -
ರಾಜ್ಯದಲ್ಲಿ ಕಮರ್ಷಿಯಲ್ ಉದ್ದೇಶಕ್ಕೆ ಗೃಹಬಳಕೆ LPG ಸಿಲಿಂಡರ್ ಬಳಸಿದವರ ಮೇಲೆ ಅಧಿಕಾರಿಗಳ ಖಡಕ್ ದಾಳಿ












Click it and Unblock the Notifications