ಬೆಂಗಳೂರಿನ ಕೆಲವೆಡೆ ಇಂದು ನೀರು ಬರೋಲ್ಲ
ಬೆಂಗಳೂರು, ಅ.24: ದೀಪಾವಳಿ ಸಂಭ್ರಮದಲ್ಲಿರುವ ಮಹಾನಗರದ ಕೆಲವೊಂದು ಏರಿಯಾಗಳಿಗೆ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ನೀರು ಸರಬರಾಜು ಪೈಪ್ ಒಡೆದಿರುವ ಹಿನ್ನೆಲೆಯಲ್ಲಿ ದುರಸ್ತಿ ಕಾರ್ಯ ನಡೆಯುತ್ತಿದ್ದು ರಿಪೇರಿಯಾಗುವವರೆಗೆ ಕೆಲ ಬಡಾವಣೆಗಳಿಗೆ ನೀರು ಸರಬರಾಜು ಸಾಧ್ಯವಿಲ್ಲ.
ನಗಗರದ ಮಾಗಡಿ ರಸ್ತೆ ಸಮೀಪದ ಬೆಗ್ಗರ್ಸ್ ಕಾಲೋನಿ ಬಳಿ ನೀರಿನ ಪೈಪ್ ಒಡೆದಿದ್ದು ಹಲವೆಡೆ ನೀರು ಪೂರೈಕೆ ವ್ಯತ್ಯಯವಾಗಲಿದೆ. ಪೈಪ್ ದುರಸ್ತಿ ಕಾರ್ಯ ಭರದಿಂದ ಸಾಗಿದೆ ಎಂದು ಜಲಮಂಡಳಿ ಅಧಿಕಾರಿಗಳು ತಿಳಿಸಿದ್ದಾರೆ.[ಮಗುವಿನ ಮೇಲೆ ಅತ್ಯಾಚಾರ ಮಾಡಿದವನು ಗುಂಡಣ್ಣ?]

ಪೈಪ್ ಒಡೆದಿರುವ ಪರಿಣಾಮ ನಂದಿನಿ ಲೇಔಟ್, ರಾರಾಜಿನಗರ, ಮಾಗಡಿ ರಸ್ತೆ, ಮಹಾಲಕ್ಷ್ಮೀ ಲೇಔಟ್ ಮತ್ತು ಜೆಪಿ ನಗರದ ಸುತ್ತಮುತ್ತಲ ಭಾಗದಲ್ಲಿ ಅಕ್ಟೋಬರ್ 24 ರಂದು ನೀರು ಪೂರೈಕೆ ಯಲ್ಲಿ ವ್ಯತ್ಯಯವಾಗಲಿದೆ.
ಕಾವೇರಿ ನೀರು ಸರಬರಾಜು ಮಾಡುತ್ತಿದ್ದ 80 ವರ್ಷ ಹಳೆಯ ಪೈಪ್ ಗುರುವಾರ ಮಧ್ಯರಾತ್ರಿ ಒಡೆದು ಹೋಗಿದೆ. ತಕ್ಕಣ ಪರಿಹಾರಕ್ಕೆ ಮುಂದಾದರೂ ನೀರಿನ ರಭಸ ತಡೆಯಲಾಗಲಿಲ್ಲ. ಟ್ಯಾಂಕ್ ನಲ್ಲಿದ್ದ ಸುಮಾರು 90 ದಶಲಕ್ಷ ಲೀಟರ್ ನೀರು ಖಾಲಿಯಾದ ಮೇಲೆ ದುರಸ್ತಿ ಕಾರ್ಯ ಕೈಗೆತ್ತಿಕೊಳ್ಳಲಾಗಿದೆ.[ಆರ್ಕಿಡ್ಸ್ ಶಾಲೆಯಲ್ಲಿ ಅತ್ಯಾಚಾರ, ಆರೋಪಿ ಎಲ್ಲಿ?]
ಅತ್ಯಂತ ಹಳೆಯ ಮಾದರಿ ಪೈಪ್ ಸಿಗುವುದು ದುಸ್ತರವಾಗಿದ್ದು ಜಲಮಂಡಳಿ ಕಂಪನಿಯೊಂದಕ್ಕೆ ಕೂಡಲೇ ತಯಾರು ಮಾಡಿ ನೀಡುವಂತೆ ತಿಳಿಸಿದೆ. ಒಂದು ವೇಳೆ ಶುಕ್ರವಾರ ಸಂಪೂರ್ಣ ದುರಸ್ತಿ ಸಾಧ್ಯವಾಗಿದ್ದರೆ ಕೆಲ ಬಡವಣೆಗಳ ಜನರು ಶನಿವಾರವೂ ನೀರಿಗೆ ಪರದಾಡಬೇಕಿದೆ.
ಗುರುವಾರ ರಾತ್ರಿ 36 ಇಂಚಿನ ನೀರಿನ ಪೈಪ್ ಒಡೆದಿತ್ತು. ತಕ್ಷಣ ಕಾರ್ಯನಿರತರಾದರೂ ದುರಸ್ತಿ ಸಾಧ್ಯವಾಗಿಲ್ಲ. ಅಲ್ಲದೇ ಆಗಾಗ ಬೀಳುತ್ತಿದ್ದ ಮಳೆ ಸಹ ಕೆಲಸಕ್ಕೆ ಅಡ್ಡಿಯಾಗಿ ಪರಿಣಿಮಿಸಿದೆ.
-
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ












Click it and Unblock the Notifications