ಗಣೇಶ ಕೂರಿಸಿದ ಮೇಲೆ ಇವನ್ನು ಮರೆಯಬೇಡಿ

ಬೆಂಗಳೂರು, ಆ, 20 : ಮಹಾನಗರದಲ್ಲಿ ಗೌರಿ-ಗಣೇಶ ಹಬ್ಬದ ಸಂಭ್ರಮ ಮನೆ ಮಾಡಿದೆ. ನಗರದ ಲಕ್ಷಾಂತರ ಮನೆಗಳಲ್ಲಿ, ಬೀದಿ ಬೀದಿಗಳಲ್ಲಿ ಗಣಪತಿ ಪ್ರತಿಷ್ಠಾಪನೆಯಾಗಿದೆ.
ಹಬ್ಬ ಆಚರಣೆಗೆ ಸಂಬಂಧಿಸಿ ಪೊಲೀಸ್‌ ಇಲಾಖೆ ಸಾರ್ವಜನಿಕರಿಗೆ ಅನೇಕ ಸೂಚನೆ ನೀಡಿದ್ದು ಕಟ್ಟುನಿಟ್ಟಾಗಿ ಪಾಲಿಸಲು ತಿಳಿಸಿದೆ.

ganesha

ಪಾಲಿಸಬೇಕಾದ ಆದೇಶಗಳು ಇಂತಿವೆ:
* ಗಣೇಶ ಸ್ಥಾಪನೆ ಮಾಡಿದ ಜಾಗದಲ್ಲಿ ಕನಿಷ್ಠ ಇಬ್ಬರು ಕಾರ್ಯಕರ್ತರು ಯಾವಾಗಲೂ ಹಾಜರಿರಬೇಕು.
* ಮೂರ್ತಿ ಪ್ರತಿಷ್ಠಾಪಿಸುವ ಜಾಗದಲ್ಲಿ ಬೆಂಕಿ ನಂದಿಸುವ ಸಾಮಗ್ರಿ ಅಳವಡಿಸಿರಬೇಕು.
* ಸುತ್ತಮುತ್ತಲ ಜಾಗದಲ್ಲಿ ಕಟ್ಟಿಗೆ, ಉರುವಲು, ಸೀಮೆಎಣ್ಣೆ ಇಡುವುದು ನಿಷಿದ್ಧ.
* ವಿದ್ಯುತ್‌ ಸಂಪರ್ಕ ಪಡೆಯಲು ಬೆಸ್ಕಾಂ ಅನುಮತಿ ಪಡೆದಿರಬೇಕು.
* ದಿನದ 24 ಗಂಟೆಯೂ ಮೂರ್ತಿ ಸ್ಥಾಪನೆ ಜಾಗದಲ್ಲಿ ಬೆಳಕಿರಬೇಕು.
* ಜನಸಂದಣಿ ನಿಯಂತ್ರಿಸಲು ಸಮರ್ಪಕ ರೀತಿಯಲ್ಲಿ ಬ್ಯಾರಿಕೇಡ್‌ ಅಳವಡಿಸುವುದು ಆಯೋಜಕರ ಜವಾಬ್ದಾರಿ.
* ಮಹಿಳಾ ಸುರಕ್ಷತೆಗೆ ಭಂಗ ತರದಂತೆ ನಡೆದುಕೊಳ್ಳುವುದು.
* ಧ್ವನಿವರ್ಧಕಗಳನ್ನು ಬೆಳಗ್ಗೆ 6 ರಿಂದ ರಾತ್ರಿ 10ರವರೆಗೆ ಮಾತ್ರ ಬಳಸಬೇಕು.
* ಸಾಂಸ್ಕೃತಿಕ ಕಾರ್ಯಕ್ರಮ ನಡೆಯುವ ವೇಳೆ ಅಹಿತಕರ ಘಟನೆ ನಡೆಯದಂತೆ ಎಚ್ಚರ ವಹಿಸಬೇಕು.
* ಸಮಿತಿಯವರು ಕಡ್ಡಾಯವಾಗಿ ಸಮವಸ್ತ್ರ ಬಳಸಬೇಕು.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+