ಬಿಎಸ್ವೈಗೆ ಪೊಲೀಸ್ ನೋಟಿಸ್, ಬಂಧನ ಸಾಧ್ಯತೆ
ಬೆಂಗಳೂರು, ನ. 13 : ಸರ್ಕಾರದ ವಿರುದ್ಧ ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿರುವ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ಬೆಂಗಳೂರು ಪೊಲೀಸರು ನೋಟಿಸ್ ಜಾರಿಗಳಿಸಿ, ಧರಣಿ ಸ್ಥಳ ತೆರವುಗೊಳಿಸುವಂತೆ ಆದೇಶಿಸಿದ್ದರಾರೆ. ನೋಟಿಸ್ ಗೆ ಉತ್ತರ ನೀಡದಿದ್ದಲ್ಲಿ ಅವರನ್ನು ಬಂಧಿಸುವ ಸಾಧ್ಯತೆ ಇದೆ.
ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ 8 ದಿನಗಳ ಧರಣಿಗೆ ಮಾತ್ರ ಪೊಲೀಸರಿಂದ ಅವಕಾಶ ಪಡೆದಿದ್ದರು. ಆದರೆ, ಬುಧವಾರಕ್ಕೆ ಅವರ ಧರಣಿ 13ನೇ ದಿನಕ್ಕೆ ಕಾಲಿಟ್ಟಿದೆ. ಧರಣಿ ವಿಸ್ತರಿಸುವ ಅವರ ಕ್ರಮಕ್ಕೆ ಪೊಲೀಸರು ಅನುಮತಿ ನೀಡಿರಲಿಲ್ಲ. ಆದರೂ ಯಡಿಯೂರಪ್ಪ ಧರಣಿ ಮುಂದುವರೆಸಿದ್ದಾರೆ. ಆದ್ದರಿಂದ ನೋಟಿಸ್ ಜಾರಿಗೊಳಿಸಲಾಗಿದೆ.

ಬುಧವಾರ ಬೆಂಗಳೂರು ನಗರ ಪೊಲೀಸ್ ಆಯುಕ್ತ ರಾಘವೇಂದ್ರ ಔರಾದ್ಕರ್ ಆನಂದರಾವ್ ವೃತ್ತದ ಬಳಿಯ ಮಹಾತ್ಮ ಗಾಂಧಿ ಪ್ರತಿಮೆ ಮುಂಭಾಗದಲ್ಲಿ ನೀವು ನಡೆಸುತ್ತಿರುವ ಧರಣಿ ಸ್ಥಳವನ್ನು ತೆರವುಗೊಳಿಸಿ ಎಂದು ಆದೇಶಿಸಿದ್ದಾರೆ. ಆದರೆ, ಬಿ.ಎಸ್.ಯಡಿಯೂರಪ್ಪ ನೋಟಿಸ್ ಸ್ವೀಕರಿಸಲು ನಿರಾಕರಿಸಿದ್ದಾರೆ. ಆದ್ದರಿಂದ ಅವರನ್ನು ಬಂಧಿಸುವ ಸಾಧ್ಯತೆ ಇದೆ.
ಸರ್ಕಾರ ಶಾದಿಭಾಗ್ಯ ಯೋಜನೆಯನ್ನು ಎಲ್ಲಾ ವರ್ಗಗಳಿಗೆ ವಿಸ್ತರಿಸರಣೆ ಮಾಡಬೇಕು ಹಾಗೂ ಎಪಿಎಲ್ ಕಾರ್ಡ್ದಾರರಿಗೂ ಪಡಿತರ ವಿತರಣೆ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಕೆಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ. ಮೊದಲು 8 ದಿನ ಧರಣಿ ನಡೆಸುವುದಾಗಿ ಅವರು ಪೊಲೀಸರಿಂದ ಅನುಮತಿ ಪಡೆದಿದ್ದರು.
ಅವರ ಅನುಮತಿ ಅವಧಿ ಮುಗಿದ ಬಳಿಕ, ಧರಣಿಯನ್ನು ವಿಸ್ತರಿಸುವುದಾಗಿ ಯಡಿಯೂರಪ್ಪ ಪೊಲೀಸರಿಗೆ ಮನವಿ ಮಾಡಿದ್ದರು. ಆದರೆ, ಮನವಿಯನ್ನು ಪೊಲೀಸರು ನಿರಾಕರಿಸಿ ಧರಣಿ ಸ್ಥಳ ತೆರವುಗೊಳಿಸುವಂತೆ ನೋಟಿಸ್ ಜಾರಿಗೊಳಿಸಿದ್ದರು. ಅದಕ್ಕೆ ಉತ್ತರ ನೀಡಿದೆ ಧರಣಿ ಮುಂದುವರೆಸಿರುವ ಹಿನ್ನಲೆಯಲ್ಲಿ ಬುಧವಾರ ಮತ್ತೊಂದು ನೋಟಿಸ್ ಜಾರಿಗೊಳಿಸಲಾಗಿದೆ. ಇದನ್ನು ಉಲ್ಲಂಘಿಸಿದರೆ ಅವರನ್ನು ಪೊಲೀಸರು ಬಂಧಿಸುವ ಸಾದ್ಯತೆ ಇದೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications