ಪೋಷಕರಿಗೆ ಸುಳ್ಳು ಮಾಹಿತಿ ನೀಡಿದ ವಿಬ್ಗಯಾರ್ ಶಾಲೆ
ಬೆಂಗಳೂರು, ಜು.23: ಒಂದನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಪ್ರಕರಣ ಬೆಳಕಿಗೆ ಬಂದ ಬಳಿಕ ರಾಷ್ಟ್ರ ಮಟ್ಟದಲ್ಲಿ ಸುದ್ದಿಯಾಗುತ್ತಿರುವ ವಿಬ್ಗಯಾರ್ ಶಾಲೆಯ ಒಂದೊಂದೆ ಅಕ್ರಮ ಇದೀಗ ಬೆಳಕಿಗೆ ಬರತೊಡಗಿದೆ.
ಇಂಡಿಯನ್ ಸರ್ಟಿಫಿಕೇಟ್ ಆಫ್ ಸೆಕೆಂಡರಿ ಎಜುಕೇಷನ್ (ಐಸಿಎಸ್ಇ) ಶಿಕ್ಷಣ ಕ್ರಮದಲ್ಲಿ ಪಾಠ ಮಾಡಲು ವಿಬ್ಗಯಾರ್ ಸಂಸ್ಥೆಗೆ ಕಳೆದ ವರ್ಷ ಪ್ರಮಾಣ ಪತ್ರ ಸಿಕ್ಕಿದ್ದು, ಏಳು ವರ್ಷದಿಂದ ಪೋಷಕರಿಗೆ ಸುಳ್ಳು ಐಸಿಎಸ್ಇ ಮಾನ್ಯತೆಯ ಪ್ರಮಾಣಪತ್ರ ತೋರಿಸಿ ವಿದ್ಯಾರ್ಥಿಗಳನ್ನು ಶಾಲೆಗೆ ದಾಖಲು ಮಾಡಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಆದರೆ ಐಸಿಎಸ್ಇ ಪಠ್ಯದಲ್ಲಿ ಪಾಠಮಾಡಲು ಕೌನ್ಸಿಲ್ ಫಾರ್ ದಿ ಇಂಡಿಯನ್ ಸ್ಕೂಲ್ ಸರ್ಟಿಫಿಕೇಟ್ ಎಕ್ಸಾಮಿನೆಷನ್(ಸಿಐಎಸ್ಸಿಇ) ನೀಡುವ ಪ್ರಮಾಣ ಪತ್ರ ಅಗತ್ಯವಾಗಿದ್ದು, ಈ ಪ್ರಮಾಣ ಪತ್ರವನ್ನು ಸಿಐಎಸ್ಸಿಇ ನೀಡಿದ ಮುಂದಿನ ವರ್ಷದಿಂದ ಪ್ರಮಾಣ ಪತ್ರ ಪಡೆದ ಶಾಲೆ ಐಸಿಎಸ್ಇ ಪಠ್ಯಕ್ರಮದಲ್ಲಿ ಬೋಧನೆ ಮಾಡಬೇಕಾಗುತ್ತದೆ.
ಆದರೆ ವಿಬ್ಗಯಾರ್ ಶಾಲೆಗೆ ಅಕ್ಟೋಬರ್ 9, 2013ರಂದು ಸಿಐಎಸ್ಸಿಇ ಪ್ರಮಾಣ ಪತ್ರ ನೀಡಿದೆ. ಈ ಪ್ರಮಾಣ ಪತ್ರ ದೊರೆತ ಒಂದು ವರ್ಷದ ಬಳಿಕ, ಅಂದರೆ 2014ರಲ್ಲಿ ಐಸಿಎಸ್ಇ ಪಠ್ಯಕ್ರಮದಲ್ಲಿ ಶಿಕ್ಷಣ ಆರಂಭಿಸಿಬೇಕಿದ್ದ ವಿಬ್ಗಯಾರ್ 2007ರಿಂದಲೇ ಸುಳ್ಳು ದಾಖಲೆ ಹೇಳಿ ಪೋಷಕರಿಗೆ ಮೋಸ ಮಾಡಿದೆ ಎಂದು ವರದಿಯಲ್ಲಿ ತಿಳಿಸಿದೆ.
ವಿಬ್ಗಯಾರ್ ಸಿಐಸಿಎಸ್ಇ ನಿಮಯವನ್ನು ಉಲ್ಲಂಘಿಸಿದೆ. ಸಿಐಸಿಎಸ್ಇ ಪ್ರಮಾಣ ಪತ್ರವಿಲ್ಲದೇ ಯಾವುದೇ ಶಾಲೆ ಐಸ್ಎಸ್ಇ ಪಠ್ಯ ಕ್ರಮದಲ್ಲಿ ಬೋಧಿಸುವ ಹಾಗಿಲ್ಲ ಎಂದು ಸಿಐಸಿಎಸ್ಇ ಮುಖ್ಯಸ್ಥ, ಡಾ. ಜೋಸ್ ಐಕರ ಪ್ರತಿಕ್ರಿಯೆ ನೀಡಿದ್ದಾರೆ.[ವಿಬ್ ಗಯಾರ್ ಶಾಲೆಯ ಸಂಸ್ಥಾಪಕನ ಬಂಧನ]
ಸಿಐಎಸ್ಸಿಇ ನಿಮಮವನ್ನು ಉಲ್ಲಂಘಿಸಿದ ಜೊತೆಗೆ ವಿಬ್ಗಯಾರ್ ಶಾಲೆ ಕರ್ನಾಟಕ ಶಿಕ್ಷಣ ಕಾಯ್ದೆ ನಿಯಮವನ್ನು ಸಹ ಉಲ್ಲಂಘಿಸಿದೆ.
2006-07ರಲ್ಲಿ ಒಂದರಿಂದ ಐದನೇ ತರಗತಿಯವರೆಗೆ ಶಾಲೆಯಲ್ಲಿ ಕನ್ನಡ ಮಾಧ್ಯಮಲ್ಲಿ ಶಿಕ್ಷಣ ನೀಡುತ್ತೇವೆ ಎಂದು ಬಿಇಒರಿಂದ ಅನುಮತಿ ಪಡೆದಿದ್ದ ಆಡಳಿತ ಮಂಡಳಿ ಕನ್ನಡ ಮಾಧ್ಯಮದಲ್ಲಿ ಶಿಕ್ಷಣ ನೀಡದೇ ಇಂಗ್ಲಿಷ್ ಮಾಧ್ಯಮದಲ್ಲಿ ಶಿಕ್ಷಣ ನೀಡುತ್ತಿದೆ.
ಕರ್ನಾಟಕ ಶಿಕ್ಷಣ ಕಾಯ್ದೆಯ ಅಡಿಯಲ್ಲಿ ಶಾಲೆ ನೋಂದಣಿಯಾಗಿದ್ದರೂ ಕನ್ನಡವನ್ನು ಮಾಧ್ಯಮ ಬಿಡಿ ಕನ್ನಡ ಭಾಷೆಯನ್ನು ಬೋಧನೆಯಲ್ಲಿ ಸೇರಿಸದೇ ನಿಯಮವನ್ನು ಉಲ್ಲಂಘನೆ ಮಾಡಿರುವ ಅಂಶವು ಇದೀಗ ಬೆಳಕಿಗೆ ಬಂದಿದೆ.
ಶಾಲೆಯ ಶೈಕ್ಷಣಿಕ ವಿಭಾಗದ ನಿರ್ದೇಶಕಿ ಕವಿತಾ ಸಾಹಿ ಈ ಬಗ್ಗೆ ಪ್ರತಿಕ್ರಿಯೆ ನೀಡಿ, ಶಾಲೆ 2007ರಿಂದ ಬೆಂಗಳೂರಿನಲ್ಲಿ ಕಾರ್ಯಾರಂಭಗೊಂಡಿದ್ದು, ಮೂರು ಅಥವಾ ನಾಲ್ಕು ವರ್ಷದ ಹಿಂದೆ ಐಸಿಎಸ್ಇ ಸದಸ್ಯತ್ವವನ್ನು ಪಡೆದಿದ್ದೇವೆ ಎಂದು ಹೇಳಿದ್ದಾರೆ.
-
ಬಳ್ಳಾರಿ ಹಾಸ್ಟೆಲ್ ಹಲ್ಲೆ ಪ್ರಕರಣ: ತಲೆಮರೆಸಿಕೊಂಡಿದ್ದ ಅಪ್ರಾಪ್ತ ಆರೋಪಿ ಪೊಲೀಸ್ ವಶಕ್ಕೆ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ












Click it and Unblock the Notifications