ಮೇ 13ರಂದು ರಂಗಶಂಕರದಲ್ಲಿ ತಪ್ಪದೇ ಚೆರಿ ತೋಟದಲ್ಲಿ ವಿಹರಿಸಿ
ರಂಗಕರ್ಮಿ ವೆಂಕಟೇಶ್ ಪ್ರಸಾದ್ ನೇತೃತ್ವದ ಬೆಂಗಳೂರು ಥಿಯೇಟರ್ ಕಂಪನಿ, ಆಂಟನ್ ಚೆಕಾಫ್ ನ 'ದಿ ಚೆರ್ರಿ ಆರ್ಚರ್ಡ್' ನಾಟಕದ ಕನ್ನಡಾನುವಾದ, ಚೆರ್ರಿ ತೋಟ ನಾಟಕವನ್ನು ಮತ್ತೊಮ್ಮೆ ರಂಗಶಂಕರದಲ್ಲಿ ಮೂಡಿಸುತ್ತಿದೆ.
ಬೆಂಗಳೂರು, ಮೇ 11:ರಂಗಕರ್ಮಿ ವೆಂಕಟೇಶ್ ಪ್ರಸಾದ್ ನೇತೃತ್ವದ ಬೆಂಗಳೂರು ಥಿಯೇಟರ್ ಕಂಪನಿ, ಆಂಟನ್ ಚೆಕಾಫ್ ನ 'ದಿ ಚೆರ್ರಿ ಆರ್ಚರ್ಡ್' ನಾಟಕದ ಕನ್ನಡಾನುವಾದ, ಚೆರ್ರಿ ತೋಟ ನಾಟಕವನ್ನು ಮತ್ತೊಮ್ಮೆ ರಂಗಶಂಕರದಲ್ಲಿ ಮೂಡಿಸುತ್ತಿದೆ.
ಬೆಂಗಳೂರು ಥೀಯೇಟರ್ ಕಲೆಕ್ಟಿವ್ ತನ್ನ ಚೊಚ್ಚಲ ಪ್ರಯೋಗದ 20 ಮತ್ತು 21 ನೇ ಪ್ರದರ್ಶನಕ್ಕೆ ಸಿದ್ಧವಾಗುತ್ತಿದೆ.
ಇದೇ ಮೇ 13 ಕ್ಕೆ ನಮ್ಮ ತಂಡ ಬೆಂಗಳೂರು ಥೀಯೇಟರ್ ಕಲೆಕ್ಟಿವ್ ನ ಮೊದಲ ಪ್ರಯೋಗ , ಆಂಟನ್ ಚೆಕೋವ್ ನ ದಿ ಚೆರ್ರಿ ಆರ್ಚರ್ಡ್ ನಾಟಕದ ಆಧಾರಿತ 'ಚೆರ್ರಿ ತೋಟ' 20 ಮತ್ತು 21 ನೇ ಪ್ರದರ್ಶನ ಕಾಣುತ್ತಿದೆ .

ಬದಲಾದ ಸಾಮಾಜಿಕ, ರಾಜಕೀಯ ವ್ಯವಸ್ಥೆಗಳು ತೋರಬಹುದಾದ ಪಲ್ಲಟಗಳು, ಸ್ಥಿತ್ಯಂತರಗಳನ್ನು ಒಂದು ಚೆರ್ರಿ ತೋಟದ ಪ್ರತಿಮೆಯ ಮೂಲಕ ರಷ್ಯಾದ ಮಹಾನ್ ಲೇಖಕ, ನಾಟಕಕಾರ ಆಂಟನ್ ಚೆಕಾಫ್ 1904 ರಲ್ಲಿ ಬರೆದ ತನ್ನ ಕೊನೆಯ ನಾಟಕ 'ದಿ ಚೆರ್ರಿ ಆರ್ಚರ್ಡ್', ತನ್ನ ದೇಶ, ಕಾಲಗಳನ್ನು ಮೀರಿ ಪ್ರಸ್ತುತವಾಗಿದೆ ಮತ್ತು ವಿಶ್ವದ ಶ್ರೇಷ್ಟ ನಾಟಕ ಕೃತಿಗಳಲ್ಲಿ ಒಂದೆಂದು ಪರಿಗಣಿಸಲ್ಪಟ್ಟಿದೆ.
ನಾಟಕದ ಕೇಂದ್ರವಾದ ಚೆರ್ರಿ ತೋಟ, ಹಲವು ಪ್ರತಿಮೆಗಳ ಸಂಕೇತವಾಗಿ ಕಾಣುತ್ತದೆ. ಬಾಲ್ಯದ ಸುಂದರ ನೆನಪುಗಳ ಪ್ರತೀಕವಾಗಿ ಒಮ್ಮೆ ಚೆರ್ರಿ ತೋಟ ಕಂಡರೆ, ಪರಿಸರ-ಪೃಕೃತಿಯ ಸುಂದರ ದೃಶ್ಯವಾಗಿ, ಶತಮಾನಗಳ ಕಾಲ ಜನಸಮುದಾಯದಲ್ಲಿ ಬೇರು ಬಿಟ್ಟಿರುವ ನಂಬಿಕೆಯಾಗಿ; ಹೀಗೆ ಹಲವು ಧ್ವನಿಗಳನ್ನು, ಹಲವು ಅರ್ಥಗಳನ್ನು ಹೊಮ್ಮಿಸುತ್ತಾ ಸಾಗುವ ನಾಟಕ, ಭಾರತದಂತ ಭಿನ್ನ ವ್ಯವಸ್ಥೆಯಲ್ಲೂ ಪ್ರಸ್ತುತವಾಗಿ ಕಾಣುವ ಮೂಲಕ ಸಾರ್ವಕಾಲಿಕ ಶ್ರೇಷ್ಟ ನಾಟಕವೆಂದೆನಿಸಿಕೊಳ್ಳುತ್ತದೆ.
ಒಂದು ಕಡೆ ಜಮೀನ್ದಾರಿ ಪದ್ದತಿಯ ಪಾಳೇಗಾರೀ ಮೌಲ್ಯಗಳನ್ನು ಉಳಿಸಿಕೊಳ್ಳುತ್ತ, ಪೋಷಿಸುತ್ತಾ, ಮತ್ತೊಂದು ಕಡೆ ಉದಾರೀಕರಣ, ಮುಕ್ತ ಮಾರುಕಟ್ಟೆಯ ಬಂಡವಾಳಷಾಹಿ ವ್ಯವಸ್ಥೆಗೆ ತನ್ನನ್ನು ತೆರೆದುಕೊಳ್ಳುತ್ತ, ಸಮಾಜವಾದದ ಕನಸನ್ನೂ ಕಾಣುತ್ತ ಸಾಗುತ್ತಿರುವ ಭಾರತದ ಪರಿಸ್ಥಿತಿಯಲ್ಲಿ, ಚೆರ್ರಿ ತೋಟವನ್ನು ಗಟ್ಟಿ ಬೇರು ಬಿಟ್ಟ ಸಾಮಾಜಿಕ ವ್ಯವಸ್ಥೆಯೊಂದರ ಪ್ರತೀಕವಾಗಿ ನೋಡಲು ನಾವು ಪ್ರಯತ್ನಿಸಿದ್ದೇವೆ.
ಚೆರ್ರಿ ತೋಟ
ಮೂಲ : ಆಂಟನ್ ಚೆಕಾಫ್
ಕನ್ನಡಕ್ಕೆ : ವೆಂಕಟೇಶ್ ಪ್ರಸಾದ್
ಪ್ರಸ್ತುತಿ : ಬೆಂಗಳೂರು ಥಿಯೇಟರ್ ಕಂಪನಿ
ವಿನ್ಯಾಸ ಮತ್ತು ನಿರ್ದೇಶನ : ವೆಂಕಟೇಶ್ ಪ್ರಸಾದ್
ಸ್ಥಳ : ರಂಗಶಂಕರ
ದಿನಾಂಕ ಮತ್ತು ಸಮಯ : 13/05/2017 | 3:30 & 7:30
ಟಿಕೆಟ್ ದರ : ರೂ. 100/-
ಸಂಪರ್ಕಿಸಬೇಕಾದದೂರವಾಣಿ ಸಂಖ್ಯೆ : 9900182400
ವೆಬ್ ಸೈಟ್ : www.bookmyshow.com
(ಒನ್ಇಂಡಿಯಾ ಸುದ್ದಿ)
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications