ಡಾ ಯುಆರ್ ಅನಂತಮೂರ್ತಿಗೆ ಟಿಪ್ಪು ರಾಷ್ಟ್ರೀಯ ಪ್ರಶಸ್ತಿ

ಗಮನಾರ್ಹವೆಂದರೆ ನರೇಂದ್ರ ಮೋದಿ ಪ್ರಧಾನಿಯಾಗುವ ನಾಡಿನಲ್ಲಿ ತಾನು ಇರುವುದಿಲ್ಲ ಎಂದು ಹೇಳಿದ್ದ ನಾಡಿನ ಹಿರಿಯ ಸಾಹಿತಿ, ಜ್ಞಾನಪೀಠ ಪ್ರಶಸ್ತಿ ವಿಜೇತ ಡಾ. ಯುಆರ್ ಅನಂತಮೂರ್ತಿ ಅವರಿಗೆ 'ಟಿಪ್ಪು ಸುಲ್ತಾನ್ ರಾಷ್ಟ್ರೀಯ ಪ್ರಶಸ್ತಿ' ಘೋಷಿಸಲಾಗಿದೆ.
ಮೈಸೂರು ದೊರೆ ಟಿಪ್ಪು ಸುಲ್ತಾನ್ 264ನೇ ಜನ್ಮದಿನ ಅಂಗವಾಗಿ ನ. 18ರಂದು (ಅಂದರೆ ಮೋದಿ ಬೆಂಗಳೂರಿಗೆ ಬಂದು ಹೋದ ಮಾರನೆಯ ದಿನ) ಟಿಪ್ಪು ಸುಲ್ತಾನ್ ರಾಷ್ಟ್ರೀಯ ಪ್ರಶಸ್ತಿಯು ಡಾ ಯುಆರ್ ಅನಂತಮೂರ್ತಿ ಅವರಿಗೆ ಪ್ರದಾನವಾಗಲಿದೆ.
ಪ್ರಶಸ್ತಿ ಕೊಡಮಾಡುತ್ತಿರುವ ಟಿಪ್ಪು ಸುಲ್ತಾನ್ ಸಂಯುಕ್ತ ರಂಗವು ಅನಂತಮೂರ್ತಿ ಅವರ ಜತೆಗೆ ಇನ್ನೂ ಇಬ್ಬರಿಗೆ ಪ್ರಶಸ್ತಿ ಕೊಡಮಾಡುತ್ತಿದೆ ಎಂದು ರಂಗದ ರಾಜ್ಯಾಧ್ಯಕ್ಷ ಸರ್ದಾರ್ ಅಹಮದ್ ಖುರೇಶಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಅಹಿಂದ ಕಾರ್ಯಕಾರಿ ರಾಜ್ಯಾಧ್ಯಕ್ಷ ಪ್ರೊ. ಎನ್ ವಿ ನರಸಿಂಹಯ್ಯ ಹಾಗೂ ಸಮಾಜ ಸೇವಕ ಪ್ರೊ. ನಾಜನೀನ್ ಬೇಗಂ ಅವರಿಗೂ ಪ್ರಶಸ್ತಿ ಘೋಷಿಸಲಾಗಿದೆ.
ನಗರದ ಪುರಭವನದಲ್ಲಿ ಸೋಮವಾರ ಬೆಳಗ್ಗೆ 11 ಗಂಟೆಗೆ ಕೇಂದ್ರ ಮಾಜಿ ಸಚಿವ ಸಿಕೆ ಜಾಫರ್ ಷರೀಫ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಈ ಸಂದರ್ಭದಲ್ಲಿ ಪ್ರಾಥಮಿಕ ಶಾಲೆಗಳ ಬಡ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ ವಿತರಿಸಲಾಗುವುದು ಎಂದು ಅಹಮದ್ ಖುರೇಶಿ ಹೇಳಿದ್ದಾರೆ. (ಚಿತ್ರ)
-
Property Mutation: ಆಸ್ತಿ ನೋಂದಣಿ ನಂತರ ಶೇ.98ರಷ್ಟು ಖಾತೆಗಳು ಸ್ವಯಂ ಚಾಲಿತವಾಗಿ ಬದಲಾವಣೆ: ಸಚಿವ ಕೃಷ್ಣ ಬೈರೇಗೌಡ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಲಂಡನ್ ಮೆಟ್ರೋಗಿಂತ ಬೆಂಗಳೂರಿನ 'ನಮ್ಮ ಮೆಟ್ರೋ' ಬೆಸ್ಟ್: Viral ಪೋಸ್ಟ್ನಲ್ಲಿ ಅಚ್ಚರಿಯ ಸತ್ಯ ಬಿಚ್ಚಿಟ್ಟ ಯುವತಿ -
Gold Price Today: ಯುಗಾದಿಗೂ ಮೊದಲೇ ಚಿನ್ನದ ದರದಲ್ಲಿ ಭಾರೀ ಇಳಿಕೆ; ಆಭರಣ ಪ್ರಿಯರಿಗೆ ಇಂದೇ ಹಬ್ಬ -
Karnataka: ಧಾರ್ಮಿಕ ಮೆರವಣಿಗೆ, ಜಯಂತಿಗಳಲ್ಲಿ DJ ಸದ್ದಿಗೆ ಬ್ರೇಕ್? 'ಐಟಂ ಸಾಂಗ್' ಬ್ಯಾನ್ ಮಾಡಲು ರಾಜ್ಯ ಸರ್ಕಾರ ಒಲವು -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಯುದ್ಧದ ಬಿಸಿ: ಬೆಂಗಳೂರಿಗೆ ಅರಬ್ ರಾಷ್ಟ್ರಗಳ ವಿಮಾನ ಸಂಚಾರ ಕಡಿತ; ರಾಜ್ಯ ಟ್ರಾವೆಲ್ಸ್ ಮಾಲೀಕರಲ್ಲಿ ಆತಂಕ -
ಉನ್ನತ ಶಿಕ್ಷಣಕ್ಕೆ ಭಾರತದ ಯಾವ ನಗರ ಬೆಸ್ಟ್? QS ರ್ಯಾಂಕಿಂಗ್ ಪಟ್ಟಿಯಲ್ಲಿದೆ ಬೆಂಗಳೂರು ಸೇರಿದಂತೆ 4 ನಗರಗಳ ಹೆಸರು -
SSLC ಪರೀಕ್ಷೆ-1 ಆರಂಭ: ಮಲ್ಲೇಶ್ವರಂನ ಕೆಪಿಎಸ್ ಶಾಲೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ವಿದ್ಯಾರ್ಥಿಗಳಿಗೆ ಶುಭಹಾರೈಕೆ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್












Click it and Unblock the Notifications