ರಸ್ತೆಯಲ್ಲಿ ಹೋಗುವಾಗ ಸದಾ ಹೇಳಿ ತಾವು ಮೊದಲು!
ಬೆಂಗಳೂರು, ಜ.20 : ಸಾರಿಗೆ ಇಲಾಖೆ ಮತ್ತು ಬೆಂಗಳೂರು ನಗರ ಪೊಲೀಸರು ಜಂಟಿಯಾಗಿ 25ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ-2014 ಅನ್ನು ಹಮ್ಮಿಕೊಂಡಿದ್ದು ಜ.22ರಂದು ಸಪ್ತಾಹಕ್ಕೆ ಚಾಲನೆ ದೊರೆಯಲಿದೆ. ತಾವು ಮೊದಲು ಎಂಬ ಘೋಷವಾಕ್ಯದಡಿ ಜ.27ರವರೆಗೆ ಈ ಸಪ್ತಾಹ ನಡೆಯಲಿದೆ.
ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಗೃಹ ಸಚಿವ ಕೆ.ಜೆ.ಜಾರ್ಜ್ ಜ.21ರ ಮಂಗಳವಾರ ಬೆಳಗ್ಗೆ 10.30ಕ್ಕೆ ಸಪ್ತಾಹಕ್ಕೆ ಚಾಲನೆ ನೀಡಲಿದ್ದಾರೆ. ಸಾರಿಗೆ ಮತ್ತು ಬೆಂಗಳೂರು ನಗರ ಉಸ್ತುವಾರಿ ಸಚಿವ ರಾಮಲಿಂಗಾ ರೆಡ್ಡಿ, ಹಜ್ ಮತ್ತು ಮೂಲ ಸೌಕರ್ಯ ಅಭಿವೃದ್ಧಿ ಸಚಿವ ರೋಷನ್ ಬೇಗ್ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿರುವರು.

"ರಸ್ತೆಯಲ್ಲಿ ಹೋಗುವಾಗ ಸದಾ ಹೇಳಿ ತಾವು ಮೊದಲು" ಎಂಬ ಘೋಷವಾಕ್ಯದಡಿ ಜ.21ರಿಂದ 27ರವರೆಗೆ ಈ ಸಪ್ತಾಹ ನಡೆಯಲಿದೆ. ಸಾರಿಗೆ ಇಲಾಖೆ ಆಯುಕ್ತ ಕೆ.ಅಮರನಾರಾಯಣ, ಬೆಂಗಳೂರು ಪೊಲೀಸ್ ಆಯುಕ್ತ ರಾಘವೇಂದ್ರ ಔರಾದ್ಕರ್, ಸಂಚಾರ ಅಪಾರ ಪೊಲೀಸ್ ಆಯುಕ್ತ ಬಿ.ದಯಾನಂದರು ಮುಂತಾದವರು ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. [ಬೆಂಗಳೂರಿಗೆ ಬರಲಿದೆ ಬೈಕ್ ಆ್ಯಂಬುಲೆನ್ಸ್]












Click it and Unblock the Notifications