ಬೆಂಗಳೂರು-ಚಾ.ನಗರ ನಡುವೆ ವೋಲ್ವೋ ಬಸ್

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಬೆಂಗಳೂರು-ಚಾಮರಾಜನಗರ ನಡುವಿನ ನೇರ ವೋಲ್ವೋ ಬಸ್ ಸಂಚಾರ ಪ್ರಾರಂಭಿಸಿದೆ. ಬೆಂಗಳೂರಿನಿಂದ ಮದ್ದೂರು, ಕೊಳ್ಳೆಗಾಲ ಮೂಲಕ ಈ ಬಸ್ ಚಾಮರಾಜನಗರ ತಲುಪಲಿದೆ.
ಬೆಂಗಳೂರಿನಿಂದ ಪ್ರತಿನಿತ್ಯ ಬೆಳಗ್ಗೆ ಬಸ್ 6.30ಕ್ಕೆ ಹೊರಟು 10.30ಕ್ಕೆ ಚಾಮರಾಜನಗರ ತಲುಪಲಿದೆ. ಹಾಗೆಯೇ ಬೆಳಗ್ಗೆ 6 ಗಂಟೆಗೆ ಚಾಮರಾಜನಗರದಿಂದ ಹೊರಟು ಬೆಳಗ್ಗೆ 10ಕ್ಕೆ ಬೆಂಗಳೂರು ತಲುಪಲಿದೆ.
ಅದೇರೀತಿ ಸಂಜೆ 5 ಗಂಟೆಗೆ ಬೆಂಗಳೂರಿನಿಂದ ಹೊರಡುವ ಬಸ್, 9 ಗಂಟೆಗೆ ಚಾಮರಾಜನಗರ ತಲುಪಲಿದೆ. ಚಾಮರಾಜನಗರದಿಂದ ಮಧ್ಯಾಹ್ನ 1 ಗಂಟೆಗೆ ಹೊರಡುವ ಬಸ್ ಸಂಜೆ 5 ಗಂಟೆಗೆ ಬೆಂಗಳೂರಿಗೆ ಆಗಮಿಸಲಿದೆ.
ಬೆಂಗಳೂರು-ಚಾಮರಾಜನಗರ ನಡುವಿನ ಸಂಚಾರಕ್ಕೆ 190 ರೂ. ಪ್ರಯಾಣ ದರ ನಿಗದಿಪಡಿಸಲಾಗಿದೆ. ಬಸ್ ನಲ್ಲಿ ಪ್ರಯಾಣಿಸಲು ಮುಂಗಡ ಟಿಕೆಟ್ ಕಾಯ್ದಿರಿಸಲು www.ksrtc.in ವೆಚ್ ಸೈಟ್ ಗೆ ಭೇಟಿ ನೀಡಬಹುದು ಎಂದು ಕೆಎಸ್ಆರ್ ಟಿಸಿ ತಿಳಿಸಿದೆ.
40 ತನಿಖಾ ತಂಡ : ಕೆಎಸ್ಆರ್ ಟಿಸಿ ದಸರಾ ಪ್ರಯುಕ್ತ ಹೆಚ್ಚುವರಿಯಾಗಿ ವಿವಿಧ ಜಿಲ್ಲೆಗಳಿಂದ ಮೈಸೂರಿಗೆ ಬಸ್ ಸೌಲಭ್ಯ ಒದಗಿಸಿದೆ. ಈ ಬಸ್ಗಳಲ್ಲಿ ಟಿಕೆಟ್ ರಹಿತ ಪ್ರಯಾಣಿಕರ ತಪಾಸಣೆಗಾಗಿ 40 ತನಿಖಾ ತಂಡಗಳನ್ನು ರಚಿಸಿದೆ.
ಮೈಸೂರು, ಚಾಮರಾಜನಗರ, ಮಂಡ್ಯ, ಬೆಂಗಳೂರು, ತುಮಕೂರು, ಹಾಸನ, ಪುತ್ತೂರು ಮತ್ತು ಮಂಗಳೂರಿನಲ್ಲಿ ತಡರಾತ್ರಿ, ಬೆಳಗಿನ ಜಾವ ಹಾಗೂ ಅಂತರರಾಜ್ಯ ಬಸ್ಗಳಲ್ಲಿ ತನಿಖಾ ತಂಡಗಳು ತಪಾಸಣೆ ನಡೆಸಲಿವೆ. ಟಿಕೆಟ್ ರಹಿತರು ಸಿಕ್ಕಿಬಿದ್ದರೆ ಪ್ರಯಾಣ ದರದ 10 ಪಟ್ಟು ದಂಡ ವಿಧಿಸಲಾಗುತ್ತದೆ ಎಂದು ಸಂಸ್ಥೆ ತಿಳಿಸಿದೆ.
-
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು












Click it and Unblock the Notifications