ಶನಿವಾರ ಅರ್ಥ್ ಅವರ್ ಅಭಿಯಾನದಲ್ಲಿ ಪಾಲ್ಗೊಳ್ಳಿ
ಬೆಂಗಳೂರು, ಮಾ. 29 : ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಜಾಗತಿಕ ತಾಪಮಾನವನ್ನು ತಗ್ಗಿಸುವ ಸಂದೇಶ ಸಾರುವ 'ಅರ್ಥ್ ಅವರ್ ಮರಳಿ ಬಂದಿದೆ. ಶನಿವಾರ ರಾತ್ರಿ ವಿವಿಧ ದೇಶಗಳು ಒಂದು ಗಂಟೆಗಳ ಕಾಲ ವಿದ್ಯುತ್ ದೀಪಗಳನ್ನು ಆರಿಸುವ ಮೂಲಕ ಅರ್ಥ್ ಅವರ್ ಆಚರಿಸಲಿವೆ.
ಭಾರತದಲ್ಲೂ ಆರ್ಥ್ ಅವರ್ ಆಚರಿಸಲಾಗುತ್ತಿದೆ. ಭಾರತೀಯ ಕಾಲಮಾನದ ಪ್ರಕಾಶ ಇಂದು ರಾತ್ರಿ 8.30ರಿಂದ 9.30ರವರೆಗೆ ಈ ಅಭಿಯಾನ ನಡೆಯಲಿದೆ. ಬೆಂಗಳೂರು ಸೇರಿದಂತೆ ಜಗತ್ತಿನ 7 ಸಾವಿರಕ್ಕೂ ಹೆಚ್ಚು ನಗರಗಳು ಈ ಅರ್ಥ್ ಅವರ್ ಅಭಿಯಾನದಲ್ಲಿ ಪಾಲ್ಗೊಳ್ಳಲಿವೆ.

ಪರಿಸರ ಸಂರಕ್ಷಣೆಗಾಗಿ ಜನರು ಇಂದು ಒಂದು ಗಂಟೆಗಳ ಕಾಲ ವಿದ್ಯುತ್ ದೀಪಗಳನ್ನು ಆರಿಸುವ ಮೂಲಕ ಅರ್ಥ್ ಅವರ್ ಅಭಿಯಾನದಲ್ಲಿ ಪಾಲ್ಗೊಳ್ಳಬೇಕು ಎಂದು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಬೆಂಗಳೂರಿನ ಜನರಿಗೆ ಮನವಿ ಮಾಡಿದೆ. ರಾತ್ರಿ 8.30ರಿಂದ 9.30ರವರೆಗೆ ವಿದ್ಯುತ್ ದೀಪಗಳನ್ನು ಆರಿಸಿ ಎಂದು ಪ್ರಕಟಣೆಯಲ್ಲಿ ಕೋರಿದೆ. [ಮೋದಿ ಮಾತನ್ನು ಕನ್ನಡದಲ್ಲಿ ಕೇಳಿರಿ]
ಜಗತ್ತಿನ ಅನೇಕ ರಾಷ್ಟ್ರಗಳು ಎಂದಿನಂತೆ ಅರ್ಥ್ ಅವರ್ ಅಭಿಯಾನದಲ್ಲಿ ಪಾಲ್ಗೊಳ್ಳಲಿದ್ದು, ನ್ಯೂಯಾರ್ಕ್ ನ ಎಂಪೈರ್ ಸ್ಟೇಟ್ ಬಿಲ್ಡಿಂಗ್, ಬರ್ಲಿನ್ನ ಬ್ರಂಡೆನ್ ಬರ್ಗ್ ಗೇಟ್, ಪ್ಯಾರಿಸ್ ನ ಐಫೆಲ್ ಟವರ್, ಮಾಸ್ಕೊದ ರೆಡ್ ಸ್ಕ್ವೆಯರ್, ಬ್ರಿಟನ್ ನ ಬಕ್ಕಿಂಗ್ಹ್ಯಾಮ್ ಪ್ಯಾಲೇಸ್, ಹೀಗೆ ಅನೇಕ ತಾಣಗಳಲ್ಲಿ ಅರ್ಥ್ ಅವರ್ ಜಾರಿಯಾಗಲಿದೆ.
ಅರ್ಥ್ ಅವರ್ ಅಭಿಯಾನವನ್ನು ಆರಂಭಿಸಿದ್ದು, ಆಸ್ಟ್ರೇಲಿಯಾದ 'ವರ್ಲ್ಡ್ ವೈಡ್ ಫಂಡ್ ಫಾರ್ ನೇಚರ್' (ಡಬ್ಲ್ಯೂಡಬ್ಲ್ಯೂಎಫ್) ಎಂಬ ಸ್ವಯಂ ಸೇವಾ ಸಂಸ್ಥೆ. 2007ರಲ್ಲಿ ಸಿಡ್ನಿಯಲ್ಲಿ ಆರಂಭವಾದ ಅಭಿಯಾನಕ್ಕೆ ಸದ್ಯ ಅಂತಾರಾಷ್ಟ್ರೀಯ ಮನ್ನಣೆ ದೊರಕಿದೆ. ಈ ವರ್ಷದ ಅಭಿಯಾನದಲ್ಲಿ ಸುಮಾರು 200 ಕೋಟಿ ಜನರನ್ನು ಸೇರಿಸಿಕೊಳ್ಳುವ ಗುರಿ ಹೊಂದಲಾಗಿದೆ.
2013ರಲ್ಲಿ ನಡೆದ ಅರ್ಥ್ ಅವರ್ ಅಭಿಯಾನದಲ್ಲಿ 154 ದೇಶಗಳ 7 ಸಾವಿರ ಪಟ್ಟಣಗಳು ಪಾಲ್ಗೊಂಡಿದ್ದವು. ನೀವು ಸಹ ಇಂದು ರಾತ್ರಿ 8.30ರಿಂದ 9.30ರ ವರೆಗೆ ವಿದ್ಯುತ್ ದೀಪಗಳನ್ನು ಆರಿಸುವ ಮೂಲಕ ಅರ್ಥ್ ಅವರ್ ಅಭಿಯಾನಲ್ಲಿ ಪಾಲ್ಗೊಳ್ಳಿ.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications