ಮುಖ್ಯಮಂತ್ರಿ ಪರಿಹಾರ ನಿಧಿಗೆ ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ದೇಣಿಗೆ
ಬೆಂಗಳೂರು, ಮೇ 18: ಕರ್ನಾಟಕ ಮುಖ್ಯಮಂತ್ರಿ ಪರಿಹಾರ ನಿಧಿಗೆ ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ವೇಣುಗೋಪಾಲ್ ಕೆ.ಆರ್ ದೇಣಿಗೆ ನೀಡಿದ್ದಾರೆ. ರಾಜ್ಯದಲ್ಲಿನ ಕೋವಿಡ್ 19 ಸಂಕಷ್ಟದ ಪರಿಸ್ಥಿತಿಗೆ ನೆರವು ನೀಡಿದ್ದಾರೆ.
ಕುಲಪತಿ ಪ್ರೊ. ವೇಣುಗೋಪಾಲ್ ಕೆ.ಆರ್ ಅವರು ತಮ್ಮ ಒಂದು ತಿಂಗಳ ಸಂಬಳವನ್ನು ದೇಣಿಗೆ ನೀಡಿದ್ದಾರೆ. ಬೆಂಗಳೂರು ವಿಶ್ವವಿದ್ಯಾಲಯದ ಶಿಕ್ಷಕ ಹಾಗೂ ಶಿಕ್ಷೇತರ ನೌಕರರ ಒಂದು ದಿನದ ಸಂಬಳದ ಒಟ್ಟು ಮೊತ್ತ ರೂ. 24,62,879 ಮತ್ತು ಕುಲಪತಿ ಪ್ರೊ. ವೇಣುಗೋಪಾಲ್ ಕೆ.ಆರ್ ಅವರ ಒಂದು ತಿಂಗಳಿನ ವೈಯಕ್ತಿಕ ಸಂಬಳ ರೂ.1,64,998 ಗಳನ್ನು ನೀಡಿದ್ದಾರೆ.
ಯಡಿಯೂರಪ್ಪರನ್ನು ಭೇಟಿ ಮಾಡಿದ ವಿಶ್ವವಿದ್ಯಾಲಾಯದ ಕುಲಪತಿ ಪ್ರೊ. ವೇಣುಗೋಪಾಲ್ ಕೆ.ಆರ್ ಅವರು ಮುಖ್ಯಮಂತ್ರಿಯವರಿಗೆ ಮೇಲ್ಕಾಣಿಸಿದ ಮೊತ್ತಗಳ ಚೆಕ್ ಗಳನ್ನು ಹಸ್ತಾಂತರಿಸಿದರು. ಕೋವಿಡ್-19 ಕೊರೊನಾ ವೈರಸ್ ಸೋಂಕು ರೋಗದ ಹತೋಟಿಗಾಗಿ ನೆರವು ನೀಡಿದರು.

ಇಂದಿಗೆ ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1246ಕ್ಕೆ ಏರಿಕೆಯಾಗಿದೆ. ಇಂದು 99 ಪಾಸಿಟಿವ್ ಕೇಸ್ಗಳು ಇಂದು ಹೊಸದಾಗಿ ಪತ್ತೆದಾಗಿದೆ. 37 ಸಾವು ಸಂಬವಿಸಿದೆ.












Click it and Unblock the Notifications