ಕೊರೊನಾ ಸೋಂಕು ಮತ್ತು ಬಸ್ ಮುಷ್ಕರ: ಬೆಂಗಳೂರು ವಿವಿ ಪರೀಕ್ಷೆಗಳು ಮುಂದೂಡಿಕೆ
ಬೆಂಗಳೂರು, ಏಪ್ರಿಲ್ 19: ರಾಜಧಾನಿ ಬೆಂಗಳೂರಿನಲ್ಲಿ ಕೋವಿಡ್-19 ಸೋಂಕು ಪ್ರಕರಣಗಳ ಹೆಚ್ಚಳದಿಂದಾಗಿ ಏ.19, 20 ಮತ್ತು 21ರಿಂದ ನಡೆಯಬೇಕಿದ್ದ ಪದವಿ ಮತ್ತು ಸ್ನಾತಕೋತ್ತರ ಪದವಿಯ ಸೆಮಿಸ್ಟರ್ ಪರೀಕ್ಷೆಗಳನ್ನು ಬೆಂಗಳೂರು ವಿಶ್ವವಿದ್ಯಾಲಯ ಮುಂದೂಡಿದೆ.
ಬೆಂಗಳೂರು ವಿಶ್ವವಿದ್ಯಾನಿಲಯವು ಪದವಿ ಕೋರ್ಸ್ಗಳ ಮೊದಲ, ಮೂರನೇ ಮತ್ತು ಐದನೇ ಸೆಮಿಸ್ಟರ್ ಪರೀಕ್ಷೆಗಳು, ಸ್ನಾತಕೋತ್ತರ ಪದವಿಯ ಮೊದಲ ಹಾಗೂ ಮೂರನೇ ಸೆಮಿಸ್ಟರ್ ಪರೀಕ್ಷೆಗಳನ್ನು ಮುಂದೂಡಿದೆ ಎಂದು ವಿವಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಎಂ.ಎ, ಎಂ.ಎಸ್ಸಿ ಮತ್ತು ಎಂಕಾಮ್ ಸೇರಿದಂತೆ ಕಾರ್ಯಕ್ರಮಗಳ ಮೂರನೇ ಸೆಮಿಸ್ಟರ್ ಸ್ನಾತಕೋತ್ತರ ಸೆಮಿಸ್ಟರ್ ಪರೀಕ್ಷೆಗಳನ್ನು ವಿಶ್ವವಿದ್ಯಾಲಯವು ಮುಂದೂಡಿದೆ.

ಎಂಸಿಎ ಮತ್ತು ಬಿ.ಎಸ್ಸಿ-ಎಂ.ಎಸ್ಸಿ ಜೈವಿಕ ವಿಜ್ಞಾನ ಮತ್ತು ಎಂಟಿಎ ಐದು ವರ್ಷಗಳ ಇಂಟಿಗ್ರೇಟೆಡ್ ಕೋರ್ಸ್ ಸೇರಿದಂತೆ ಕಾರ್ಯಕ್ರಮಗಳಿಗೆ ಮೂರನೇ ಮತ್ತು ಐದನೇ ಸೆಮಿಸ್ಟರ್ ಪರೀಕ್ಷೆಗಳನ್ನು ಸಹ ಮುಂದೂಡಲಾಗಿದೆ. ಈ ಪರೀಕ್ಷೆಗಳನ್ನು ಏಪ್ರಿಲ್ 20 ರಿಂದ ನಡೆಸಲು ನಿರ್ಧರಿಸಲಾಗಿತ್ತು.
Recommended Video
ಬೆಂಗಳೂರು ವಿಶ್ವವಿದ್ಯಾಲಯದ ಉಪ ಕುಲಪತಿ ವೇಣುಗೋಪಾಲ್ ಕೆ.ಆರ್ ಅವರು ಹೇಳಿಕೆ ಬಿಡುಗಡೆ ಮಾಡಿದ್ದು, ಸಾರಿಗೆ ಮತ್ತು ಕೊರೊನಾ ಸೋಂಕು ಹೆಚ್ಚಳದ ಕಾರಣದಿಂದಾಗಿ ವಿಶ್ವವಿದ್ಯಾಲಯದ ಸೆಮಿಸ್ಟರ್ ಪರೀಕ್ಷೆಗಳನ್ನು ಮುಂಮದಿನ ಆದೇಶದವರೆಗೂ ಮುಂದೂಡುವುದಾಗಿ ಘೋಷಿಸಿದ್ದಾರೆ. ವಿಶ್ವವಿದ್ಯಾಲಯವು ಪರೀಕ್ಷೆಯ ಹೊಸ ದಿನಾಂಕಗಳನ್ನು ನಂತರ ಪ್ರಕಟಿಸಲಿದೆ ಎಂದು ತಿಳಿಸಿದ್ದಾರೆ.
-
UPSC ಪೂರ್ವಭಾವಿ ಪರೀಕ್ಷೆ ಮುಗಿದ ತಕ್ಷಣವೇ ಕೀ ಉತ್ತರಗಳ ಬಿಡುಗಡೆಗೆ ಕೇಂದ್ರ ಸರ್ಕಾರದ ನಿರ್ಧಾರ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ












Click it and Unblock the Notifications