ಸಿದ್ದರಾಮಯ್ಯ ಮತ್ತು ಡಿಕೆಶಿ ಸ್ನೇಹಕ್ಕೆ ಸವಾಲ್ ಹಾಕಿದ ಆರ್.ಅಶೋಕ್!
ಬೆಂಗಳೂರು, ಆಗಸ್ಟ್.19: ಇಡೀ ರಾಜ್ಯ ಅತಿವೃಷ್ಠಿಗೆ ತತ್ತರಿಸಿ ಹೋಗುತ್ತಿದ್ದಂತೆ ಬಿಜೆಪಿ ಸರ್ಕಾರವು ಬೆಂಗಳೂರಿನ ಗಲಭೆಯ ಬೆಂಕಿಯಲ್ಲಿ ರಾಜಕೀಯದ ರೊಟ್ಟಿ ಬಡಿಯುತ್ತಾ ಕುಳಿತಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.
Recommended Video
ಕರ್ನಾಟಕದಲ್ಲಿ "ನೊಂದ ಜನರ ಗೋಳು ಅರಣ್ಯರೋದನ. ಅತಿವೃಷ್ಟಿಯ ಪರಿಹಾರದಲ್ಲಿ ಕಳೆದ ವರ್ಷದ ವೈಫಲ್ಯ ಈ ಬಾರಿ ಜನರ ಕಷ್ಟ-ಕಾರ್ಪಣ್ಯಗಳನ್ನು ದುಪ್ಪಟ್ಟುಗೊಳಿಸಿದೆ. ಗೃಹ ಸಚಿವರು ಅತಿವೃಷ್ಟಿ ಸಮೀಕ್ಷೆಗೆ ಪ್ರವಾಸ ಮಾಡುತ್ತಿದ್ದಾರೆ, ಕಂದಾಯ ಸಚಿವರು ಬೆಂಗಳೂರಿನಲ್ಲಿ ಕೂತು ಕಾವಲಭೈರಸಂದ್ರ ಗಲಭೆ ಬಗ್ಗೆ ಹೇಳಿಕೆ ನೀಡುತ್ತಿದ್ದಾರೆ" ಎಂದು ಸಿದ್ದರಾಮಯ್ಯ ಕುಟುಕಿದ್ದಾರೆ.
ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್ ಅಸ್ತ್ರಕ್ಕೆ ಕಂದಾಯ ಸಚಿವ ಆರ್.ಅಶೋಕ್ ಪ್ರತ್ಯಸ್ತ್ರ ಹೂಡಿದ್ದಾರೆ. ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಹಲವು ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿರುವ ಬಗ್ಗೆ ತಿರುಗೇಟು ಕೊಟ್ಟಿದ್ದಾರೆ.
|
ಸಿದ್ದರಾಮಯ್ಯ ಸಿಡಿಮಿಡಿಗೊಳ್ಳುವುದಕ್ಕೆ ಕಾರಣವೇನು?
ರಾಜ್ಯದ ಕಂದಾಯ ಸಚಿವರಿಗೆ ಬೆಂಗಳೂರಿನಲ್ಲೇನು ಕೆಲಸ ಇರುತ್ತದೆ. ಮುಖ್ಯಮಂತ್ರಿಯವರೇ ಮೊದಲು ಕಂದಾಯ ಸಚಿವರನ್ನು ಪ್ರವಾಹ ಪೀಡಿತ ಪ್ರದೇಶಗಳಿಗೆ ಕಳುಹಿಸಿ ಕೊಡಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರಕ್ಕೆ ಆಗ್ರಹಿಸಿದ್ದರು.

ಸಿದ್ದರಾಮಯ್ಯ ಟ್ವೀಟ್ ಗೆ ವಿಷಾದ ವ್ಯಕ್ತಪಡಿಸಿದ ಅಶೋಕ್
ವಿಧಾನಸೌಧದಲ್ಲಿ ಮಾತನಾಡಿದ ಕಂದಾಯ ಸಚಿವ ಆರ್.ಅಶೋಕ್, ಸಿದ್ದರಾಮಯ್ಯ ಟ್ವೀಟ್ ಬಗ್ಗೆ ವಿಷಾದ ವ್ಯಕ್ತಪಡಿಸಿದರು. ಈಗಾಗಲೇ ಪ್ರವಾಹಕ್ಕೆ ತುತ್ತಾದ ಉತ್ತರ ಕನ್ನಡ, ದಕ್ಷಿಣಕನ್ನಡ, ಹಾಸನ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಿಗೆ ಭೇಟಿ ನೀಡಿದ್ದೇನೆ. ಆ ಸಮಯದಲ್ಲಿ ತಾವು ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಗಾಗಿದ್ದೀರಿ. ನನ್ನ ಭೇಟಿ ವಿಚಾರ ತಮಗೆ ಗೊತ್ತಾಗದೇ ಇರುವುದಕ್ಕೆ ನಾನು ವಿಷಾದ ವ್ಯಕ್ತಪಡಿಸುತ್ತೇನೆ ಎಂದು ತಿರುಗೇಟು ಕೊಟ್ಟರು.

ರಾಜ್ಯದಲ್ಲಿ ಪ್ರತಿಪಕ್ಷಕ್ಕೆ ಜವಾಬ್ದಾರಿ ಇಲ್ಲವೇ ಎಂದು ಪ್ರಶ್ನೆ
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಟ್ವೀಟ್ ಬಗ್ಗೆ ಕಂದಾಯ ಸಚಿವ ಆರ್.ಅಶೋಕ್ ವ್ಯಂಗ್ಯವಾಡಿದರು. ಸದನದಲ್ಲಿ ಮಾತನಾಡುವಾದ ಪ್ರತಿಪಕ್ಷವು ಅಸೆಂಬ್ಲಿಯ ನೆರವು ಎನ್ನುತ್ತೀರಿ, ನಿಮಗೂ ವಿಪಕ್ಷವಾಗಿ ಜವಾಬ್ದಾರಿ ಇದೆಯಲ್ಲವೇ. ನೀವು ಎಲ್ಲೆಲ್ಲಿ ಭೇಟಿ ನೀಡಿದ್ದೀರಿ ಎಂದು ಆರ್.ಅಶೋಕ್ ಪ್ರಶ್ನೆ ಮಾಡಿದರು.

"ಡಿಕೆಶಿ, ಸಿದ್ದರಾಮಯ್ಯ ಹೊಂದಾಣಿಕೆಯನ್ನು ತೋರಿಸಲಿ"
ಬೆಂಗಳೂರಿನಲ್ಲಿ ಗಲಭೆ ನಡೆದ ಸ್ಥಳಕ್ಕೆ ನಾನು ತೆರಳಿದರೆ ನಿಮಗೆ ಭಯ ಆಗುವುದಾದರೆ ನಾನು ಹೋಗುವುದಿಲ್ಲ ಬಿಡಿ. ನಾನು ಮತ್ತು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೊಂದಾಣಿಕೆಯಿಂದ ಇದ್ದೇವೆ. ಅವರು ನನ್ನ ಸಹೋದ್ಯೋಗಿಯಾಗಿದ್ದು, ನಾನು ಅವರ ಇಲಾಖೆ ಬಗ್ಗೆ ಮತ್ತು ಅವರು ನನ್ನ ಇಲಾಖೆ ಬಗ್ಗೆ ಮಾತನಾಡಬಹುದು. ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೀಗೆ ಹೊಂದಾಣಿಕೆಯಿಂದ ಮಾತಾಡಲಿ ನೋಡೊಣ ಎಂದು ಕಂದಾಯ ಸಚಿವ ಆರ್.ಅಶೋಕ್ ಸವಾಲು ಹಾಕಿದರು.
-
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ












Click it and Unblock the Notifications