ಮಲ್ಲೇಶ್ವರ: ವಾಟಾಳ್ ನಾಗರಾಜ್ ಅಧ್ಯಕ್ಷತೆಯಲ್ಲಿ ಕನ್ನಡ ರಾಜ್ಯೋತ್ಸವ
ಬೆಂಗಳೂರು, ನವೆಂಬರ್, 04 : ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನೌಕರರ ಸಂಘವು 60ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಮಲ್ಲೇಶ್ವರಂ ಬಳಿಯ ರಜತ ಭವನದಲ್ಲಿ ನವೆಂಬರ್ 06ರ ಶುಕ್ರವಾರ ದಂದು ಮಧ್ಯಾಹ್ನ 2.30ಕ್ಕೆ ವೈವಿಧ್ಯ ಸಮಾರಂಭಗಳು ಜರುಗಲಿದೆ.
60ನೇ ಕನ್ನಡ ರಾಜ್ಯೋತ್ಸವ ಸಮಾರಂಭದ ಉದ್ಘಾಟಕರಾಗಿ ಕನ್ನಡ ಚಳುವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್, ಅಧ್ಯಕ್ಷರಾಗಿ ಬೆಂಗಳೂರು ಜಲಮಂಡಳಿ ಅಧ್ಯಕ್ಷ ವಿಜಯ ಭಾಸ್ಕರ್, ಮುಖ್ಯ ಅತಿಥಿಗಳಾಗಿ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್. ದೊರೆಸ್ವಾಮಿ ವೇದಿಕೆ ಅಲಂಕರಿಸಲಿದ್ದಾರೆ.[ರಾಜ್ಯೋತ್ಸವ ವಿಶೇಷ: ನುಡಿ ಕನ್ನಡ ಬ್ಲಾಗಿಗೆ ಸ್ವಾಗತ]

ಈ ರಾಜ್ಯೋತ್ಸವದಲ್ಲಿ ಕನ್ನಡ ನಾಡು ನುಡಿಗೆ ಶ್ರಮಿಸುತ್ತಿರುವ ದಿಗ್ಗಜರುಗಳಾದ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷರಾದ ಪ್ರೊ. ಚಂದ್ರಶೇಖರ್ ಪಾಟೀಲ (ಚಂಪಾ), ಕನ್ನಡ ಚಲನಚಿತ್ರ ನಾಯಕ ರಾಜೇಶ್, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸಾ.ರಾ. ಗೋವಿಂದು, ಕರ್ನಾಟಕ ಆಡಳಿತ ಸೇವೆಯ ಮುಖ್ಯ ಆಡಳಿತಾಧಿಕಾರಿ ಕೆ.ಎಚ್ ಜಗದೀಶ್, ಪ್ರಧಾನ ಮುಖ್ಯ ಅಭಿಯಂತರರು ಎಸ್ ಕೃಷ್ಣಪ್ಪ ಹಾಗೂ ಆರ್ಥಿಕ ಸಲಹೆಗಾರ ಆರ್ ರಾಮಣ್ಣ ಭಾಗವಹಿಸಲಿದ್ದಾರೆ.[ಕಾಶ್ಮೀರಿ ಪಂಡಿತರ ನೋವು ನರಳಾಟ ಕುರಿತ ಪುಸ್ತಕ]
ಈ ಸಂದರ್ಭದಲ್ಲಿ ಬೆಂಗಳೂರು ಜಲಮಂಡಳಿಗೆ ಶ್ರಮಿಸಿದ ಸಾಧಕರುಗಳಾದ ಬೆಂಗಳೂರು ಜಲಮಂಡಳಿ ನಿವೃತ್ತ ಅಧ್ಯಕ್ಷ ಬಿ.ಎನ್ ತ್ಯಾಗರಾಜನ್, ನಿವೃತ್ತ ಮುಖ್ಯ ಅಭಿಯಂತರರು ಸಿ. ವಿಶ್ವನಾಥ್ ಹಾಗೂ ಕೆ. ರಮೇಶ್, ಕನ್ನಡ ಪರ ಹೋರಾಟಗಾರ ಎಚ್. ವಿ ಗಿರೀಶ್ ಗೌಡ, ಕನ್ನಡ ಕೃಷ್ಣ ಇವರಿಗೆ ಸನ್ಮಾನ ನಡೆಯಲಿದೆ.
ಅಲ್ಲದೇ ಜೀ ಕನ್ನಡ ವಾಹಿನಿಯ ಸರಿಗಮಪ ಲಿಟಲ್ ಚಾಂಪ್ ನ ಖ್ಯಾತ ಗಾಯಕರುಗಳಾದ ಮಲ್ಲೇಶ್ ಹೂಗಾರ ಹಾಗೂ ಪುಟ್ಟರಾಜ್ ಹೂಗಾರ ಅವರಿಂದ ಕನ್ನಡ ಗೀತೆಗಳ ಸುಮಧುರ ಗಾಯನ ಹರಿದು ಬರಲಿದೆ.
-
ಸಿನಿಮಾಗಳಲ್ಲಿ ಅಶ್ಲೀಲ ಸಾಹಿತ್ಯಕ್ಕೆ ಕಡಿವಾಣ ಹಾಕಿ: ಪ್ರೇಮ್ ವಿವಾದದ ಬೆನ್ನಲ್ಲೇ ಫಿಲ್ಮ್ ಚೇಂಬರ್ಗೆ ಮಹಿಳಾ ಆಯೋಗ ಪತ್ರ -
ಕನ್ನಡದಲ್ಲಿ ರೈಲ್ವೆ ಪರೀಕ್ಷೆಗೆ ಆಗ್ರಹ; ರಾಜ್ಯದ ಎಲ್ಲ ಸಂಸದರಿಗೆ ಪುರುಷೋತ್ತಮ ಬಿಳಿಮಲೆ ಪತ್ರ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ












Click it and Unblock the Notifications