ನೈರೋಬಿ ಉಗ್ರರ ಅಟ್ಟಹಾಸಕ್ಕೆ ಕನ್ನಡಿಗ ಬಲಿ
ಬೆಂಗಳೂರು, ಸೆ.24 : ನೈರೋಬಿಯಲ್ಲಿ ನಡೆದ ಉಗ್ರರ ಅಟ್ಟಹಾಸಕ್ಕೆ ಕನ್ನಡಿಗರೊಬ್ಬರು ಬಲಿಯಾಗಿದ್ದಾರೆ. ಅಲ್ ಶಬಾಬ್ ಉಗ್ರರು ನಡೆಸಿದ ಹತ್ಯಾಕಾಂಡದಲ್ಲಿ ಬಿಡದಿಯ ಉದ್ಯಮಿಯೊಬ್ಬರು ಬಲಿಯಾಗಿದ್ದಾರೆ.
ಬಿಡದಿ ಬಳಿಯ ಹೆಜ್ಜಾಲದ ನಿವಾಸಿ ಸುದರ್ಶನ್ (50) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಕೀನ್ಯಾದ ಭಾರತೀಯ ರಾಯಭಾರಿ ಕಚೇರಿ ಸಿಬ್ಬಂದಿ ಮೃತರ ಜೇಬಿನಲ್ಲಿದ್ದ ಕಾರ್ ಡಿಎಲ್ ಮತ್ತು ಇತರೆ ಗುರುತಿನ ಚೀಟಿ ಸಹಾಯದಿಂದ ಮೃತರು ಬೆಂಗಳೂರಿನವರು ಎಂದು ಖಚಿತಪಡಿಸಿದ್ದಾರೆ.

ಸುದರ್ಶನ್ ಅವರ ಸಹೋದರಿಗೆ ಕರೆ ಮಾಡಿರುವ ಭಾರತೀಯ ರಾಯಭಾರಿ ಕಚೇರಿ ಸಿಬ್ಭಂದಿ ಸುದರ್ಶನ್ ಮೃತಪಟ್ಟಿರುವುದಾಗಿ ಮಾಹಿತಿ ನೀಡಿದ್ದಾರೆ ಮತ್ತು ಶವದ ಚಿತ್ರಗಳನ್ನು ಇ ಮೇಲ್ ಮೂಲಕ ಕಳುಹಿಸಿದ್ದಾರೆ.
ಶುಕ್ರವಾರ ಬೆಳಗ್ಗೆ ಬೆಂಗಳೂರಿನಿಂದ ಕೀನ್ಯಾಗೆ ತೆರಳಿದ್ದ ಸುದರ್ಶನ್, ಶನಿವಾರ ಮಧ್ಯಾಹ್ನ 1.30ಕ್ಕೆ ದೂರವಾಣಿ ಕರೆ ಮಾಡಿ ಕುಟುಂಬದವರೊಂದಿಗೆ ಮಾತುಕತೆ ನಡೆಸಿದ್ದರು. ನಂತರ ಅವರಿಂದ ಯಾವುದೇ ಕರೆ ಬಂದಿರಲಿಲ್ಲ.
ಸಿಮೆಂಟ್ ಮಿಕ್ಸರ್ ಸಂಬಂಧ ರಫ್ತು ಉದ್ಯಮದಲ್ಲಿ ತೊಡಗಿಸಿಕೊಂಡಿದ್ದ ಸುದರ್ಶನ್ ತಿಂಗಳಿನಲ್ಲಿ ಒಂದೆರಡು ಬಾರಿ ಆಫ್ರಿಕಾ ದೇಶಗಳಿಗೆ ಹೋಗಿ ಬರುತ್ತಿದ್ದರು. ಸಹೋದರರಾದ ರಾಮ ಪ್ರಸಾದ್ ಮತ್ತು ಶ್ರೀಧರ್ ಜೊತೆ ವಾಸಿಸುತ್ತಿದ್ದ ಅವರು ಅವಿವಾಹಿತರಾಗಿದ್ದರು.
ಸುದರ್ಶನ್ ಯೋಜನೆಯಂತೆ ಭಾನುವಾರ ಬೆಳಗ್ಗೆ ನೈರೋಬಿಯಿಂದ ಉಗಾಂಡಕ್ಕೆ ತೆರಳಬೇಕಾಗಿತ್ತು. ಸೋಮವಾರ ಮತ್ತು ಮಂಗಳವಾರ ಅಲ್ಲಿನ ಕೆಲಸಗಳನ್ನು ಮುಗಿಸಿಕೊಂಡು ಬುಧವಾರ ಬೆಂಗಳೂರಿಗೆ ಮರಳಬೇಕಾಗಿತ್ತು. (ಇಸ್ಲಾಂ ಕುರಿತು ಪ್ರಶ್ನಿಸಿ, ಭಾರತೀಯನ ಕೊಂದ ಉಗ್ರರು)
ಆದರೆ, ನೈರೋಬಿ ಶಾಪಿಂಗ್ ಮಾಲ್ ನಲ್ಲಿ ಶನಿವಾರ ಉಗ್ರರು ಸುದರ್ಶನ್ ಅವರನ್ನು ಕೊಂದು ಹಾಕಿದ್ದಾರೆ. ಉಗ್ರರ ದಾಳಿಯಿಂದ ಇದುವರೆಗೂ ಸುಮಾರು 70 ಜನರು ಮೃತಪಟ್ಟಿರುವ ಬಗ್ಗೆ ಮಾಹಿತಿ ಲಭ್ಯವಾಗಿದ್ದು, ಇವರಲ್ಲಿ ಮೂವರು ಭಾರತೀಯರು ಸೇರಿದ್ದಾರೆ.
-
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ












Click it and Unblock the Notifications