ಬೆಂಗಳೂರಿಗರಿಗೆ ಸಲ್ಲೂ, ಸನ್ನಿ, ಕೈಫ್ ಅಚ್ಚು ಮೆಚ್ಚು
ಬೆಂಗಳೂರು, ಡಿ.20: ಸರ್ಚ್ ಇಂಜಿನ್ ದಿಗ್ಗಜ ಗೂಗಲ್ ಮೂಲಕ ಅತಿ ಹೆಚ್ಚು ಬಾರಿ ಹುಡುಕಲ್ಪಟ್ಟ 'ಭಾರತೀಯ ರಾಜಕಾರಣಿ' ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಎಂದು ಗೂಗಲ್ Zietgeist 2013ರ ವರದಿ ನೀಡಿದ ಬೆನ್ನಲ್ಲೇ ಬೆಂಗಳೂರಿಗರಿಗೆ ಯಾರು ಅಚ್ಚುಮೆಚ್ಚು ಎಂಬ ಮಾಹಿತಿ ಹೊರಹಾಕಲಾಗಿದೆ.
'ಸುದ್ದಿ (News Events) ವಿಭಾಗದಲ್ಲಿ ನರೇಂದ್ರ ಮೋದಿ ಪ್ರಧಾನಿ ಅಭ್ಯರ್ಥಿ ಎಂಬ ಸುದ್ದಿ ಹೆಚ್ಚು ಬಾರಿ ಶೋಧ ಮಾಡಲ್ಪಟ್ಟಿದ್ದು, ಕರ್ನಾಟಕದ ರಾಹುಲ್ ದ್ರಾವಿಡ್ .ವಿಜಯ್ ಮಲ್ಯ ಕೂಡಾ ಟಾಪ್ ಟೆನ್ ಪಟ್ಟಿಯಲ್ಲಿ ಕಾಣಿಸಿಕೊಂಡಿದ್ದರು. [ಪೂರ್ಣಪಟ್ಟಿ ಇಲ್ಲಿ ನೋಡಿ]

ಈಗ ಸೆಲೆಬ್ರಿಟಿಗಳ ಸರ್ಚ್ ಪೈಕಿ ಸಲ್ಮಾನ್ ಖಾನ್ ಹೆಚ್ಚು ಬಾರಿ ಸರ್ಚ್ ಆಗಿದ್ದರೆ ನಂತರದ ಸ್ಥಾನದಲ್ಲಿ ಸನ್ನಿ ಲಿಯೋನ್, ಕತ್ರೀನಾ ಕೈಫ್, ದೀಪಿಕಾ ಪಡುಕೋಣೆ ಹಾಗೂ ಸಚಿನ್ ತೆಂಡೂಲ್ಕರ್ ಕಾಣಿಸಿಕೊಂಡಿದ್ದಾರೆ. ಕುತೂಹಲದ ಅಂಶವೆಂದರೆ ಗೂಗಲ್ ಮೂಲಕ ಸರ್ಚ್ ಮಾಡಲ್ಪಟ್ಟ ಸೆಲೆಬ್ರಿಟಿಗಳ ಪೈಕಿ ಕನ್ನಡ ಚಿತ್ರರಂಗದ ಯಾವೊಬ್ಬ ನಟ, ನಟಿ ಕೂಡಾ ಕಾಣಿಸಿಕೊಂಡಿಲ್ಲ.
ಇದರ ಜತೆಗೆ ವಿದ್ಯಾ ಸಂಸ್ಥೆ, ಶಾಲೆ ಕಾಲೇಜುಗಳ ಪೈಕಿ ಬೆಂಗಳೂರು ವಿಶ್ವವಿದ್ಯಾಲಯ ಅಗ್ರಸ್ಥಾನ ಪಡೆದಿದೆ. ವಿಶ್ವವಿದ್ಯಾಲಯಗಳ ಪೈಕಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಟಾಪ್ 10 ಪಟ್ಟಿಯಲ್ಲಿ ಕಾಣಿಸಿಕೊಂಡಿದೆ.
ಟಾಪ್ ಪಟ್ಟಿ: ಬೆಂಗಳೂರು ವಿಶ್ವವಿದ್ಯಾಲಯ, ಅಣ್ಣಾಮಲೈ ವಿಶ್ವವಿದ್ಯಾಲಯ, ಸತ್ಯಂ ಸಿನಿಮಾಸ್, ಮೈಸೂರು ವಿಶ್ವವಿದ್ಯಾಲಯ, ಸಿಕ್ಕಿಂ ಮಣಿಪಾಲ್ ವಿಶ್ವವಿದ್ಯಾಲಯ, ಎಜಿಸ್ ಸಿನಿಮಾಸ್, ಸಿನಿಪೊಲೀಸ್ ಬೆಂಗಳೂರು, ಫನ್ ಸಿನಿಮಾಸ್
ವಿದ್ಯಾಸಂಸ್ಥೆ: ಬೆಂಗಳೂರು ವಿಶ್ವವಿದ್ಯಾಲಯ, ಕ್ಯಾಲಿಕಟ್ ವಿಶ್ವವಿದ್ಯಾಲಯ, ಅಣ್ಣಾ ವಿಶ್ವವಿದ್ಯಾಲಯ, ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ, ಕ್ರೈಸ್ಟ್ ವಿಶ್ವವಿದ್ಯಾಲಯ, ಮಣಿಪಾಲ್ ವಿಶ್ವವಿದ್ಯಾಲಯ, ಕುವೆಂಪು ವಿಶ್ವವಿದ್ಯಾಲಯ, ಕೇರಳ ವಿಶ್ವವಿದ್ಯಾಲಯ
ಟಾಪ್ ವ್ಯಕ್ತಿಗಳು: ಸಲ್ಮಾನ್ ಖಾನ್, ಸನ್ನಿ ಲಿಯೋನ್, ಕತ್ರೀನಾ ಕೈಫ್, ದೀಪಿಕಾ ಪಡುಕೋಣೆ, ಸಚಿನ್ ತೆಂಡೂಲ್ಕರ್, ಐಶ್ವರ್ಯಾ ರೈ, ನರೇಂದ್ರ ಮೋದಿ, ಶಾರುಖ್ ಖಾನ್, ಪ್ರಿಯಾಂಕಾ ಛೋಪ್ರಾ, ಪೂನಂ ಪಾಂಡೆ, ಕಾಜಲ್ ಅಗರವಾಲ್, ಮಿಲ್ಕಾ ಸಿಂಗ್, ಮಹೇಶ್ ಬಾಬು, ಕರೀನಾ ಕಪೂರ್
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications