ಮಧ್ಯಾಹ್ನ 3ಗಂಟೆ ತನಕ ಬಿಬಿಎಂಪಿ ಕಚೇರಿಗೆ ಬರಬೇಡಿ
ಬೆಂಗಳೂರು, ನ. 15 : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕೇಂದ್ರ ಕಚೇರಿಗೆ ತೆರಳುವ ಸಾರ್ವಜನಿಕರಿಗೆ ಇನ್ನು ಮುಂದೆ ಸಮಯ ನಿಗದಿ ಮಾಡಲಾಗುತ್ತದೆ. ಹೌದು, ಬಿಬಿಎಂಪಿ ಲೆಕ್ಕಪತ್ರ ವಿಭಾಗದ ಎಲ್ಲ ವ್ಯವಹಾರಗಳು ಡಿ.1ರಿಂದ ಆನ್ಲೈನ್ ಮೂಲಕ ನಡೆಯಲಿದ್ದು, ಬೆಳಗ್ಗೆಯಿಂದ ಮಧ್ಯಾಹ್ನ 3ರವರೆಗೆ ಬಿಬಿಎಂಪಿ ಕಚೇರಿಗೆ ಸಾರ್ವಜನಿಕ ಪ್ರವೇಶ ನಿರ್ಬಂಧಿಸಲಾಗುತ್ತದೆ.
ಬಿಬಿಎಂಪಿ ಮೇಯರ್ ಎನ್.ಶಾಂತಕುಮಾರಿ ಅವರು ಶುಕ್ರವಾರ ಪಾಲಿಕೆಯ ಇಲಾಖಾವಾರು ವಿಶ್ಲೇಷಣಾ ಸಭೆ ನಡೆಸಿದರು, ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಲೆಕ್ಕಪತ್ರ ವಿಭಾಗದ ವ್ಯವಹಾರದಲ್ಲಿ ಪಾರದರ್ಶಕತೆ ಇಲ್ಲ ಎಂಬ ಆರೋಪವಿದೆ. ಆ ಹಿನ್ನೆಲೆಯಲ್ಲಿ ಡಿ.1ರಿಂದ ವೇತನ ವಿತರಣೆ, ಗುತ್ತಿಗೆದಾರರಿಗೆ ಬಿಲ್ ಪಾವತಿ ಸೇರಿದಂತೆ ಎಲ್ಲ ಪ್ರಕ್ರಿಯೆ ಆನ್ಲೈನ್ನಲ್ಲಿ ನಡೆಯಲಿದೆ ಎಂದರು. [ಮೇಯರ್ ಸಂದರ್ಶನ ಓದಿ]

ಮುಖ್ಯ ಲೆಕ್ಕಾಧಿಕಾರಿ ವಿಭಾಗ ಸೇರಿದಂತೆ ಇತರ ಕಚೇರಿಗಳಿಗೆ ದಿನವಿಡೀ ಸಾರ್ವಜನಿಕರು, ಇತರರು ಭೇಟಿ ನೀಡುವುದರಿಂದ ಕೆಲಸ ಕಾರ್ಯಗಳಿಗೆ ಅಡ್ಡಿಯಾಗಲಿದೆ. ಆದ್ದರಿಂದ ಪ್ರತಿದಿನ ಮಧ್ಯಾಹ್ನ 3ರವರೆಗೆ ಬಿಬಿಎಂಪಿ ಕೇಂದ್ರ ಕಚೇರಿಗೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗುವುದು ಎಂದು ತಿಳಿಸಿದರು.
ಬಿಬಿಎಂಪಿ ಕಚೇರಿ ಆವರಣದಲ್ಲಿ ದೇವಾಲಯವಿರುವುದರಿಂದ ಭಕ್ತರ ನಿಯಂತ್ರಣ ಸಾಧ್ಯವೇ? ಎಂಬ ಪ್ರಶ್ನೆಗೆ ಉತ್ತರಿಸಿದ ಮೇಯರ್, ಕಚೇರಿ ಸಮಯ ಆರಂಭವಾಗುವ ಹೊತ್ತಿಗೆ ನಿರ್ಬಂಧ ವಿಧಿಸುವುದರಿಂದ ಯಾವುದೇ ತೊಂದರೆಯಾಗುವುದಿಲ್ಲ. ಶಿಸ್ತು ತರಲು ಈ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.
ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಮಾಧ್ಯಮ ಪ್ರತಿನಿಧಿಗಳನ್ನು ಹೊರತುಪಡಿಸಿ ಉಳಿದವರಿಗೆ 3 ಗಂಟೆ ಬಳಿಕ ಪ್ರವೇಶಕ್ಕೆ ಅವಕಾಶ ನೀಡಲಾಗುವುದು. 3 ಗಂಟೆಗೆ ಎಲ್ಲ ಅಧಿಕಾರಿಗಳು ಕಚೇರಿಯಲ್ಲಿರುವಂತೆ ಸೂಚಿಸಲಾಗಿದೆ. ಇದಕ್ಕೆ ಸಾರ್ವಜನಿಕರು ಸಹಕರಿಸಬೇಕು ಎಂದು ಮನವಿ ಮಾಡಿದರು.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು












Click it and Unblock the Notifications