ಬೆಂಗಳೂರು ಉತ್ತರ : ಗಣವೇಷಧಾರಿಯಾಗಿ ಅಭ್ಯರ್ಥಿಯಿಂದ ಮತಯಾಚನೆ
ಬೆಂಗಳೂರು, ಏಪ್ರಿಲ್ 16: ಬಹಿರಂಗ ಪ್ರಚಾರದ ಕೊನೆಯ ದಿನವಾದ ಇಂದು ನಗರದ ಚುನಾವಣಾ ಪ್ರಚಾರದಲ್ಲಿ ತೊಡಗಿಕೊಂಡ ಅಭ್ಯರ್ಥಿಯೊಬ್ಬ ಎಲ್ಲರ ಗಮನ ಸೆಳೆಯುವಲ್ಲಿ ಯಶಸ್ವಿಯಾದರು.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿರುವ ಎನ್ ಹನುಮೇಗೌಡ ಅವರು ಆರ್ ಎಸ್ ಎಸ್ ಗಣವೇಷಧಾರಿಯಾಗಿ ಮಲ್ಲೇಶ್ವರಂನಲ್ಲಿ ಮತಯಾಚನೆ ನಡೆಸಿದರು.

ರಾಷ್ಟ್ರೀಯ ಸ್ವಯಂ ಸೇವಕ ಸಂಘ ದೇಶಧ ಪ್ರಮುಖ ಸಂಸ್ಥೆಗಳಲ್ಲಿ ಒಂದು. ಈ ಸಂಸ್ಥೆ ಪ್ರಾಮಾಣಿಕತೆ ಹಾಗೂ ದೇಶ ನಿಷ್ಠೆಯನ್ನು ಕಲಿಸುತ್ತದೆ. ಆರ್ ಎಸ್ ಎಸ್ ಹಿನ್ನಲೆಯ ಅನೇಕ ರಾಜಕಾರಣಿಗಳು ಇಂದು ಭ್ರಷ್ಟಾಚಾರದಲ್ಲಿ ತೊಡಗಿಕೊಂಡಿದ್ದಾರೆ.

ಇಂತಹ ಅಭ್ಯರ್ಥಿಗಳನ್ನು ತಿರಸ್ಕರಿಸುವಂತೆ ಜನರ ಗಮನ ಸೆಳೆಯಲು ನಾನು ಕಣಕ್ಕೆ ಇಳಿದಿದ್ದೇನೆ. ಮಾಹಿತಿ ಹಕ್ಕು ಕಾರ್ಯಕರ್ತನಾಗಿ ಅನೇಕ ಹಗರಣಗಳನ್ನು ಬಯಲಿಗೆ ಎಳೆದಿದ್ದೇನೆ. ಇದೇ ಮುನ್ನಲೆಯಲ್ಲಿ ನಾನು ನನ್ನ ಹೋರಾಟವನ್ನು ಮುಂದುವರೆಸಲಿದ್ದೇನೆ ಎಂದು ಅಭ್ಯರ್ಥಿ ಹನುಮೇಗೌಡ ಹೇಳಿದರು.

ಮಲ್ಲೇಶ್ವರಂ ವೃತ್ತದಲ್ಲಿರುವ ಕುವೆಂಪು ಪ್ರತಿಮೆಗೆ ನಮಸ್ಕರಿಸಿ ತಮ್ಮ ಪ್ರಚಾರವನ್ನು ಪ್ರಾರಂಭಿಸಿದ ಅವರು, ಮಲ್ಲೇಶ್ವರಂ ಪ್ರಮುಖ ಬೀದಿಗಳಲ್ಲಿ ಸ್ವತಂತ್ರ ಹಾಗೂ ಪ್ರಾಮಾಣಿಕ ವ್ಯಕ್ತಿಗೆ ಮತ ನೀಡುವಂತೆ ಮನವಿ ಮಾಡಿದರು.
-
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
ಬೆಂಗಳೂರಿನಲ್ಲಿ ನಡೆಯುವ ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕ್ ಮಾಡುವುದ್ಹೇಗೆ? ಇಲ್ಲಿದೆ ಮಾಹಿತಿ -
Summer Drinks: ಎಳನೀರು ಅಥವಾ ಕಬ್ಬಿನ ರಸ – ಬೇಸಿಗೆಯಲ್ಲಿ ಯಾವುದು ಉತ್ತಮ? -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ












Click it and Unblock the Notifications