ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ರೌಡಿ ಶೀಟರ್‌ ಹತ್ಯೆ: ಆರೋಪಿಯನ್ನು ಬಂಧಿಸಿದ ಆನೇಕಲ್‌ ಪೊಲೀಸರು

By Nayana
|
Google Oneindia Kannada News

ಬೆಂಗಳೂರು ಜುಲೈ31: ನಗರದಲ್ಲಿ ರೌಡಿ ಶೀಟರ್‌ನನ್ನು ಬರ್ಬರವಾಗಿ ಕೊಲೆ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಆನೇಕಲ್‌ನ ಮಾಯಸಂದ್ರ ಲೇಔಟ್‌ ಬಳಿ ರೌಡಿಶೀಟರ್ ಜಯಂತ್‌ನನ್ನು ಅಪಹರಿಸಿ ಬಿಯರ್‌ ಬಾಟಲಿಯಿಂದ ಸುಮಾರು 50 ಕಡೆ ಚುಚ್ಚಿ ಹತ್ಯೆ ಮಾಡಲಾಗಿತ್ತು.

ಸುನಿಲ್‌ ಆರೋಪಿ, ತಲೆ ಮರೆಸಿಕೊಂಡಿದ್ದನು, ನಂತರ ಅತ್ತಿಬೆಲೆ ಪೊಲೀಸರು 29 ದಿನಗಳ ನಂತರ ಹೊಸಕೋಟೆ ಬಳಿ ಇರುವ ಬಗ್ಗೆ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಪೊಲೀಸರು ತೆರಳಿ ಆತನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಅಲ್ವಾರ್ ಹತ್ಯೆ: ವ್ಯಕ್ತಿ ಪ್ರಾಣಕ್ಕಿಂತ ಗೋವುಗಳು ಮುಖ್ಯವಾದವೇ ಪೊಲೀಸರಿಗೆ?ಅಲ್ವಾರ್ ಹತ್ಯೆ: ವ್ಯಕ್ತಿ ಪ್ರಾಣಕ್ಕಿಂತ ಗೋವುಗಳು ಮುಖ್ಯವಾದವೇ ಪೊಲೀಸರಿಗೆ?

ಜುಲೈ 1 ರಂದು ಜಯಂತ್ ನನ್ನು ಕಿಡ್ನಾಪ್ ಮಾಡಿ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಅತ್ತಿಬೆಲೆ ಪೊಲೀಸ್ ಠಾಣಾ ವ್ಯಾಪ್ತಿಯ ಶೆಟ್ಟಹಳ್ಳಿ ಬಳಿಯ ಲೇಔಟ್ ನಲ್ಲಿ ಈ ಹತ್ಯೆ ಮಾಡಲಾಗಿದ್ದು, ಆನೇಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಗೆರಟಿಗನಬೆಲೆಯ ನೀಲಗಿರಿ ತೋಪಿನಲ್ಲಿ ಜಯಂತ್ ಮೃತ ದೇಹವನ್ನು ಎಸೆದು ಹೋಗಿದ್ದರು.

Bangaluru rural police arrest accused of rowdy sheeter murder case

ಇದೇ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಇಬ್ಬರು ಆರೋಪಿಗಳಾದ ಲೋಕೇಶ್ ಹಾಗೂ ಪ್ರವೀಣ್ ನನ್ನು ಕೆಲದಿನಗಳ ಹಿಂದಷ್ಟೇ ಬಂಧಿಸಿಲಾಗಿದೆ. ಈ ಪ್ರಕರಣದಲ್ಲಿ ಇನ್ನು ಐವರು ಆರೋಪಿಗಳು ತಲೆ ಮರೆಸಿಕೊಂಡಿದ್ದು, ಅವರಿಗಾಗಿ ಹುಡುಕಾಟ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಂಧಿತ ಆರೋಪಿಯು ರೌಡಿಶೀಟರ್ ಆಗಿದ್ದು, ರೌಡಿಸಂನಲ್ಲಿ ಗುರುತಿಸಿಕೊಳ್ಳಲು ಹಾಗೂ ರಿಯಲ್ ಎಸ್ಟೇಟಿನಲ್ಲಿ ತನ್ನ ಬಗ್ಗೆ ಭಯ ಹುಟ್ಟಿಸುವ ಸಲುವಾಗಿ ಕೊಲೆ ಮಾಡಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಎಸ್ಪಿ ಶಿವಕುಮಾರ್ ತಿಳಿಸಿದ್ದಾರೆ.

English summary
The prime accused Sunil was arrested in rowdy sheeter Jayanth murder case by Anekal police after 29 days of killing near Hoskote in Bengaluru rural district.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X