ಬ್ಯಾಂಕ್ ಮ್ಯಾನೇಜರ್ ಮುನಿಯಪ್ಪ ಹತ್ಯೆಗೆ ನೋಟು ನಿಷೇಧ ಕಾರಣ!
ಬೆಂಗಳೂರು, ಆಗಸ್ಟ್ 30 : ಸುಧಾ ಕೋ ಆಪರೇಟಿವ್ ಬ್ಯಾಂಕ್ ಮ್ಯಾನೇಜರ್ ಹತ್ಯೆಯ ರಹಸ್ಯ ಬಯಲಾಗಿದೆ. ನೋಟು ನಿಷೇಧದ ಬಳಿಕ ಉಂಟಾದ ಹಣಕಾಸಿನ ಬಿಕ್ಕಟ್ಟು ಮ್ಯಾನೇಜರ್ ಹತ್ಯೆಗೆ ಕಾರಣ ಎಂಬುದು ಪೊಲೀಸರ ತನಿಖೆಯಿಂದ ಬಹಿರಂಗವಾಗಿದೆ. ಹತ್ಯೆ ಮಾಡಿದ್ದ ನಾಲ್ವರನ್ನು ಬಂಧಿಸಲಾಗಿದೆ.
ಆರ್.ಟಿ.ನಗರದ ನಿವಾಸಿಯಾಗಿದ್ದ ಬ್ಯಾಂಕ್ ಮ್ಯಾನೇಜರ್ ಮುನಿಯಪ್ಪ ಶವ ಆಗಸ್ಟ್ 16ರಂದು ಸುಮನಹಳ್ಳಿ ಸೇತುವೆ ಬಳಿ ಅವರ ಕಾರಿನಲ್ಲಿ ಪತ್ತೆಯಾಗಿತ್ತು. ಮೊದಲು ಇದು ಆತ್ಮಹತ್ಯೆ ಎಂದು ತಿಳಿಯಲಾಗಿತ್ತು. ಮುನಿಯಪ್ಪ ಅವರ ಕುಟುಂಬದವರು ಇದು ಕೊಲೆ ಎಂದು ದೂರು ಕೊಟ್ಟಿದ್ದರು.

ದೂರಿನ ಅನ್ವಯ ತನಿಖೆ ನಡೆಸಿದ ಕಾಮಾಕ್ಷಿಪಾಳ್ಯ ಪೊಲೀಸರು ಪ್ರಮುಖ ಆರೋಪಿ ತಿಲಕ್, ತಿಲಕ್ ಸಹಚರರಾದ ಪ್ರದೀಪ್, ಮಹೇಶ್ ಮತ್ತು ಆದಿ ಎನ್ನುವವರನ್ನು ಬಂಧಿಸಿದ್ದಾರೆ. ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದಂತೆ ತಿಲಕ್ ಮತ್ತು ಮುನಿಯಪ್ಪ ನಡುವೆ ಜಗಳ ನಡೆದಿತ್ತು. ಇದೇ ಕಾರಣಕ್ಕೆ ಹತ್ಯೆ ಮಾಡಲಾಗಿದೆ.
ಘಟನೆ ವಿವರ : ಬ್ಯಾಂಕ್ ಮ್ಯಾನೇಜರ್ ಮುನಿಯಪ್ಪ ಬ್ಯಾಂಕಿನಲ್ಲಿ ಠೇವಣಿ ಇಡಲು ಬರುತ್ತಿದ್ದವರ ಬಳಿ ಹೆಚ್ಚಿನ ಬಡ್ಡಿ ನೀಡುವುದಾಗಿ ಹಣ ಪಡೆಯುತ್ತಿದ್ದರು. ಅದನ್ನು ಬೇರೆಯವರಿಗೆ ಹೆಚ್ಚಿನ ಬಡ್ಡಿಗೆ ನೀಡುತ್ತಿದ್ದರು. ಮುನಿಯಪ್ಪ ಅವರಿಗೆ ಹಣ ಕೊಟ್ಟವರು ನೋಟು ನಿಷೇಧವಾದ ಬಳಿಕ ಹಣಕ್ಕಾಗಿ ಬೇಡಿಕೆ ಇಟ್ಟಿದ್ದರು.
ಮುನಿಯಪ್ಪ ಅವರು ತಾವು ಹಣ ನೀಡಿದ ವ್ಯಕ್ತಿಗಳಿಗೆ ಹಣ ವಾಪಸ್ ನೀಡುವಂತೆ ಕೇಳಿದ್ದರು. ಆದರೆ, ಕೆಲವರು ನೀಡದ ಕಾರಣ ಸಾಲ ಮಾಡಿ ಕೆಲವು ಜನರ ಹಣ ವಾಪಸ್ ಕೊಟ್ಟಿದ್ದರು. ಇದರ ನಡುವೆಯೇ ಬಡ್ಡಿ, ಚಕ್ರಬಡ್ಡಿ ಶೂಲಕ್ಕೆ ಸಿಲುಕಿದ್ದರು.
ಆರೋಪಿ ತಿಲಕ್ಗೂ ಮುನಿಯಪ್ಪ ಹಣ ನೀಡಿದ್ದರು. ಅದನ್ನು ವಾಪಸ್ ನೀಡುವಂತೆ ಪದೇ-ಪದೇ ಪೀಡಿಸುತ್ತಿದ್ದರು. ಹಣವಿಲ್ಲದ ತಿಲಕ್ ಮುನಿಯಪ್ಪ ಅವರನ್ನು ಹತ್ಯೆ ಮಾಡಲು ಸಂಚು ರೂಪಿಸಿದ್ದ. ಮೂವರು ಸಹಚರರ ಸಹಾಯ ಪಡೆದು ಆಗಸ್ಟ್ 15ರಂದು ಅವರನ್ನು ಹತ್ಯೆ ಮಾಡಿ ಕಾರಿನಲ್ಲಿ ಶವವಿಟ್ಟು, ಆತ್ಮಹತ್ಯೆ ಎಂದು ಬಿಂಬಿಸಲು ಪ್ರಯತ್ನಿಸಿದ್ದರು.
ಸಿಕ್ಕಿಬಿದ್ದಿದ್ದು ಹೇಗೆ? : ಆಗಸ್ಟ್ 15ರಂದು ಮುನಿಯಪ್ಪ ತಿಲಕ್ ಮನೆಗೆ ಹೋಗುವುದಾಗಿ ಹೇಳಿ ಮನೆಯಿಂದ ಹೊರಟಿದ್ದರು. ಬಳಿಕ ಪುನಃ ಕರೆ ಮಾಡಿ ಬರುವುದು ತಡವಾಗುತ್ತದೆ ಎಂದು ಹೇಳಿದ್ದರು. ಆದರೆ, ನಂತರ ಮನಗೆ ಮರಳಿರಲಿಲ್ಲ. ಮರುದಿನ ಅವರ ಶವ ಪತ್ತೆಯಾಗಿತ್ತು. ಆದ್ದರಿಂದ, ಕುಟುಂಬದವರು ತಿಲಕ್ ವಿರುದ್ಧ ದೂರು ಕೊಟ್ಟಿದ್ದರು. ಕಾಮಾಕ್ಷಿಪಾಳ್ಯ ಪೊಲೀಸರು ತಿಲಕ್ ವಿಚಾರಣೆ ನಡೆಸಿದಾಗ ಹತ್ಯೆ ಪ್ರಕರಣ ಬಯಲಾಗಿದೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications