'ವಿದ್ಯಾವಾಚಸ್ಪತಿ' ಬನ್ನಂಜೆ ಗೋವಿಂದಾಚಾರ್ಯ 80ರ ಸಂಭ್ರಮ
ಬೆಂಗಳೂರು, ಡಿಸೆಂಬರ್ 21 : ಮಧ್ವಮತ ಹರಿಕಾರ, ಪ್ರಕಾಂಡ ಪಂಡಿತ, ಕನ್ನಡ ಮತ್ತು ಸಂಸ್ಕೃತ ಭಾಷಾ ವಿದ್ವಾಂಸ, ಅನುವಾದಕ, ಲೇಖಕ 'ವಿದ್ಯಾವಾಚಸ್ಪತಿ' ಬನ್ನಂಜೆ ಗೋವಿಂದಾಚಾರ್ಯ ಅವರು 80ನೇ ವರ್ಷಕ್ಕೆ ಕಾಲಿಡುತ್ತಿರುವ ಸಂದರ್ಭದಲ್ಲಿ 'ಬನ್ನಂಜೆ 80ರ ಸಂಭ್ರಮ' ಎಂಬ ವಿಶಿಷ್ಟ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಬನ್ನೆಂಜೆ ಗೋವಿಂದಾಚಾರ್ಯ ಪ್ರತಿಷ್ಠಾನ, ಕುಮಾರಸ್ವಾಮಿ ಲೇಔಟ್ ನಲ್ಲಿರುವ ದಯಾನಂದ ಸಾಗರ ಕಾಲೇಜಿನಲ್ಲಿ ಆಯೋಜಿಸುತ್ತಿರುವ ಈ ಕಾರ್ಯಕ್ರಮ ಡಿಸೆಂಬರ್ 23ರಿಂದ 27ರವರೆಗೆ ಐದು ದಿನಗಳ ಕಾಲ ವೈವಿಧ್ಯಮಯ ಕಾರ್ಯಕ್ರಮಗಳ ಮುಖಾಂತರ ಬನ್ನಂಜೆ ಅವರ ಅಭಿಮಾನಿಗಳನ್ನು ಸಂಗೀತ-ಸಾಹಿತ್ಯ ಸಾಗರದಲ್ಲಿ ತೇಲಾಡಿಸಲಿದೆ.
ಆರಂಭದ ದಿನ 23ರಂದು ಹತ್ತು ಮಠಗಳ ಯತಿಗಳು ಬನ್ನಂಜೆಯವರನ್ನು ನುಡಿ ಮಂತ್ರಾಕ್ಷತೆಯಲ್ಲಿ ಆಶೀರ್ವದಿಸಲಿದ್ದರೆ, ಮುಂದಿನ ನಾಲ್ಕು ದಿನಗಳಲ್ಲಿ ಚಲನಚಿತ್ರ ಪ್ರದರ್ಶನ, ನೃತ್ಯ ವೈಭವ, ಹಲವಾರು ಕೃತಿಗಳ ಬಿಡುಗಡೆ, ಪ್ರಾಣೇಶರಿಂದ ನಗೆಸೇವೆ, ಚಿಂತಕರು ಪಂಡಿತರು ಪತ್ರಕರ್ತರು ಪ್ರಾಚಾರ್ಯರು ಭಾಗವಹಿಸುವ ಸರ್ವಧರ್ಮ ಸಮ್ಮೇಳನ ಸಂಭ್ರಮಕ್ಕೆ ಕಳೆಕಟ್ಟಲಿದೆ. [ವಿದ್ಯಾವಾಚಸ್ಪತಿ ಬನ್ನಂಜೆ ಗೋವಿಂದಾಚಾರ್ಯ: ಕಿರು ಪರಿಚಯ]

ಜೊತೆಗೆ ಬನ್ನಂಜೆ ಅವರು ಬರೆದ ಸಾಹಿತ್ಯದ ವಿಮರ್ಶೆ, ಅವರು ಅನುವಾದಿಸಿದ ನಾಟಕ, ಕವನಗಳ ವಾಚನ, ನಾಟಕ ಪ್ರದರ್ಶನಗಳಲ್ಲಿ ಎನ್ಎಸ್ ಲಕ್ಷ್ಮೀನಾರಾಯಣ ಭಟ್, ಎಚ್ಎಸ್ ವೆಂಕಟೇಶ ಮೂರ್ತಿ, ಜಯಂತ ಕಾಯ್ಕಿಣಿ, ಚಂಪಾ, ಆರ್ ಗಣೇಶ್, ರಂಗಕರ್ಮಿ ಪ್ರಸನ್ನ, ದುಂಡಿರಾಜ್, ಸಮತೀಂದ್ರ ನಾಡಿಗ ಮುಂತಾದವರು ಭಾಗವಹಿಸುತ್ತಿದ್ದಾರೆ.
ಇನ್ನು, ಸಿನೆಮಾ ಮತ್ತು ಪತ್ರಿಕೋದ್ಯಮದಲ್ಲೂ ತಮ್ಮ ಕೈಚಳಕ ತೋರಿಸಿದ್ದ ಬನ್ನಂಜೆ ಗೋವಿಂದಾಚಾರ್ಯ ಅವರು ತಮ್ಮ ಅನುಭವವನ್ನು ಹಂಚಿಕೊಳ್ಳಲಿದ್ದಾರೆ. ವೇದಾಂತ ಸಿನೆಮಾ ಪ್ರಸ್ತುತತೆ ಕುರಿತು ಚರ್ಚೆ, ಪತ್ರಿಕೋದ್ಯಮ ಸಂವಾದ ಬನ್ನಂಜೆಯವರ ಸಮ್ಮುಖದಲ್ಲಿ ಜರುಗಲಿದೆ. ಬನ್ನಂಜೆ ಬದುಕು ಮತ್ತು ಸಂಸ್ಕೃತ ಸಾಹಿತ್ಯ ಕುರಿತು ಗೋಷ್ಠಿಗಳು ನಡೆಯಲಿವೆ.
ತಮಗನಿಸಿದ್ದನ್ನು ಖಂಡತುಂಡವಾಗುವಂತೆ ಹೇಳುವ ಬನ್ನಂಜೆ ಗೋವಿಂದಾಚಾರ್ಯ ಅವರ ಮೇಲೆ ಅಭಿಮಾನದ ವರ್ಷಧಾರೆ ಸುರಿಸುವ ಕಾರ್ಯಕ್ರಮದಲ್ಲಿ ಬೆಳಿಗ್ಗೆ ತಿಂಡಿ, ಮಧ್ಯಾಹ್ನ ಊಟ ಮತ್ತು ರಾತ್ರಿ ಸಹಭೋಜನ ಇರಲಿದೆ.
ಮೊದಲ ದಿನ ಆಶೀರ್ವಚನ ನೀಡಲಿರುವ ಶ್ರೀಗಳು
ಪರಮ ಪೂಜ್ಯ ಶ್ರೀ ವಿಶ್ವೇಶ್ವತೀರ್ಥ ಶ್ರೀಪಾದರು, ಪೇಜಾವರ ಮಠ, ಉಡುಪಿ
ಪರಮ ಪೂಜ್ಯ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು, ಪುತ್ತಿಗೆ ಮಠ, ಉಡುಪಿ
ಪರಮ ಪೂಜ್ಯ ಶ್ರೀ ಕೇಶವನಿಧಿತೀರ್ಥ ಶ್ರೀಪಾದರು, ಶ್ರೀಪಾದರಾಜ ಮಠ, ಮುಳಬಾಗಿಲು
ಪರಮ ಪೂಜ್ಯ ಶ್ರೀ ರಘುಭೂಷಣತೀರ್ಥ ಶ್ರೀಪಾದರು, ಬಾಳಗಾರು ಮಠ, ತೀರ್ಥಹಳ್ಳಿ
ಪರಮ ಪೂಜ್ಯ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು, ಪೇಜಾವರ ಮಠ, ಉಡುಪಿ
ಪರಮ ಪೂಜ್ಯ ಶ್ರೀ ಲಕ್ಷ್ಮೀವರತೀರ್ಥ ಶ್ರೀಪಾದರು ಶಿರೂರು ಮಠ, ಉಡುಪಿ
ಪರಮ ಪೂಜ್ಯ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರು, ಅದಮಾರು ಮಠ, ಉಡುಪಿ
ಪರಮ ಪೂಜ್ಯ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದರು, ರಾಘವೇಂದ್ರ ಮಠ, ಮಂತ್ರಾಲಯ
ಪರಮ ಪೂಜ್ಯ ಶ್ರೀ ವಿದ್ಯೇಶತೀರ್ಥ ಶ್ರೀಪಾದರು, ಭಂಡಾರಕೆರೆ ಮಠ, ಬಾರಕೂರು
ಪರಮ ಪೂಜ್ಯ ಶ್ರೀ ವಿದ್ಯಾಪ್ರಸನ್ನತೀರ್ಥ ಶ್ರೀಪಾದರು, ಸುಬ್ರಹ್ಮಣ್ಯ ಮಠ, ಸುಬ್ರಹ್ಮಣ್ಯ
-
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
LPG Crisis: ಎಲ್ಪಿಜಿ ಬಿಕ್ಕಟ್ಟಿನ ಸುಳಿಯಲ್ಲಿ ಭಾರತದ ಪ್ರಮುಖ ನಗರಗಳು: ದರ್ಶಿನಿಗಳು ಬಂದ್, ಪಿಜಿಗಳಲ್ಲಿ ಮೆನು ಚೇಂಜ್ -
Cylinder Shortage: ರಾಜ್ಯದಲ್ಲಿ ಅನಿಲ ಪೂರೈಕೆ ಸಮಸ್ಯೆಗೆ ಮುಕ್ತಿ? ಸಚಿವ ಮುನಿಯಪ್ಪ ಮಹತ್ವ ಮಾಹಿತಿ -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ











Click it and Unblock the Notifications