ಬನ್ನಂಜೆ ಗೋವಿಂದಾಚಾರ್ಯ ನಿಧನಕ್ಕೆ ಆರೆಸ್ಸೆಸ್ ತೀವ್ರ ಸಂತಾಪ
ಬೆಂಗಳೂರು, ಡಿ. 13: ಪದ್ಮಶ್ರೀ ಪುರಸ್ಕೃತ ಪ್ರವಚನಕಾರ, ವಿದ್ವಾಂಸ, ವಿದ್ಯಾವಾಚಸ್ಪತಿ ಬನ್ನಂಜೆ ಗೋವಿಂದಾಚಾರ್ಯ(85) ಅವರ ನಿಧನಕ್ಕೆ ಆರೆಸ್ಸೆಸ್ ತೀವ್ರ ಸಂತಾಪ ವ್ಯಕ್ತಪಡಿಸಿದೆ.
ಸಂಸ್ಕೃತ ವಿದ್ವಾಂಸರು, ಖ್ಯಾತ ವಾಗ್ಮಿಗಳಾದ ಬನ್ನಂಜೆ ಗೋವಿಂದಾಚಾರ್ಯರು ಇಂದು ನಿಧನರಾಗಿದ್ದಾರೆ. ಅವರಿಗೆ 84ವರ್ಷ ವಯಸ್ಸಾಗಿತ್ತು. ಬನ್ನಂಜೆ ಎಂದೇ ಪ್ರಸಿದ್ಧರಾಗಿದ್ದ ಅವರು ಕನ್ನಡ, ಸಂಸ್ಕೃತ ಭಾಷೆಗಳಲ್ಲಿ ಹಲವು ಗ್ರಂಥಗಳನ್ನು ರಚಿಸಿದ್ದಾರೆ. ಹಲವಾರು ಲೇಖನಗಳನ್ನು ಬರೆದಿದ್ದಾರೆ. ಬನ್ನಂಜೆಯವರ ಕಿರಿಯ ಪುತ್ರ ಕೆಲ ದಿನಗಳ ಹಿಂದೆ ನಿಧನರಾಗಿದ್ದರು. ತತ್ಸಂಬಂಧದ ವಿಧಿಗಳನ್ನು ಮನೆಯಲ್ಲಿಯೇ ನಡೆಸಲಾಗುತ್ತಿತ್ತು.

ದತ್ತಾತ್ರೇಯ ಹೊಸಬಾಳೆ ಅವರ ಶ್ರದ್ಧಾಂಜಲಿ ಸಂದೇಶ:
"ನಾಡಿನ ಖ್ಯಾತ ವಿದ್ವಾಂಸರಾದ ಬನ್ನಂಜೆ ಗೋವಿಂದಾಚಾರ್ಯರು ನಮ್ಮನ್ನು ಅಗಲಿರುವುದು ಬಹಳ ದುಃಖದ ಸುದ್ದಿ. ಒಂದೇ ಮನೆಯಲ್ಲಿ 12 ದಿನಗಳ ಅಂತರದಲ್ಲಿ ಎರಡು ಪೀಳಿಗೆಯ ಇಬ್ಬರು (ತಂದೆ-ಮಗ) ಕಾಲವಾದುದು ಅತ್ಯಂತ ನೋವಿನ ಸಂಗತಿ. ಬನ್ನಂಜೆಯವರು ಈ ತಲೆಮಾರಿನ ಮೇರು ವಿದ್ವಾಂಸರು, ಉದ್ದಾಮ ಲೇಖಕರು, ಪ್ರಭಾವೀ ವಾಗ್ಮಿಯಾಗಿದ್ದರು. ಭಾರತೀಯ ಸಂಸ್ಕೃತಿಯ ಶ್ರೇಷ್ಠ ವ್ಯಾಖ್ಯಾನಕಾರರು. ಅವರ ನಿಧನದಿಂದ ದೇಶದ ವಿದ್ವದ್ವಲಯಕ್ಕೂ ಸಾಂಸ್ಕೃತಿಕ ರಂಗಕ್ಕೂ ಅಪಾರ ನಷ್ಟ ಉಂಟಾಗಿದೆ.
ಧ್ವನಿಮುದ್ರಿತವಾಗಿರುವ ಅವರ ವಾಣಿ-ವಿವೇಕ ನಾಡಿನ ಜನತೆಯನ್ನು ಮುಂದೆಯೂ ನಿಶ್ಚಿತವಾಗಿ ಸನ್ಮಾರ್ಗದಲ್ಲಿ ನಡೆಯಲು ಪ್ರೇರೇಪಿಸುತ್ತವೆ. ಅವರ ಸ್ಮೃತಿ ಅಮರವಾಗಿರಲೆಂದು ಪ್ರಾರ್ಥಿಸಿ ನನ್ನ ನಮನಗಳನ್ನು ಅರ್ಪಿಸುತ್ತೇನೆ. ದಿವಂಗತ ಆತ್ಮಕ್ಕೆ ಸದ್ಗತಿ ದೊರೆಯಲಿ," ಎಂದು ಆರೆಸ್ಸೆಸ್ ಸಹಸರಕಾರ್ಯವಾಹರಾದ ದತ್ತಾತ್ರೇಯ ಹೊಸಬಾಳೆಯವರು ಅಗಲಿದ ಬನ್ನಂಜೆ ಗೋವಿಂದಾಚಾರ್ಯ ಅವರನ್ನು ಕುರಿತು ಶ್ರದ್ಧಾಂಜಲಿ ಅರ್ಪಿಸಿದ್ದಾರೆ.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ












Click it and Unblock the Notifications