ಬನ್ನೇರುಘಟ್ಟ ಜೈವಿಕ ಉದ್ಯಾನ ಸುತ್ತ ಕಲ್ಲು ಗಣಿಗಾರಿಕೆ ರದ್ದು!
ಬೆಂಗಳೂರು, ಜೂನ್ 12: ಬನ್ನೇರುಘಟ್ಟ ರಾಷ್ಟ್ರೀಯ ಜೈವಿಕ ಉದ್ಯಾನದ ಸುತ್ತಲಿನ ಕಲ್ಲಿನ ಕ್ವಾರಿಗಳ ಲೈಸೆನ್ಸ್ ರದ್ದುಪಡಿಸಲು ಭೂಗರ್ಭ ಹಾಗೂ ಗಣಿ ಇಲಾಖೆಯು ಮುಂದಾಗಿದೆ. ಇಂದಿನಿಂದ ಕಲ್ಲು ಗಣಿಗಾರಿಕೆಗೆ ಬ್ರೇಕ್ ಬೀಳಲಿದೆ.
ಗಣಿಗಾರಿಕೆ ನಡೆಸುತ್ತಿರುವ ಕಂಪನಿಗಳ ಅಕ್ರಮಗಳಿಗೆ ಕಡಿವಾಣ ಹಾಕಲಾಗಿದ್ದು, ಬನ್ನೇರುಘಟ್ಟ ಪ್ರದೇಶದಲ್ಲಿರುವ 10 ಗಣಿಗಾರಿಕೆ ಕಂಪನಿಗಳಿಗೆ ಬೀಗ ಜಡಿಯಲಾಗಿದೆ.
ರಾಷ್ಟ್ರೀಯ ಉದ್ಯಾನವನದ ಪ್ರದೇಶದಲ್ಲಿರುವ ತಿಮ್ಮನಾಯಕನಹಳ್ಳಿಯಲ್ಲಿನ ಎಎಸ್ ಝೆಡ್ ಪ್ರದೇಶದಲ್ಲಿ ಗಣಿಗಾರಿಕೆ ನಡೆಸುತ್ತಿದ್ದ 15 ಗಣಿಗಾರಿಕೆ ಕಂಪನಿಗಳು ಅಕ್ರಮವೆಸಗಿದ್ದರ ಪರಿಣಾಮವಾಗಿ 80 ಕೋಟಿ ದಂಡ ವಿಧಿಸಲಾಗಿದೆ. ಇದಕ್ಕೂ ಮುನ್ನ ಏಪ್ರಿಲ್ ತಿಂಗಳಲ್ಲಿ ಶಿವನಹಳ್ಳಿಯಲ್ಲಿ 5 ಕಂಪನಿಗಳಿಗೆ ಬೀಗ ಜಡಿಯಲಾಗಿತ್ತು.

ಗಣಿಗಾರಿಕೆ ಹಾಗೂ ಭೂವಿಜ್ಞಾನ ಇಲಾಖೆಯ ಅಧಿಕಾರಿಗಳು ಸ್ಥಳ ತಪಾಸಣೆ ಮಾಡಿದ್ದು, 15 ಗಣಿಗಾರಿಕೆ ಕಂಪನಿಗಳು ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದ 1-10 ಕಿಮೀ ವ್ಯಾಪ್ತಿಯಲ್ಲಿ ಹೆಚ್ಚು ಗಣಿಗಾರಿಕೆ ಮಾಡಿದ್ದು ನಿಯಮಗಳನ್ನು ಉಲ್ಲಂಘಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಹೆಚ್ಚು ಗಣಿಗಾರಿಕೆ ಮಾಡಿರುವುದಷ್ಟೇ ಅಲ್ಲದೇ, ಮಾಲಿನ್ಯ ತಡೆಗೆ ಇರುವ ನಿಯಮಗಳನ್ನು ಪಾಲನೆ ಮಾಡದೇ ಇರುವುದು, ಗಡಿಯನ್ನು ಸರಿಯಾಗಿ ಪಾಲನೆ ಮಾಡಿರುವುದೂ ಸೇರಿದಂತೆ ಗಂಭೀರವಾದ ತಪ್ಪುಗಳೂ ನಡೆದಿವೆ. ಗಣಿಗಾರಿಕೆ ಹಾಗೂ ಭೂವಿಜ್ಞಾನ ಇಲಾಖೆಯ ಅಧಿಕಾರಿ ಎನ್ಎಸ್ ಪ್ರಸನ್ನ ಕುಮಾರ್ ಹೇಳಿದ್ದಾರೆ.
ಪರಿಸರ ತಜ್ಞರು ಹಾಗೂ ಉದ್ಯಾನದ ಸುತ್ತಲಿನ ಗ್ರಾಮಸ್ಥರಿಂದ ಭಾರಿ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಇಲಾಖೆ ಲೈಸೆನ್ಸ್ ರದ್ದುಪಡಿಸುತ್ತಿದೆ. ಈ ಕುರಿತು ನಿವೃತ್ತ ನ್ಯಾಯಾಧೀಶ ಎಂ.ಎಫ್. ಸಾಲ್ಡಾನಾ ಅವರು ಕೇಂದ್ರ ಪರಿಸರ ಸಚಿವ ಹರ್ಷವರ್ಧನ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದರು.
ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನದ ಸುತ್ತಮುತ್ತಲಿನ 47 ಗ್ರಾಮಗಳ ಜನರ ಜೀವನಕ್ಕೆ ಎರವಾಗಿದ್ದ ಕಲ್ಲು ಗಣಿಗಾರಿಕೆ ಗೆ ಕೊನೆಗೂ ಬ್ರೇಕ್ ಬೀಳುತ್ತಿರುವುದು ಸ್ವಾಗತಾರ್ಹ. ಭವಿಷ್ಯದಲ್ಲಿ ಗಣಿ ಮಾಲೀಕರು ಇತ್ತ ದೃಷ್ಟಿ ಹರಿಸದಂತೆ ಇಲ್ಲಿನ ಜನರು ಸದಾ ಜಾಗೃತಿಯಿಂದ ಇರಬೇಕು ಎಂದು ಅವರು ಹೇಳಿದ್ದರು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
AI ಮೂಲಕ ಬರುವ ಉದ್ಯೋಗ ಅರ್ಜಿಗಳಿಂದ ಬೆಂಗಳೂರು ಉದ್ಯಮಿ ಬೇಸರ: 'ಅರ್ಜಿಗಳು ಜಾಸ್ತಿ, ಅರ್ಹತೆ ಕಡಿಮೆ’ -
RCB Vs SRH: ಎಸ್ಆರ್ಎಚ್ ವಿರುದ್ಧದ ಐಪಿಎಲ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕಿಂಗ್ ಕುರಿತು ಆರ್ಸಿಬಿ ಬಿಗ್ ಅಪ್ಡೇಟ್ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಜೋಶ್ ಹ್ಯಾಜಲ್ವುಡ್ ಔಟ್, 7 ಕೋಟಿಯ ಆಟಗಾರನಿಗಿಲ್ಲ ಸ್ಥಾನ; ಅಶ್ವಿನ್ ಹೇಳಿದ ಆರ್ಸಿಬಿ ಸಂಭಾವ್ಯ ಪ್ಲೇಯಿಂಗ್ 11 ಇಲ್ಲಿದೆ -
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್












Click it and Unblock the Notifications