ಗುರುವಾರದಿಂದ ಬನ್ನೇರುಘಟ್ಟ ಮೃಗಾಲಯ, ಸಫಾರಿ ಪುನರಾರಂಭ
ಬೆಂಗಳೂರು, ಜೂನ್ 29: ಕೊರೊನಾ ಎರಡನೇ ಅಲೆ ಕಾರಣವಾಗಿ ಕಳೆದ 91 ದಿನಗಳಿಂದ ಮುಚ್ಚಲಾಗಿದ್ದ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನ ಇದೇ ಗುರುವಾರ ಸಾರ್ವಜನಿಕರಿಗೆ ಮುಕ್ತವಾಗಲಿದೆ.
ಕೆಲವು ನಿರ್ಬಂಧಗಳೊಂದಿಗೆ ಮೃಗಾಲಯಕ್ಕೆ ಹಾಗೂ ಸಫಾರಿಗೆ ಅವಕಾಶ ಮಾಡಿಕೊಡಲಾಗಿದೆ. ಸಫಾರಿಗೆ ಬಳಸಲಾಗುವ ವಾಹನ ಎಸಿ ರಹಿತವಾಗಿರಬೇಕು, ಹೊರಗಿನಿಂದ ಆಹಾರ ತರುವಂತಿಲ್ಲ, ಜನರು ಪ್ರಾಣಿಗಳಿಗೆ ಆಹಾರ ನೀಡುವಂತಿಲ್ಲ ಎಂಬಿತ್ಯಾದಿ ನಿಯಮಗಳನ್ನು ಹೇರಲಾಗಿದೆ. ಮೃಗಾಲಯದ ಆವರಣದಲ್ಲಿ ಪ್ಯಾಕ್ ಮಾಡಿದ ಆಹಾರ ಸೇವಿಸಲು ಮಾತ್ರ ಅವಕಾಶ ನೀಡಲಾಗಿದೆ.
ಉದ್ಯಾನ ಹಾಗೂ ಸಫಾರಿಗೆ ಅವಕಾಶ ನೀಡುವಂತೆ ಕೋರಿ ಕಳೆದ ವಾರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆಗೆ ಬನ್ನೇರುಘಟ್ಟ ಮೃಗಾಲಯ ಆಡಳಿತ ಪ್ರಸ್ತಾವ ಸಲ್ಲಿಸಿತ್ತು.

"ಒಂದು ಬ್ಯಾಚ್ನಲ್ಲಿ 2000 ಜನರಿಗೆ ಅನುಮತಿ ನೀಡಲಿದ್ದು, ದಿನಕ್ಕೆ ನಾಲ್ಕು ಬ್ಯಾಚ್ಗಳಲ್ಲಿ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ. ಆರೋಗ್ಯ ಇಲಾಖೆ ಇದಕ್ಕೆ ಅನುಮತಿ ನೀಡಿದ್ದು, ಇದೇ ಗುರುವಾರ, ಅಂದರೆ ಜುಲೈ 1ರಿಂದ ಉದ್ಯಾನ ತೆರೆಯುತ್ತೇವೆ" ಎಂದು ಮೃಗಾಲಯ ಆಡಳಿತಾಧಿಕಾರಿ ತಿಳಿಸಿದ್ದಾರೆ.
732 ಎಕರೆ ಪ್ರದೇಶದ ಈ ಉದ್ಯಾನದಲ್ಲಿ ಮೃಗಾಲಯ, ಸಫಾರಿ, ಚಿಟ್ಟೆ ಪಾರ್ಕ್ ಹಾಗೂ ಪ್ರಾಣಿ ಸಂರಕ್ಷಣಾ ಕೇಂದ್ರವಿದೆ. ಏಪ್ರಿಲ್ 28ರಂದು ಕೊರೊನಾ ಕಾರಣವಾಗಿ ಮೃಗಾಲಯವನ್ನು ಮುಚ್ಚಲಾಗಿತ್ತು. ಲಾಕ್ಡೌನ್ನಿಂದಾಗಿ ಉದ್ಯಾನವನ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದೀಗ 91 ದಿನಗಳ ಪುನರಾರಂಭವಾಗುತ್ತಿದೆ.
Recommended Video
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications