ಬನ್ನೇರುಘಟ್ಟ ಉದ್ಯಾನ ಸುತ್ತ ಶೀಘ್ರ ಕಲ್ಲು ಗಣಿಗಾರಿಕೆ ರದ್ದು
ಬೆಂಗಳೂರು, ಏಪ್ರಿಲ್ 27: ಬನ್ನೇರುಘಟ್ಟ ರಾಷ್ಟ್ರೀಯ ಜೈವಿಕ ಉದ್ಯಾನದ ಸುತ್ತಲಿನ ಕಲ್ಲಿನ ಕ್ವಾರಿಗಳ ಲೈಸೆನ್ಸ್ ರದ್ದುಪಡಿಸಲು ಭೂಗರ್ಭ ಹಾಗೂ ಗಣಿ ಇಲಾಖೆಯು ಮುಂದಾಗಿದೆ.
ಪರಿಸರ ತಜ್ಞರು ಹಾಗೂ ಉದ್ಯಾನದ ಸುತ್ತಲಿನ ಗ್ರಾಮಸ್ಥರಿಂದ ಭಾರಿ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಇಲಾಖೆ ಲೈಸೆನ್ಸ್ ರದ್ದುಪಡಿಸುತ್ತಿದೆ. ಈ ಕುರಿತು ನಿವೃತ್ತ ನ್ಯಾಯಾಧೀಶ ಎಂ.ಎಫ್. ಸಾಲ್ಡಾನಾ ಅವರು ಕೇಂದ್ರ ಪರಿಸರ ಸಚಿವ ಹರ್ಷವರ್ಧನ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದರು.
ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನದ ಸುತ್ತಮುತ್ತಲಿನ 47 ಗ್ರಾಮಗಳ ಜನರ ಜೀವನಕ್ಕೆ ಎರವಾಗಿದ್ದ ಕಲ್ಲು ಗಣಿಗಾರಿಕೆ ಗೆ ಕೊನೆಗೂ ಬ್ರೇಕ್ ಬೀಳುತ್ತಿರುವುದು ಸ್ವಾಗತಾರ್ಹ. ಭವಿಷ್ಯದಲ್ಲಿ ಗಣಿ ಮಾಲೀಕರು ಇತ್ತ ದೃಷ್ಟಿ ಹರಿಸದಂತೆ ಇಲ್ಲಿನ ಜನರು ಸದಾ ಜಾಗೃತಿಯಿಂದ ಇರಬೇಕು ಎಂದು ಅವರು ಹೇಳಿದ್ದಾರೆ.

ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನದ ಮರ ತಜ್ಞ ವಿಜಯ್ ನಿಶಾಂತ್ ಅವರು ಗಣಿ ಇಲಾಖೆಯ ಕ್ರಮಕ್ಕೆ ಹರ್ಷ ವ್ಯಕ್ತಪಡಿಸಿದ್ದು, ಪರಿಸರ ಜೀವ ವೈವಿಧ್ಯತೆ ಕಾಪಾಡಲು ಇದು ನೆರವಾಗುತ್ತದೆ ಎಂದಿದ್ದಾರೆ.
ಒಂದು ಸಲ ಪರವಾನಗಿ ರದ್ದಾದರೆ ಕ್ವಾರಿ ಮಾಲೀಕರು ಮತ್ತೆ ಇಲ್ಲಿ ಕೆಲಸ ಪ್ರಾರಂಭಿಸಲು ಸಾಧ್ಯವಿಲ್ಲ ಹೆದರುತ್ತಾರೆ. ಸುತ್ತಲಿರುವ 47 ಹಳ್ಳಿಗಳ ಜನರು ಭಯದಿಂದಲೇ ಜೀವನ ಮಾಡುತ್ತಿದ್ದಾರೆ. ಶೀಘ್ರವೇ ಅವರ ಭಯವೆಲ್ಲಾ ದೂರವಾಗಲಿದೆ ಎಂದು ತಿಳಿಸಿದ್ದಾರೆ.
-
ಉನ್ನತ ಶಿಕ್ಷಣಕ್ಕೆ ಭಾರತದ ಯಾವ ನಗರ ಬೆಸ್ಟ್? QS ರ್ಯಾಂಕಿಂಗ್ ಪಟ್ಟಿಯಲ್ಲಿದೆ ಬೆಂಗಳೂರು ಸೇರಿದಂತೆ 4 ನಗರಗಳ ಹೆಸರು -
ಯುದ್ಧದ ಬಿಸಿ: ಬೆಂಗಳೂರಿಗೆ ಅರಬ್ ರಾಷ್ಟ್ರಗಳ ವಿಮಾನ ಸಂಚಾರ ಕಡಿತ; ರಾಜ್ಯ ಟ್ರಾವೆಲ್ಸ್ ಮಾಲೀಕರಲ್ಲಿ ಆತಂಕ -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
Property Mutation: ಆಸ್ತಿ ನೋಂದಣಿ ನಂತರ ಶೇ.98ರಷ್ಟು ಖಾತೆಗಳು ಸ್ವಯಂ ಚಾಲಿತವಾಗಿ ಬದಲಾವಣೆ: ಸಚಿವ ಕೃಷ್ಣ ಬೈರೇಗೌಡ -
Gold Price Today: ಯುಗಾದಿಗೂ ಮೊದಲೇ ಚಿನ್ನದ ದರದಲ್ಲಿ ಭಾರೀ ಇಳಿಕೆ; ಆಭರಣ ಪ್ರಿಯರಿಗೆ ಇಂದೇ ಹಬ್ಬ -
Karnataka: ಧಾರ್ಮಿಕ ಮೆರವಣಿಗೆ, ಜಯಂತಿಗಳಲ್ಲಿ DJ ಸದ್ದಿಗೆ ಬ್ರೇಕ್? 'ಐಟಂ ಸಾಂಗ್' ಬ್ಯಾನ್ ಮಾಡಲು ರಾಜ್ಯ ಸರ್ಕಾರ ಒಲವು -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
RCB: ಆರ್ಸಿಬಿಯಲ್ಲಿ ಜೋಶ್ ಹ್ಯಾಜಲ್ವುಡ್ ಸ್ಥಾನ ತುಂಬುವ ಆಟಗಾರ ಇವರೇ ನೋಡಿ -
ಶೆಲ್ ಬಂಕ್ನಲ್ಲಿ ಪೆಟ್ರೋಲ್ ದರ ಏರಿಕೆ: ಬೆಂಗಳೂರಿನಲ್ಲಿ 10 ದಿನಗಳಲ್ಲಿ 4.50 ರೂಪಾಯಿ ಹೆಚ್ಚಳ; ಇಲ್ಲಿದೆ ದರಪಟ್ಟಿ -
SSLC ಪರೀಕ್ಷೆ-1 ಆರಂಭ: ಮಲ್ಲೇಶ್ವರಂನ ಕೆಪಿಎಸ್ ಶಾಲೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ವಿದ್ಯಾರ್ಥಿಗಳಿಗೆ ಶುಭಹಾರೈಕೆ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್












Click it and Unblock the Notifications