ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬನ್ನೇರುಘಟ್ಟ ಉದ್ಯಾನ ಸುತ್ತ ಶೀಘ್ರ ಕಲ್ಲು ಗಣಿಗಾರಿಕೆ ರದ್ದು

|
Google Oneindia Kannada News

ಬೆಂಗಳೂರು, ಏಪ್ರಿಲ್ 27: ಬನ್ನೇರುಘಟ್ಟ ರಾಷ್ಟ್ರೀಯ ಜೈವಿಕ ಉದ್ಯಾನದ ಸುತ್ತಲಿನ ಕಲ್ಲಿನ ‌ಕ್ವಾರಿಗಳ ಲೈಸೆನ್ಸ್ ರದ್ದುಪಡಿಸಲು ಭೂಗರ್ಭ ಹಾಗೂ ಗಣಿ ಇಲಾಖೆಯು ಮುಂದಾಗಿದೆ‌.

ಪರಿಸರ ತಜ್ಞರು ಹಾಗೂ ಉದ್ಯಾನದ ಸುತ್ತಲಿನ ಗ್ರಾಮಸ್ಥರಿಂದ ಭಾರಿ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಇಲಾಖೆ ಲೈಸೆನ್ಸ್ ರದ್ದುಪಡಿಸುತ್ತಿದೆ. ಈ ಕುರಿತು ನಿವೃತ್ತ ನ್ಯಾಯಾಧೀಶ ಎಂ.ಎಫ್. ಸಾಲ್ಡಾನಾ ಅವರು ಕೇಂದ್ರ ಪರಿಸರ ಸಚಿವ ಹರ್ಷವರ್ಧನ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದರು.

ಬನ್ನೇರುಘಟ್ಟ ಜೈವಿಕ ಉದ್ಯಾನಕ್ಕೆ ಜಿರಾಫೆ ಆಗಮನಬನ್ನೇರುಘಟ್ಟ ಜೈವಿಕ ಉದ್ಯಾನಕ್ಕೆ ಜಿರಾಫೆ ಆಗಮನ

ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನದ ಸುತ್ತಮುತ್ತಲಿನ 47 ಗ್ರಾಮಗಳ ಜನರ ಜೀವನಕ್ಕೆ‌ ಎರವಾಗಿದ್ದ ಕಲ್ಲು ಗಣಿಗಾರಿಕೆ ಗೆ ಕೊನೆಗೂ ಬ್ರೇಕ್ ಬೀಳುತ್ತಿರುವುದು ಸ್ವಾಗತಾರ್ಹ. ಭವಿಷ್ಯದಲ್ಲಿ ಗಣಿ ಮಾಲೀಕರು ಇತ್ತ ದೃಷ್ಟಿ ಹರಿಸದಂತೆ ಇಲ್ಲಿನ‌ ಜನರು ಸದಾ ಜಾಗೃತಿಯಿಂದ ಇರಬೇಕು ಎಂದು ಅವರು ಹೇಳಿದ್ದಾರೆ.

Bannerughatta park: Quarry licenses to be cancelled

ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನದ ಮರ ತಜ್ಞ ವಿಜಯ್ ನಿಶಾಂತ್ ಅವರು ಗಣಿ ಇಲಾಖೆಯ ಕ್ರಮಕ್ಕೆ‌ ಹರ್ಷ ವ್ಯಕ್ತಪಡಿಸಿದ್ದು, ಪರಿಸರ ಜೀವ ವೈವಿಧ್ಯತೆ ಕಾಪಾಡಲು ಇದು ನೆರವಾಗುತ್ತದೆ ಎಂದಿದ್ದಾರೆ.

ಒಂದು ಸಲ ಪರವಾನಗಿ ರದ್ದಾದರೆ ಕ್ವಾರಿ ಮಾಲೀಕರು ಮತ್ತೆ ಇಲ್ಲಿ ಕೆಲಸ ಪ್ರಾರಂಭಿಸಲು ಸಾಧ್ಯವಿಲ್ಲ ಹೆದರುತ್ತಾರೆ. ಸುತ್ತಲಿರುವ 47 ಹಳ್ಳಿಗಳ ಜನರು ಭಯದಿಂದಲೇ ಜೀವನ ಮಾಡುತ್ತಿದ್ದಾರೆ. ಶೀಘ್ರವೇ ಅವರ ಭಯವೆಲ್ಲಾ ದೂರವಾಗಲಿದೆ ಎಂದು ತಿಳಿಸಿದ್ದಾರೆ.

English summary
One of the senior officials working with Mines and Geology Department has revealed that the cancellation of licenses of the quarrying around Bannerughatta National Park was under process and a heavy fine will also be slapped. Though an official order is yet to come out in the public domain, the news has been welcomed by the activists who were constantly highlighting the issue of the denudation of the topography near the park.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X