ಕೈಲಾಶ್ ಬಾರ್ ಅಗ್ನಿ ಅವಘಡ: ಬಾರ್ ಮ್ಯಾನೇಜರ್ ನಾಪತ್ತೆ
ಬೆಂಗಳೂರು, ಜನವರಿ ೦8: ಕೃಷ್ಣರಾಜ ಮಾರುಕಟ್ಟೆ (ಕೆ.ಆರ್ ಮಾರುಕಟ್ಟೆ) ಸಮೀಪದ ಕೈಲಾಶ್ ಬಾರ್ ಅಂಡ್ ರೆಸ್ಟೋರೆಂಟ್ ನಲ್ಲಿ ಸೋಮವಾರ ಮುಂಜಾನೆ ಅಗ್ನಿ ಅವಘಡ ಸಂಭವಿಸಿದೆ. ಘಟನೆ ಬಳಿಕ ಬಾರ್ ಮ್ಯಾನೇಜರ್ ನಾಪತ್ತೆಯಾಗಿದ್ದಾರೆ.
ಈ ದುರ್ಘಟನೆಯಲ್ಲಿ ಬಾರ್ ನಲ್ಲಿ ಕೆಲಸ ಮಾಡುವ ಐವರು ಸಿಬ್ಬಂದಿ ಬೆಂಕಿಗೆ ಆಹುತಿಯಾಗಿರುವ ಘಟನೆ ನಡೆದಿದೆ. ರಾಜಾಜಿನಗರದ ನಿವಾಸಿಯಾಗಿರುವ ಸೋಮಶೇಖರ್ ಎನ್ನುವವರು ಬಾರ್ ನಡೆಸುತ್ತಿದ್ದರು. ದಯಾಶಂಕರ್ ಎನ್ನುವವರು ಬಾರ್ ಪರವಾನಗಿಯನ್ನು ಪಡೆದಿದ್ದರು. ದಯಾಶಂಕರ್ ಅವರಿಗೆ ಅನಾರೋಗ್ಯದ ಕಾರಣ ಬಾರ್ ಕಡೆಗೆ ಬರುತ್ತಿರಲಿಲ್ಲ. ಹತ್ತು ವರ್ಷದಿಂದ ಸೋಮಶೇಖರ್ ಅವರು ಬಾರ್ ನ ಮೇಲುಸ್ತುವಾರಿ ನೋಡಿಕೊಳ್ಳುತ್ತಿದ್ದರು ಎನ್ನುವ ಮಾಹಿತಿ ಲಭ್ಯವಾಗಿದೆ.
ಬಾರ್ ಮಾಲೀಕರಿಗೆ ಮಾನವೀಯತೆ ಇಲ್ಲ, ಐವರು ಸಾವಿಗೀಡಾಗಿದ್ದರೂ ಮಾಲೀಕರು ಬಾರ್ ಕಡೆಗೆ ಬಂದಿಲ್ಲ, ಮ್ಯಾನೇಜರ್ ಆಗಿರುವ ಸೋಮಶೇಖರ್ ಕೂಡ ಆ ಕಡೆಗೆ ಧಾವಿಸಿಲ್ಲ. ಮೃತರ ಪೋಷಕರು ಕರೆ ಮಾಡಿ ವಿಚಾರಿಸಿದಾಗ ಇನ್ನು ಹತ್ತುಗಂಟೆಯ ಒಳಗೆ ಬರುವುದಾಗಿ ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ.

ಹೀಗಾಗಿ ಪೋಷಕರು ದಯಾಶಂಕರ್ ಹಾಗೂ ಸೋಮಶೇಖರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಾರ್ ಮಾಲೀಕರ ನಿರ್ಲಕ್ಷ್ಯವೇ ಈ ಘಟನೆಗೆ ಕಾರಣ, ಅವರೇ ನೇರ ಹೊಣೆ ಮೃತರ ಕುಟುಂಬಕ್ಕೆ ಪರಿಹಾರ ನೀಡಲೇ ಬೇಕು, ಮೃತರ ಕುಟುಂಬ ಬೀದಿಗೆ ಬರುತ್ತದೆ. ಇಲ್ಲವಾದಲ್ಲಿ ಕಾನೂನು ಹೋರಾಟ ಕೈಗೊಳ್ಳುವುದುದಾಗಿ ಮೃತರ ಸಂಬಂಧಿಗಳು ತಿಳಿಸಿದ್ದಾರೆ. ಬಾರ್ ಮಾಲೀಕರು ಹಾಗೂ ಮ್ಯಾನೇಜರ್ ವಿರುದ್ಧ ಮೃತರ ಸಂಬಂಧಿಗಳು ಕಲಾಸಿಪಾಳ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

-
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
ಐಪಿಎಲ್ 2026 ಅಂಕಪಟ್ಟಿ: ರಾಜಸ್ಥಾನ್ ರಾಯಲ್ಸ್ ನಂಬರ್ 1, ಎರಡನೇ ಸ್ಥಾನದಲ್ಲಿ ಅಬ್ಬರಿಸುತ್ತಿರುವ ಆರ್ಸಿಬಿ! -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ











Click it and Unblock the Notifications